Homeಮುಖಪುಟಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

ಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

- Advertisement -
- Advertisement -

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಬೃಹತ್ ಹಗರಣ ಬಯಲಾಗುತ್ತಿದ್ದಂತೆ, ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಿಜೆಪಿ ಅನುಸರಿಸುತ್ತಿರುವ ರಾಜಕೀಯದ ಮಾದರಿಯನ್ನು ಗಮನಿಸಿದರೆ, ಚುನಾವಣಾ ಬಾಂಡ್ ಹಗರಣ ತನ್ನಗಾಗಿಸಲು ಸಿಎಎ ಅನುಷ್ಠಾನ ಮಾಡಲಾಗಿದೆ ಎಂದ ಗಮನಿಸಬಹುದು ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ ಇದಾಗಿದೆ ಎಂದು ರಾಮ್ ಪುನಿಯಾನಿ ದಿ ವೈರ್‌ನಲ್ಲಿ ಬರೆದ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕೈಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ನಂತರ ಭಾರತದಲ್ಲಿ ಸಿಎಎ ಮುನ್ನೆಲೆಗೆ ಬಂದಿದೆ. ಜನರಲ್ಲಿ ತಮ್ಮ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಕೇಳಲಾಯಿತು. ಅಸ್ಸಾಂನಲ್ಲಿ 15 ಮಿಲಿಯನ್ ಬಾಂಗ್ಲಾದೇಶಿ ಮುಸ್ಲಿಮರು ನುಸುಳಿದ್ದಾರೆ ಮತ್ತು ಈ ಕ್ರಮವು ಅವರನ್ನು ಹೊರಹಾಕಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗಿತ್ತು. ಅವರನ್ನು ಗೆದ್ದಲುಗಳು ಎಂದು ಕರೆಯಲಾಯ್ತು, ಬಂಧನ ಕೇಂದ್ರಗಳಲ್ಲಿಡಲಾಯತು. ಈಗ ಅಸ್ಸಾಂ NRCಯ ಫಲಿತಾಂಶಗಳು ಆಶ್ಚರ್ಯಕರವಾಗಿವೆ. ಸರಿಯಾದ ದಾಖಲೆಗಳಿಲ್ಲದ ಸುಮಾರು 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಎನ್ನುವುದು ಗಮನಾರ್ಹವಾಗಿದೆ.

ಸಿಎಎ ಪ್ರಕಾರ, ಡಿಸೆಂಬರ್ 2014ರ ಮೊದಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರಿಗೆ ಪೌರತ್ವ ನೀಡಬೇಕಾಗಿತ್ತು. ಕುತೂಹಲಕಾರಿಯಾಗಿ, ಮುಸ್ಲಿಮರನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ. ಇದು ದೇಶದಾದ್ಯಂತ ಬಲವಾದ ಪ್ರತಿಭಟನೆಗಳಿಗೆ ಕಾರಣವಾಯಿತು ಮತ್ತು ವಿಶೇಷವಾಗಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ (AMU) ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪ್ರತಿಭಟನೆಗಳನ್ನು ಕ್ರೂರವಾಗಿ ಹತ್ತಿಕ್ಕಲಾಗಿತ್ತು. ಇದು ಹೊಸದಿಲ್ಲಿಯ ಶಾಹೀನ್ ಬಾಗ್‌ನಲ್ಲಿ ಸ್ವತಂತ್ರ ಭಾರತದ ಅತಿದೊಡ್ಡ ಜನಾಂದೋಲನಕ್ಕೆ ಕಾರಣವಾಯಿತು. ಈ ಪ್ರತಿಭಟನೆಗಳು ದೇಶದಾದ್ಯಂತ ಮುಸ್ಲಿಂ ಮಹಿಳೆಯರ ನೇತೃತ್ವದಲ್ಲಿ ನಡೆದವು. ಕೈಯಲ್ಲಿ ಸಂವಿಧಾನ ಮತ್ತು ಹೃದಯದಲ್ಲಿ ಗಾಂಧಿಯನ್ನು ಇಟ್ಟುಕೊಂಡು ಪ್ರತಿಭಟನೆಗಳು ನಡೆದಿದ್ದವು. ಆ ಸಮಯದಲ್ಲಿ ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಈ ಪ್ರತಿಭಟನೆಗಳು ಹಿಂದೂಗಳಿಗೆ ಬೆದರಿಕೆಯಾಗಿದ್ದು, ಪ್ರತಿಭಟನಾಕಾರರು ಅವರನ್ನು ಅತ್ಯಾಚಾರ ಮಾಡಿ ಕೊಲ್ಲಬಹುದು ಎಂದು ಹೇಳಿದ್ದರು. ಮತ್ತೊಬ್ಬ ಬಿಜೆಪಿ ನಾಯಕ ಕಪಿಲ್ ಶರ್ಮಾ, ಪ್ರತಿಭಟನಾಕಾರರನ್ನು ಪೊಲೀಸರು ತೆರವುಗೊಳಿಸದಿದ್ದರೆ ಅವರೇ ಅದನ್ನು ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆಲ್ಲ ಕಡಿವಾಣ ಹಾಕಲು ಆಗಿನ ರಾಜ್ಯ ಸಚಿವ ಔನ್ರಾಗ್ ಠಾಕೂರ್ ‘ಗೋಲಿ ಮಾರೋ’ ಎಂಬ ಘೋಷಣೆಯನ್ನು ನೀಡಿದರು. ಶೀಘ್ರದಲ್ಲೇ ರಾಜಧಾನಿಯಲ್ಲಿ ದಂಗೆಗಳು ನಡೆದವು – 51 ಜನರು ಪ್ರಾಣ ಕಳೆದುಕೊಂಡರು ಅದರಲ್ಲಿ 38 ಮಂದಿ ಮುಸ್ಲಿಮರಾಗಿದ್ದರು. ಇದು ಮುಸ್ಲಿಮರ ವಿರುದ್ಧ ಪ್ರಚೋದಿಸಲು ಸಿಎಎಯನ್ನು ಆಯುಧವಾಗಿ ಬಳಸಿಕೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ.

ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಜನರಿಗೆ ಆಶ್ರಯ ನೀಡುವ ಮಾನದಂಡಗಳು ಯಾವುವು? ಇಂದಿರಾ ಜೈಸಿಂಗ್ ಅವರು ಗಮನಸೆಳೆದಿದ್ದಾರೆ; ಸಂವಿಧಾನವು ಯಾವುದೇ ಧರ್ಮವನ್ನು ಲೆಕ್ಕಿಸದೆ ಹುಟ್ಟು, ವಂಶಸ್ಥರು ಮತ್ತು ವಲಸೆಯ ಮೂಲಕ ಪೌರತ್ವವನ್ನು ನೀಡುತ್ತದೆ, ಪೌರತ್ವದ ಕಾಯಿದೆ -1955ರ ಕಾಯಿದೆಯು ಪೌರತ್ವವನ್ನು ನೀಡಲು ಧರ್ಮವನ್ನು ಮಾನದಂಡವನ್ನಾಗಿ ಮಾಡುವುದಿಲ್ಲ ಎಂದು ಹೇಳುತ್ತದೆ. ಆದರೆ ತಿದ್ದುಪಡಿ ನಿಯಮ ಕೇವಲ ಧರ್ಮದ ಆಧಾರದ ಮೇಲೆ ನೈಸರ್ಗಿಕೀಕರಣದ ಮೂಲಕ ಪೌರತ್ವವನ್ನು ನೀಡುತ್ತದೆ. ಈ ತಿದ್ದುಪಡಿಯು ಆರ್ಟಿಕಲ್ 14 ನ್ನು ಉಲ್ಲಂಘಿಸುತ್ತದೆ, ಆರ್ಟಿಕಲ್ 14 ಧರ್ಮವನ್ನು ಲೆಕ್ಕಿಸದೆ ಕಾನೂನಿನ ಮುಂದೆ ಸಮಾನತೆ ಮತ್ತು ಸಮಾನ ರಕ್ಷಣೆಯನ್ನು ಖಾತ್ರಿಗೊಳಿಸುತ್ತದೆ. ಆರ್ಟಿಕಲ್ 14 ಎಲ್ಲ ವ್ಯಕ್ತಿಗಳಿಗೂ ಅನ್ವಯಿಸುತ್ತದೆ. CAA ಮುಸ್ಲಿಮರಿಗೆ ತ್ವರಿತ ಪೌರತ್ವವನ್ನು ನಿರಾಕರಿಸುತ್ತದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶವನ್ನು ಹೊರತುಪಡಿಸಿ ಇತರ ದೇಶಗಳ ಜನರನ್ನು ಹೊರಗಿಡುತ್ತದೆ. ಪಾಕಿಸ್ತಾನದಲ್ಲಿರುವ ಅಹ್ಮದೀಯ ಮುಸ್ಲಿಮರು ಅತ್ಯಂತ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಲ್ಲಿ ಒಬ್ಬರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ, ಆದರೆ ಧಾರ್ಮಿಕ ಮಾನದಂಡಗಳ ಕಾರಣದಿಂದಾಗಿ ಸಿಎಎ ಮೂಲಕ ಅವರಿಗೆ ಪೌರತ್ವವನ್ನು ನಿರಾಕರಿಸಲಾಗಿದೆ.

ನೆರೆಯ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ತ್ವರಿತ ಪೌರತ್ವವನ್ನು ಒದಗಿಸಲು CAAನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ. ಆದರೂ, ಕಾಯಿದೆಯ ಕಾನೂನು ಅಥವಾ ನಿಯಮಗಳು ಕಿರುಕುಳವನ್ನು ಉಲ್ಲೇಖಿಸುವುದಿಲ್ಲ ಮತ್ತು ಪೌರತ್ವವನ್ನು ನೀಡುವ ಮೊದಲು ಕಿರುಕುಳದ ಪುರಾವೆ ಅಗತ್ಯವಿಲ್ಲ ಎಂದು ಹೇಳುತ್ತಿದೆ. CAA ನಿಯಮಗಳ ಅಡಿಯಲ್ಲಿ, ಮೂರು ದೇಶಗಳ ವಲಸಿಗರು ತಮ್ಮ ಧರ್ಮ, ಭಾರತೀಯ ಪ್ರವೇಶ ದಿನಾಂಕ ಮತ್ತು ಮೂಲದ ದೇಶ ಮತ್ತು ಭಾರತೀಯ ಭಾಷೆಯ ಜ್ಞಾನವನ್ನು ಮಾತ್ರ ಸಾಬೀತುಪಡಿಸಬೇಕು. ಮೂಲದ ದೇಶದ ಪುರಾವೆಗೆ ಸಂಬಂಧಿಸಿದ ನಿಯಮಗಳನ್ನು ಗಣನೀಯವಾಗಿ ಸಡಿಲಿಸಲಾಗಿದೆ. ಭಾರತದಿಂದ ಮಾನ್ಯವಾದ ವಸತಿ ಪರವಾನಗಿ ಮತ್ತು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನೀಡಿದ ಮಾನ್ಯವಾದ ಪಾಸ್‌ಪೋರ್ಟ್‌ನ ಹಿಂದಿನ ಅಗತ್ಯವನ್ನು ತೆಗೆದುಹಾಕಲಾಗಿದೆ. ಕಿರುಕುಳದ ಪುರಾವೆಯನ್ನು ಕೇಳಲಾಗಿಲ್ಲ ಎನ್ನವುದು ಗಮನಾರ್ಹ.

ಈ ದೇಶಗಳಲ್ಲಿರುವ ಹಿಂದೂಗಳು ಮಾತ್ರ ಭಾರತಕ್ಕೆ ಬರಬಹುದು ಮತ್ತು ಮುಸ್ಲಿಮರು ಇಸ್ಲಾಂ ಧರ್ಮವನ್ನು ಅನುಸರಿಸುವ ಯಾವುದೇ ದೇಶಕ್ಕೆ ಹೋಗಬಹುದು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ಈ ತರ್ಕವು ದೋಷಪೂರಿತವಾಗಿದೆ. ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಸಮುದಾಯಗಳನ್ನು ಹೊರತುಪಡಿಸಿ, ಅಹ್ಮದೀಯರು ಮತ್ತು ಕಡಿಯಾನಿಗಳು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಶೋಷಣೆಗೆ ಒಳಗಾದ ಸಮುದಾಯಗಳಿಗೆ ನಾವು ಆಶ್ರಯ ನೀಡುವ ಬಗ್ಗೆ ಮಾತನಾಡುವಾಗ ನಮ್ಮ ಮಾನವೀಯ ಮೌಲ್ಯಗಳು ಮುನ್ನೆಲೆಗೆ ಬರಬೇಕು. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಿರುಕುಳಕ್ಕೊಳಗಾದ ಗುಂಪುಗಳು ಶ್ರೀಲಂಕಾದಲ್ಲಿ ಹಿಂದೂಗಳು (ತಮಿಳರು) ಮತ್ತು ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳು. ಭಾರತದಲ್ಲಿ ಪೌರತ್ವ ನೀಡುವವರ ಪಟ್ಟಿಯಿಂದ ಅವರನ್ನು ಏಕೆ ಕೈಬಿಡಲಾಗಿದೆ? ಇದು ಭಾರತದಲ್ಲಿನ ಮುಸ್ಲಿಂ ಸಮುದಾಯದ ವಿರುದ್ಧ ಬಳಸಲಿರುವ ಮತ್ತೊಂದು ಸಾಧನವಾಗಿದೆ. ಮುಸ್ಲಿಂ ಸಮುದಾಯದ ವಿರುದ್ಧ ಭಾರತದಲ್ಲಿ ವ್ಯಾಪಕವಾದ ದ್ವೇಷ ಹಿಂಸೆಯಂತಹ ಘಟನೆಗಳು ನಾವು ಕಂಡಿದ್ದೇವೆ. ಬಿಜೆಪಿ ತನ್ನ ಚುನಾವಣಾ ಶಕ್ತಿಯನ್ನು ಬಲಪಡಿಸಲು ಭಾವನಾತ್ಮಕ ಮತ್ತು ವಿಭಜಕ ವಿಷಯಗಳನ್ನು ನಿರಂತರವಾಗಿ ಮುನ್ನೆಲೆಗೆ ತಂದಿದೆ. ಅದರ ಒಂದು ಭಾಗವೇ CAA ಎನ್ನುವುದು ಗೌಪ್ಯವಾಗಿ ಉಳಿದಿಲ್ಲ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...