Homeಮುಖಪುಟಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

ಸಿಎಎ: ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ!

- Advertisement -
- Advertisement -

ಚುನಾವಣಾ ಬಾಂಡ್‌ಗಳಿಗೆ ಸಂಬಂಧಿಸಿದ ಬೃಹತ್ ಹಗರಣ ಬಯಲಾಗುತ್ತಿದ್ದಂತೆ, ನಾಲ್ಕು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಬಿಜೆಪಿ ಅನುಸರಿಸುತ್ತಿರುವ ರಾಜಕೀಯದ ಮಾದರಿಯನ್ನು ಗಮನಿಸಿದರೆ, ಚುನಾವಣಾ ಬಾಂಡ್ ಹಗರಣ ತನ್ನಗಾಗಿಸಲು ಸಿಎಎ ಅನುಷ್ಠಾನ ಮಾಡಲಾಗಿದೆ ಎಂದ ಗಮನಿಸಬಹುದು ಮತ್ತು ಮುಸ್ಲಿಂ ಸಮುದಾಯದ ವಿರುದ್ಧದ ಬಿಜೆಪಿಯ ಇನ್ನೊಂದು ಆಯುಧ ಇದಾಗಿದೆ ಎಂದು ರಾಮ್ ಪುನಿಯಾನಿ ದಿ ವೈರ್‌ನಲ್ಲಿ ಬರೆದ ಲೇಖನದಲ್ಲಿ ಉಲ್ಲೇಖಿಸಿದ್ದಾರೆ.

ಅಸ್ಸಾಂನಲ್ಲಿ ಕೈಗೊಂಡ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ನಂತರ ಭಾರತದಲ್ಲಿ ಸಿಎಎ ಮುನ್ನೆಲೆಗೆ ಬಂದಿದೆ. ಜನರಲ್ಲಿ ತಮ್ಮ ಪೌರತ್ವಕ್ಕೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಕೇಳಲಾಯಿತು. ಅಸ್ಸಾಂನಲ್ಲಿ 15 ಮಿಲಿಯನ್ ಬಾಂಗ್ಲಾದೇಶಿ ಮುಸ್ಲಿಮರು ನುಸುಳಿದ್ದಾರೆ ಮತ್ತು ಈ ಕ್ರಮವು ಅವರನ್ನು ಹೊರಹಾಕಲು ಸರ್ಕಾರಕ್ಕೆ ಸಹಾಯ ಮಾಡುತ್ತದೆ ಎಂದು ಹೇಳಲಾಗಿತ್ತು. ಅವರನ್ನು ಗೆದ್ದಲುಗಳು ಎಂದು ಕರೆಯಲಾಯ್ತು, ಬಂಧನ ಕೇಂದ್ರಗಳಲ್ಲಿಡಲಾಯತು. ಈಗ ಅಸ್ಸಾಂ NRCಯ ಫಲಿತಾಂಶಗಳು ಆಶ್ಚರ್ಯಕರವಾಗಿವೆ. ಸರಿಯಾದ ದಾಖಲೆಗಳಿಲ್ಲದ ಸುಮಾರು 19 ಲಕ್ಷ ಜನರಲ್ಲಿ 7 ಲಕ್ಷ ಮುಸ್ಲಿಮರು ಎನ್ನುವುದು ಗಮನಾರ್ಹವಾಗಿದೆ.

ಸಿಎಎ ಪ್ರಕಾರ, ಡಿಸೆಂಬರ್ 2014ರ ಮೊದಲು ಅಫ್ಘಾನಿಸ್ತಾನ, ಪಾಕಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬಂದ ಹಿಂದೂಗಳು, ಕ್ರಿಶ್ಚಿಯನ್ನರು, ಸಿಖ್ಖರು, ಬೌದ್ಧರು ಮತ್ತು ಜೈನರಿಗೆ ಪೌರತ್ವ ನೀಡಬೇಕಾಗಿತ್ತು. ಕುತೂಹಲಕಾರಿಯಾಗಿ, ಮುಸ್ಲಿಮರನ್ನು ಈ ಪಟ್ಟಿಯಿಂದ ಹೊರಗಿಡಲಾಗಿದೆ. ಇದು ದೇಶದಾದ್ಯಂತ ಬಲವಾದ ಪ್ರತಿಭಟನೆಗಳಿಗೆ ಕಾರಣವಾಯಿತು ಮತ್ತು ವಿಶೇಷವಾಗಿ ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯ (AMU) ಮತ್ತು ಜಾಮಿಯಾ ಮಿಲಿಯಾ ಇಸ್ಲಾಮಿಯಾದಲ್ಲಿ ಪ್ರತಿಭಟನೆಗಳನ್ನು ಕ್ರೂರವಾಗಿ ಹತ್ತಿಕ್ಕಲಾಗಿತ್ತು. ಇದು ಹೊಸದಿಲ್ಲಿಯ ಶಾಹೀನ್ ಬಾಗ್‌ನಲ್ಲಿ ಸ್ವತಂತ್ರ ಭಾರತದ ಅತಿದೊಡ್ಡ ಜನಾಂದೋಲನಕ್ಕೆ ಕಾರಣವಾಯಿತು. ಈ ಪ್ರತಿಭಟನೆಗಳು ದೇಶದಾದ್ಯಂತ ಮುಸ್ಲಿಂ ಮಹಿಳೆಯರ ನೇತೃತ್ವದಲ್ಲಿ ನಡೆದವು. ಕೈಯಲ್ಲಿ ಸಂವಿಧಾನ ಮತ್ತು ಹೃದಯದಲ್ಲಿ ಗಾಂಧಿಯನ್ನು ಇಟ್ಟುಕೊಂಡು ಪ್ರತಿಭಟನೆಗಳು ನಡೆದಿದ್ದವು. ಆ ಸಮಯದಲ್ಲಿ ಬಿಜೆಪಿಯ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ, ಈ ಪ್ರತಿಭಟನೆಗಳು ಹಿಂದೂಗಳಿಗೆ ಬೆದರಿಕೆಯಾಗಿದ್ದು, ಪ್ರತಿಭಟನಾಕಾರರು ಅವರನ್ನು ಅತ್ಯಾಚಾರ ಮಾಡಿ ಕೊಲ್ಲಬಹುದು ಎಂದು ಹೇಳಿದ್ದರು. ಮತ್ತೊಬ್ಬ ಬಿಜೆಪಿ ನಾಯಕ ಕಪಿಲ್ ಶರ್ಮಾ, ಪ್ರತಿಭಟನಾಕಾರರನ್ನು ಪೊಲೀಸರು ತೆರವುಗೊಳಿಸದಿದ್ದರೆ ಅವರೇ ಅದನ್ನು ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆಲ್ಲ ಕಡಿವಾಣ ಹಾಕಲು ಆಗಿನ ರಾಜ್ಯ ಸಚಿವ ಔನ್ರಾಗ್ ಠಾಕೂರ್ ‘ಗೋಲಿ ಮಾರೋ’ ಎಂಬ ಘೋಷಣೆಯನ್ನು ನೀಡಿದರು. ಶೀಘ್ರದಲ್ಲೇ ರಾಜಧಾನಿಯಲ್ಲಿ ದಂಗೆಗಳು ನಡೆದವು – 51 ಜನರು ಪ್ರಾಣ ಕಳೆದುಕೊಂಡರು ಅದರಲ್ಲಿ 38 ಮಂದಿ ಮುಸ್ಲಿಮರಾಗಿದ್ದರು. ಇದು ಮುಸ್ಲಿಮರ ವಿರುದ್ಧ ಪ್ರಚೋದಿಸಲು ಸಿಎಎಯನ್ನು ಆಯುಧವಾಗಿ ಬಳಸಿಕೊಂಡಿರುವುದನ್ನು ಸ್ಪಷ್ಟಪಡಿಸುತ್ತದೆ.

ನೆರೆಯ ದೇಶಗಳಿಂದ ಕಿರುಕುಳಕ್ಕೊಳಗಾದ ಜನರಿಗೆ ಆಶ್ರಯ ನೀಡುವ ಮಾನದಂಡಗಳು ಯಾವುವು? ಇಂದಿರಾ ಜೈಸಿಂಗ್ ಅವರು ಗಮನಸೆಳೆದಿದ್ದಾರೆ; ಸಂವಿಧಾನವು ಯಾವುದೇ ಧರ್ಮವನ್ನು ಲೆಕ್ಕಿಸದೆ ಹುಟ್ಟು, ವಂಶಸ್ಥರು ಮತ್ತು ವಲಸೆಯ ಮೂಲಕ ಪೌರತ್ವವನ್ನು ನೀಡುತ್ತದೆ, ಪೌರತ್ವದ ಕಾಯಿದೆ -1955ರ ಕಾಯಿದೆಯು ಪೌರತ್ವವನ್ನು ನೀಡಲು ಧರ್ಮವನ್ನು ಮಾನದಂಡವನ್ನಾಗಿ ಮಾಡುವುದಿಲ್ಲ ಎಂದು ಹೇಳುತ್ತದೆ. ಆದರೆ ತಿದ್ದುಪಡಿ ನಿಯಮ ಕೇವಲ ಧರ್ಮದ ಆಧಾರದ ಮೇಲೆ ನೈಸರ್ಗಿಕೀಕರಣದ ಮೂಲಕ ಪೌರತ್ವವನ್ನು ನೀಡುತ್ತದೆ. ಈ ತಿದ್ದುಪಡಿಯು ಆರ್ಟಿಕಲ್ 14 ನ್ನು ಉಲ್ಲಂಘಿಸುತ್ತದೆ, ಆರ್ಟಿಕಲ್ 14 ಧರ್ಮವನ್ನು ಲೆಕ್ಕಿಸದೆ ಕಾನೂನಿನ ಮುಂದೆ ಸಮಾನತೆ ಮತ್ತು ಸಮಾನ ರಕ್ಷಣೆಯನ್ನು ಖಾತ್ರಿಗೊಳಿಸುತ್ತದೆ. ಆರ್ಟಿಕಲ್ 14 ಎಲ್ಲ ವ್ಯಕ್ತಿಗಳಿಗೂ ಅನ್ವಯಿಸುತ್ತದೆ. CAA ಮುಸ್ಲಿಮರಿಗೆ ತ್ವರಿತ ಪೌರತ್ವವನ್ನು ನಿರಾಕರಿಸುತ್ತದೆ. ಇದು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶವನ್ನು ಹೊರತುಪಡಿಸಿ ಇತರ ದೇಶಗಳ ಜನರನ್ನು ಹೊರಗಿಡುತ್ತದೆ. ಪಾಕಿಸ್ತಾನದಲ್ಲಿರುವ ಅಹ್ಮದೀಯ ಮುಸ್ಲಿಮರು ಅತ್ಯಂತ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಲ್ಲಿ ಒಬ್ಬರು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ, ಆದರೆ ಧಾರ್ಮಿಕ ಮಾನದಂಡಗಳ ಕಾರಣದಿಂದಾಗಿ ಸಿಎಎ ಮೂಲಕ ಅವರಿಗೆ ಪೌರತ್ವವನ್ನು ನಿರಾಕರಿಸಲಾಗಿದೆ.

ನೆರೆಯ ದೇಶಗಳಲ್ಲಿ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಿಗೆ ತ್ವರಿತ ಪೌರತ್ವವನ್ನು ಒದಗಿಸಲು CAAನ್ನು ಜಾರಿಗೊಳಿಸಲಾಗಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ. ಆದರೂ, ಕಾಯಿದೆಯ ಕಾನೂನು ಅಥವಾ ನಿಯಮಗಳು ಕಿರುಕುಳವನ್ನು ಉಲ್ಲೇಖಿಸುವುದಿಲ್ಲ ಮತ್ತು ಪೌರತ್ವವನ್ನು ನೀಡುವ ಮೊದಲು ಕಿರುಕುಳದ ಪುರಾವೆ ಅಗತ್ಯವಿಲ್ಲ ಎಂದು ಹೇಳುತ್ತಿದೆ. CAA ನಿಯಮಗಳ ಅಡಿಯಲ್ಲಿ, ಮೂರು ದೇಶಗಳ ವಲಸಿಗರು ತಮ್ಮ ಧರ್ಮ, ಭಾರತೀಯ ಪ್ರವೇಶ ದಿನಾಂಕ ಮತ್ತು ಮೂಲದ ದೇಶ ಮತ್ತು ಭಾರತೀಯ ಭಾಷೆಯ ಜ್ಞಾನವನ್ನು ಮಾತ್ರ ಸಾಬೀತುಪಡಿಸಬೇಕು. ಮೂಲದ ದೇಶದ ಪುರಾವೆಗೆ ಸಂಬಂಧಿಸಿದ ನಿಯಮಗಳನ್ನು ಗಣನೀಯವಾಗಿ ಸಡಿಲಿಸಲಾಗಿದೆ. ಭಾರತದಿಂದ ಮಾನ್ಯವಾದ ವಸತಿ ಪರವಾನಗಿ ಮತ್ತು ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನೀಡಿದ ಮಾನ್ಯವಾದ ಪಾಸ್‌ಪೋರ್ಟ್‌ನ ಹಿಂದಿನ ಅಗತ್ಯವನ್ನು ತೆಗೆದುಹಾಕಲಾಗಿದೆ. ಕಿರುಕುಳದ ಪುರಾವೆಯನ್ನು ಕೇಳಲಾಗಿಲ್ಲ ಎನ್ನವುದು ಗಮನಾರ್ಹ.

ಈ ದೇಶಗಳಲ್ಲಿರುವ ಹಿಂದೂಗಳು ಮಾತ್ರ ಭಾರತಕ್ಕೆ ಬರಬಹುದು ಮತ್ತು ಮುಸ್ಲಿಮರು ಇಸ್ಲಾಂ ಧರ್ಮವನ್ನು ಅನುಸರಿಸುವ ಯಾವುದೇ ದೇಶಕ್ಕೆ ಹೋಗಬಹುದು ಎಂದು ಕೇಂದ್ರ ಸರ್ಕಾರ ಪ್ರತಿಪಾದಿಸಿದೆ. ಈ ತರ್ಕವು ದೋಷಪೂರಿತವಾಗಿದೆ. ಪಾಕಿಸ್ತಾನದಲ್ಲಿ ಹಿಂದೂಗಳು ಮತ್ತು ಕ್ರಿಶ್ಚಿಯನ್ನರಂತಹ ಅಲ್ಪಸಂಖ್ಯಾತ ಸಮುದಾಯಗಳನ್ನು ಹೊರತುಪಡಿಸಿ, ಅಹ್ಮದೀಯರು ಮತ್ತು ಕಡಿಯಾನಿಗಳು ಕಿರುಕುಳವನ್ನು ಎದುರಿಸುತ್ತಿದ್ದಾರೆ ಎಂದು ಎಲ್ಲರಿಗೂ ತಿಳಿದಿದೆ. ಶೋಷಣೆಗೆ ಒಳಗಾದ ಸಮುದಾಯಗಳಿಗೆ ನಾವು ಆಶ್ರಯ ನೀಡುವ ಬಗ್ಗೆ ಮಾತನಾಡುವಾಗ ನಮ್ಮ ಮಾನವೀಯ ಮೌಲ್ಯಗಳು ಮುನ್ನೆಲೆಗೆ ಬರಬೇಕು. ಇದಲ್ಲದೆ, ಇತ್ತೀಚಿನ ದಿನಗಳಲ್ಲಿ ಅತಿ ದೊಡ್ಡ ಕಿರುಕುಳಕ್ಕೊಳಗಾದ ಗುಂಪುಗಳು ಶ್ರೀಲಂಕಾದಲ್ಲಿ ಹಿಂದೂಗಳು (ತಮಿಳರು) ಮತ್ತು ಮ್ಯಾನ್ಮಾರ್‌ನಲ್ಲಿ ರೋಹಿಂಗ್ಯಾಗಳು. ಭಾರತದಲ್ಲಿ ಪೌರತ್ವ ನೀಡುವವರ ಪಟ್ಟಿಯಿಂದ ಅವರನ್ನು ಏಕೆ ಕೈಬಿಡಲಾಗಿದೆ? ಇದು ಭಾರತದಲ್ಲಿನ ಮುಸ್ಲಿಂ ಸಮುದಾಯದ ವಿರುದ್ಧ ಬಳಸಲಿರುವ ಮತ್ತೊಂದು ಸಾಧನವಾಗಿದೆ. ಮುಸ್ಲಿಂ ಸಮುದಾಯದ ವಿರುದ್ಧ ಭಾರತದಲ್ಲಿ ವ್ಯಾಪಕವಾದ ದ್ವೇಷ ಹಿಂಸೆಯಂತಹ ಘಟನೆಗಳು ನಾವು ಕಂಡಿದ್ದೇವೆ. ಬಿಜೆಪಿ ತನ್ನ ಚುನಾವಣಾ ಶಕ್ತಿಯನ್ನು ಬಲಪಡಿಸಲು ಭಾವನಾತ್ಮಕ ಮತ್ತು ವಿಭಜಕ ವಿಷಯಗಳನ್ನು ನಿರಂತರವಾಗಿ ಮುನ್ನೆಲೆಗೆ ತಂದಿದೆ. ಅದರ ಒಂದು ಭಾಗವೇ CAA ಎನ್ನುವುದು ಗೌಪ್ಯವಾಗಿ ಉಳಿದಿಲ್ಲ.

ಇದನ್ನು ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದ ಪ್ರಕಾಶ್ ಅಂಬೇಡ್ಕರ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...