Homeಮುಖಪುಟಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

ಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

- Advertisement -
- Advertisement -

ಭಾರತದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕಾನೂನಾಗಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಪ್ರಮುಖ ನಿಬಂಧನೆಗಳು ಭಾರತದ ಸಂವಿಧಾನದ ಕೆಲವು ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಯುಎಸ್ ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವು ಬಿಡುಗಡೆ ಮಾಡಿದ ವರದಿ ಹೇಳಿದೆ.

ಭಾರತದಲ್ಲಿ 1955ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಿದ್ದುಪಡಿ ಮಾಡುವ CAA, ಈ ವರ್ಷ ಮಾರ್ಚ್‌ನಲ್ಲಿ ಜಾರಿಗೆ ಬಂದಿದೆ. CAAಯ ಪ್ರಮುಖ ನಿಬಂಧನೆಗಳು, ಮುಸ್ಲಿಮರನ್ನು ಹೊರತುಪಡಿಸಿ ಮೂರು ದೇಶಗಳಿಂದ ಆಗಮಿಸಿದ ಆರು ಧರ್ಮಗಳ ವಲಸಿಗರಿಗೆ ಪೌರತ್ವ ಪಡೆಯುವ ಹಾದಿಯನ್ನು ಸುಗಮಗೊಳಿಸಿದೆ. ಈ ಕಾಯ್ದೆಯು ಭಾರತದ ಸಂವಿಧಾನದ ಕೆಲವು ವಿಧಿಗಳನ್ನು ಉಲ್ಲಂಘಿಸಬಹುದು ಎಂದು ‘ಕಾಂಗ್ರೆಷನಲ್ ರಿಸರ್ಚ್ ಸರ್ವಿಸ್’ (CRS)ತನ್ನ ಸಂಕ್ಷಿಪ್ತ ವರದಿಯಲ್ಲಿ ತಿಳಿಸಿದೆ.

CRS ಎಂಬುವುದು US ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವಾಗಿದ್ದು, ಅದು ಯುಎಸ್‌ ಕಾಂಗ್ರೆಸ್ ಸದಸ್ಯರಿಗೆ ಆಸಕ್ತಿದಾಯಕ ವಿಷಯಗಳ ಕುರಿತು ವರದಿಗಳನ್ನು ಸಿದ್ಧಪಡಿಸುತ್ತದೆ.

ಭಾರತ ಸರ್ಕಾರವು ಯೋಜಿಸಿರುವ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜೊತೆಗೆ, CAA ಸುಮಾರು 200 ಮಿಲಿಯನ್ ಭಾರತದ ದೊಡ್ಡ ಅಲ್ಪಸಂಖ್ಯಾತರಾದ ಮುಸ್ಲಿಮರ ಹಕ್ಕುಗಳಿಗೆ ಬೆದರಿಕೆ ಹಾಕಬಹುದು ಎಂದು ಮೂರು ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್‌ನ ಕೆಲವು ಸದಸ್ಯರು ‘118ನೇ ಕಾಂಗ್ರೆಸ್‌’ನ ಸಭೆಯಲ್ಲಿ ಈ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ, ಹೌಸ್ ರೆಸಲ್ಯೂಶನ್ 542ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಖಂಡಿಸುತ್ತದೆ ಮತ್ತು ಸೆನೆಟ್ ನಿರ್ಣಯ 424ರಲ್ಲಿ ಈ ಕುರಿತ ಹಿಂಸೆಗೆ ತ್ವರಿತ ಅಂತ್ಯವನ್ನು ಬಯಸುತ್ತದೆ ಮತ್ತು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧದ ಹಿಂಸಾಚಾರಕ್ಕೆ ವಿರಾಮ ಹಾಕಬೇಕು ಮತ್ತು ಸಿಎಎಯಂತಹ ತಾರತಮ್ಯಯುತ ಕಾನೂನುಗಳನ್ನು ತಿದ್ದುಪಡಿ ಮಾಡಲು ಭಾರತವನ್ನು ಒತ್ತಾಯಿಸುತ್ತದೆ ಎಂದು ವರದಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹಿಂದೂ ರಾಷ್ಟ್ರೀಯವಾದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂದೂ ಬಹುಸಂಖ್ಯಾತ, ಮುಸ್ಲಿಂ ವಿರೋಧಿ ಅಜೆಂಡಾವನ್ನು ಅನುಸರಿಸುತ್ತಿದೆ ಎಂದು ಕಾಯ್ದೆಯ ವಿರೋಧಿಗಳು ಎಚ್ಚರಿಸಿದ್ದಾರೆ. ಇದು ಅಧಿಕೃತವಾಗಿ ಜಾತ್ಯತೀತ ಗಣರಾಜ್ಯವಾಗಿ ಭಾರತದ ಸ್ಥಾನಮಾನಕ್ಕೆ ಬೆದರಿಕೆ ಹಾಕುತ್ತದೆ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ನಿಯಮಗಳು ಮತ್ತು ಕಟ್ಟುಪಾಡುಗಳನ್ನು ಉಲ್ಲಂಘಿಸುತ್ತದೆ ಎಂದು ವರದಿ ಹೇಳಿದೆ.

ಈ ಮಧ್ಯೆ ಪಶ್ಚಿಮ ಬಂಗಾಳದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಎಯನ್ನು ಸಮರ್ಥಿಸಿಕೊಂಡಿದ್ದು, ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿಎಎ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಉದ್ದೇಶಿಸಿಲ್ಲ, ಆದರೆ  ಇದು ಧರ್ಮದ ಆಧಾರದ ಮೇಲೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಸ್ಥಳಾಂತರಗೊಂಡ ಜನರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಪೌರತ್ವ ಕಾಯಿದೆ- 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

ಇದನ್ನು ಓದಿ: ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...