HomeಚಳವಳಿCAA ವಿರೋಧಿ ಪ್ರತಿಭಟನೆಯಲ್ಲಿ ಭಾಗಿ: ಅಪ್ರಾಪ್ತನಿಗೆ 11 ತಿಂಗಳ ನಂತರ ಜಾಮೀನು!

CAA ವಿರೋಧಿ ಪ್ರತಿಭಟನೆಯಲ್ಲಿ ಭಾಗಿ: ಅಪ್ರಾಪ್ತನಿಗೆ 11 ತಿಂಗಳ ನಂತರ ಜಾಮೀನು!

ಯುಪಿ ಪೊಲೀಸರು ಗಲಭೆಯ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ಬಂಧಿಸಿದ್ದರು. ಬಂಧನಕ್ಕೆ ಪೊಲೀಸರ ಮೇಲೆ ಭಾರಿ ಒತ್ತಡವಿತ್ತು ಹಾಗೂ ರಾಜ್ಯ ಸರ್ಕಾರವನ್ನು ತೃಪ್ತಿಪಡಿಸುವುದಕ್ಕಾಗಿ ಪೊಲೀಸರು ಯಾದೃಚ್ಛಿಕ ಬಂಧನಗಳನ್ನು ಮಾಡಿದ್ದಾರೆ ಎಂದು ಬಾಲಕನ ಪರವಾಗಿ ವಾದಿಸಿದ ವಕೀಲೆ ಹೇಳಿದ್ದಾರೆ

- Advertisement -
- Advertisement -

ಸಿಎಎ ವಿರೋಧಿ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಉತ್ತರ ಪ್ರದೇಶದ ಠಾಕುರ್‌ಗಂಜ್ ನಿವಾಸಿಯಾಗಿರುವ 16 ವರ್ಷದ ಅಪ್ರಾಪ್ತ ಬಾಲಕನನ್ನು 11 ತಿಂಗಳ ನಂತರ ಇತ್ತೀಚೆಗೆ ಬಿಡುಗಡೆಗೊಳಿಸಲಾಗಿದೆ ಎಂದ ದಿವೈರ್‌ ವರದಿ ಮಾಡಿದೆ.

ಕಳೆದ ಡಿಸೆಂಬರ್ 25 ರಂದು ಸ್ನೇಹಿತನೊಬ್ಬರ ಮನೆಯಿಂದ ಬಾಲಕನನ್ನು ಬಂಧಿಸಲಾಗಿದ್ದು, 10 ತಿಂಗಳ ಕಾಲ ಬಾಲಾಪರಾಧಿಗಳ ಕೇಂದ್ರಕ್ಕೆ ಕಳುಹಿಸಲಾಗಿತ್ತು ಎಂದು ದಿ ವೈರ್ ಹೇಳಿದೆ. ಡಿಸೆಂಬರ್ 19 ರಂದು ಪೊಲೀಸರು ದಾಖಲಿಸಿದ್ದ ಎಫ್‍ಐಆರ್‌ನಲ್ಲಿ 25 ಮಂದಿಯ ಹೆಸರುಗಳಲ್ಲಿ ಬಾಲಕನ ಹೆಸರನ್ನು ಕೂಡಾ ಸೇರಿಸಲಾಗಿತ್ತು. ಆದರೆ ತಾನು ಯಾವುದೇ ಪ್ರತಿಭಟನೆಯಲ್ಲೂ ಭಾಗಿಯಾಗಿಲ್ಲ ಎಂದಿರುವ ಬಾಲಕ, ಬಂಧನದ ಸಮಯದಲ್ಲಿ ಹೆತ್ತವರಿಗೆ ಕರೆ ಮಾಡಲು ಕೂಡ ಅನುಮತಿಯನ್ನು ನೀಡಿಲ್ಲ ಹಾಗೂ ಬಂಧನದ ಮಾಹಿತಿಯನ್ನೂ ಕುಟುಂಬಕ್ಕೆ ನೀಡಿರಲಿಲ್ಲ ಎಂದು ಆರೋಪಿಸಿದ್ದಾನೆ.

ಇದನ್ನೂ ಓದಿ: ಸಿಎಎ ಶೀಘ್ರವೇ ಜಾರಿ; ಕೊರೊನಾ ಕಾರಣದಿಂದ ವಿಳಂಬವಾಗಿತ್ತು: ಜೆ.ಪಿ.ನಡ್ಡಾ

ಠಾಕೂರ್‌ಗಂಜ್ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್‌ಪೆಕ್ಟರ್ ಕೈಲಾಶ್ ನಾರಾಯಣ್ ತ್ರಿವೇದಿ ಸಲ್ಲಿಸಿದ ಎಫ್‌ಐಆರ್‌ನಲ್ಲಿ, ಭಾರತೀಯ ದಂಡ ಸಂಹಿತೆಯ 14 ಸೆಕ್ಷನ್‌ಗಳ ಅಡಿಯಲ್ಲಿ ಬಾಲಕನ ಮೇಲೆ ಆರೋಪ ಹೊರಿಸಲಾಗಿದೆ. ಬಾಲಕನಿಗೆ ನವೆಂಬರ್ 13 ರಂದು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

ಈ ಪ್ರಕರಣದ ಮೊದಲ ಜಾಮೀನು ಅರ್ಜಿಯನ್ನು ಬಾಲಕನನ್ನು ಬಂಧಿಸಿ ಎಂಟು ತಿಂಗಳ ನಂತರ ಸೆಪ್ಟೆಂಬರ್ 15 ರಂದು ಬಾಲಾಪರಾಧಿ ನ್ಯಾಯಾಲಯದಲ್ಲಿ ಸಲ್ಲಿಸಲಾಗಿತ್ತು. ಆದರೆ ಬಾಲಕನನ್ನು ಬಿಡುಗಡೆ ಗೊಳಿಸಿದರೆ ಸಮಾಜಕ್ಕೆ “ಬೆದರಿಕೆ” ಒಡ್ಡಬಹುದು ಎಂಬ ಕಾರಣಕ್ಕೆ ವಜಾಗೊಳಿಸಲಾಗಿತ್ತು. ಇದರ ನಂತರ ಸೆಪ್ಟೆಂಬರ್ 29 ರಂದು ಸಲ್ಲಿಸಿದ ಅರ್ಜಿಯನ್ನು ಮನ್ನಿಸಿದ ಸೆಶನ್ಸ್ ನ್ಯಾಯಾಲಯ ಬಾಲಕನಿಗೆ ಜಾಮೀನು ನೀಡಿದೆ.

ಬಾಲಕನ ಪರವಾಗಿ ವಾದಿಸಿದ ನ್ಯಾಯವಾದಿ ಆಶ್ಮಾ ಇಝ್ಝತ್‌, “ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಸಿಎಎ ವಿರೋಧಿ ಪ್ರತಿಭಟನೆಯ ಸಂದರ್ಭದಲ್ಲಿ ಯುಪಿ ಪೊಲೀಸರು ಗಲಭೆಯ ಹೆಸರಿನಲ್ಲಿ ಮುಸ್ಲಿಂ ಯುವಕರನ್ನು ಗುರಿಯಾಗಿಸಿ ಬಂಧಿಸಿದ್ದರು. ಬಂಧನಕ್ಕೆ ಪೊಲೀಸರ ಮೇಲೆ ಭಾರಿ ಒತ್ತಡವಿತ್ತು. ರಾಜ್ಯ ಸರ್ಕಾರವನ್ನು ತೃಪ್ತಿಪಡಿಸುವುದಕ್ಕಾಗಿ ಪೊಲೀಸರು ಯಾದೃಚ್ಛಿಕ ಬಂಧನಗಳನ್ನು ಮಾಡಿದರು. ಐದು ದಿನಗಳ ಕಾಲ ಲಕ್ನೋದಲ್ಲಿ ಮುಸ್ಲಿಮರನ್ನು ನಿರಂತರವಾಗಿ ಬಂಧಿಸಲಾಯಿತು” ಎಂದಿದ್ದಾರೆಂದು ವೈರ್‌ ಬರೆದಿದೆ.

ಇದನ್ನೂ ಓದಿ: ಮಂಗಳೂರು: ಸಿಎಎ ವಿರೋಧಿ ಪ್ರತಿಭಟನಾಕಾರರಿಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...