Homeಮುಖಪುಟಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

ಸಿಎಎ ನಿಬಂಧನೆಗಳು ಭಾರತೀಯ ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುತ್ತದೆ: ಯುಎಸ್ ಕಾಂಗ್ರೆಸ್ ವರದಿ

- Advertisement -
- Advertisement -

ಭಾರತದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಕಾನೂನಾಗಿ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯ ಪ್ರಮುಖ ನಿಬಂಧನೆಗಳು ಭಾರತದ ಸಂವಿಧಾನದ ಕೆಲವು ನಿಬಂಧನೆಗಳನ್ನು ಉಲ್ಲಂಘಿಸುತ್ತದೆ ಎಂದು ಯುಎಸ್ ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವು ಬಿಡುಗಡೆ ಮಾಡಿದ ವರದಿ ಹೇಳಿದೆ.

ಭಾರತದಲ್ಲಿ 1955ರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಿದ್ದುಪಡಿ ಮಾಡುವ CAA, ಈ ವರ್ಷ ಮಾರ್ಚ್‌ನಲ್ಲಿ ಜಾರಿಗೆ ಬಂದಿದೆ. CAAಯ ಪ್ರಮುಖ ನಿಬಂಧನೆಗಳು, ಮುಸ್ಲಿಮರನ್ನು ಹೊರತುಪಡಿಸಿ ಮೂರು ದೇಶಗಳಿಂದ ಆಗಮಿಸಿದ ಆರು ಧರ್ಮಗಳ ವಲಸಿಗರಿಗೆ ಪೌರತ್ವ ಪಡೆಯುವ ಹಾದಿಯನ್ನು ಸುಗಮಗೊಳಿಸಿದೆ. ಈ ಕಾಯ್ದೆಯು ಭಾರತದ ಸಂವಿಧಾನದ ಕೆಲವು ವಿಧಿಗಳನ್ನು ಉಲ್ಲಂಘಿಸಬಹುದು ಎಂದು ‘ಕಾಂಗ್ರೆಷನಲ್ ರಿಸರ್ಚ್ ಸರ್ವಿಸ್’ (CRS)ತನ್ನ ಸಂಕ್ಷಿಪ್ತ ವರದಿಯಲ್ಲಿ ತಿಳಿಸಿದೆ.

CRS ಎಂಬುವುದು US ಕಾಂಗ್ರೆಸ್‌ನ ಸ್ವತಂತ್ರ ಸಂಶೋಧನಾ ವಿಭಾಗವಾಗಿದ್ದು, ಅದು ಯುಎಸ್‌ ಕಾಂಗ್ರೆಸ್ ಸದಸ್ಯರಿಗೆ ಆಸಕ್ತಿದಾಯಕ ವಿಷಯಗಳ ಕುರಿತು ವರದಿಗಳನ್ನು ಸಿದ್ಧಪಡಿಸುತ್ತದೆ.

ಭಾರತ ಸರ್ಕಾರವು ಯೋಜಿಸಿರುವ ರಾಷ್ಟ್ರೀಯ ನಾಗರಿಕರ ನೋಂದಣಿ (NRC) ಜೊತೆಗೆ, CAA ಸುಮಾರು 200 ಮಿಲಿಯನ್ ಭಾರತದ ದೊಡ್ಡ ಅಲ್ಪಸಂಖ್ಯಾತರಾದ ಮುಸ್ಲಿಮರ ಹಕ್ಕುಗಳಿಗೆ ಬೆದರಿಕೆ ಹಾಕಬಹುದು ಎಂದು ಮೂರು ಪುಟಗಳ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಕಾಂಗ್ರೆಸ್‌ನ ಕೆಲವು ಸದಸ್ಯರು ‘118ನೇ ಕಾಂಗ್ರೆಸ್‌’ನ ಸಭೆಯಲ್ಲಿ ಈ ಬಗ್ಗೆ ಕಳವಳಗಳನ್ನು ವ್ಯಕ್ತಪಡಿಸಿದ್ದಾರೆ, ಹೌಸ್ ರೆಸಲ್ಯೂಶನ್ 542ರಲ್ಲಿ ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಮತ್ತು ಅಂತರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಗಳನ್ನು ಖಂಡಿಸುತ್ತದೆ ಮತ್ತು ಸೆನೆಟ್ ನಿರ್ಣಯ 424ರಲ್ಲಿ ಈ ಕುರಿತ ಹಿಂಸೆಗೆ ತ್ವರಿತ ಅಂತ್ಯವನ್ನು ಬಯಸುತ್ತದೆ ಮತ್ತು ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರ ವಿರುದ್ಧದ ಹಿಂಸಾಚಾರಕ್ಕೆ ವಿರಾಮ ಹಾಕಬೇಕು ಮತ್ತು ಸಿಎಎಯಂತಹ ತಾರತಮ್ಯಯುತ ಕಾನೂನುಗಳನ್ನು ತಿದ್ದುಪಡಿ ಮಾಡಲು ಭಾರತವನ್ನು ಒತ್ತಾಯಿಸುತ್ತದೆ ಎಂದು ವರದಿ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಹಿಂದೂ ರಾಷ್ಟ್ರೀಯವಾದಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಿಂದೂ ಬಹುಸಂಖ್ಯಾತ, ಮುಸ್ಲಿಂ ವಿರೋಧಿ ಅಜೆಂಡಾವನ್ನು ಅನುಸರಿಸುತ್ತಿದೆ ಎಂದು ಕಾಯ್ದೆಯ ವಿರೋಧಿಗಳು ಎಚ್ಚರಿಸಿದ್ದಾರೆ. ಇದು ಅಧಿಕೃತವಾಗಿ ಜಾತ್ಯತೀತ ಗಣರಾಜ್ಯವಾಗಿ ಭಾರತದ ಸ್ಥಾನಮಾನಕ್ಕೆ ಬೆದರಿಕೆ ಹಾಕುತ್ತದೆ ಮತ್ತು ಅಂತರಾಷ್ಟ್ರೀಯ ಮಾನವ ಹಕ್ಕುಗಳ ನಿಯಮಗಳು ಮತ್ತು ಕಟ್ಟುಪಾಡುಗಳನ್ನು ಉಲ್ಲಂಘಿಸುತ್ತದೆ ಎಂದು ವರದಿ ಹೇಳಿದೆ.

ಈ ಮಧ್ಯೆ ಪಶ್ಚಿಮ ಬಂಗಾಳದ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಎಎಯನ್ನು ಸಮರ್ಥಿಸಿಕೊಂಡಿದ್ದು, ಸಿಎಎ ಅನುಷ್ಠಾನವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಸಿಎಎ ಯಾರೊಬ್ಬರ ಪೌರತ್ವವನ್ನು ಕಸಿದುಕೊಳ್ಳಲು ಉದ್ದೇಶಿಸಿಲ್ಲ, ಆದರೆ  ಇದು ಧರ್ಮದ ಆಧಾರದ ಮೇಲೆ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ಸ್ಥಳಾಂತರಗೊಂಡ ಜನರಿಗೆ ಭಾರತೀಯ ಪೌರತ್ವವನ್ನು ನೀಡುತ್ತದೆ ಎಂದು ಹೇಳಿದ್ದಾರೆ.

ಪೌರತ್ವ ಕಾಯಿದೆ- 1955 ಏನು ಹೇಳುತ್ತದೆ?

ಪೌರತ್ವ ಕಾಯಿದೆ, 1955ರ ಪ್ರಕಾರ ಭಾರತದಲ್ಲಿ ಐದು ವಿಧಾನಗಳ ಮೂಲಕ ಪೌರತ್ವವನ್ನು ಪಡೆಯಬಹುದು. ಪೌರತ್ವವನ್ನು ಹುಟ್ಟಿನಿಂದ, ಭಾರತೀಯ ಮೂಲದವರಾಗಿದ್ದು ಹೊರದೇಶಗಳಲ್ಲಿ ನೆಲೆಸಿದ್ದರೆ, ವಿದೇಶದವರಾಗಿದ್ದರೂ ಭಾರತದಲ್ಲಿ ಸರ್ಕಾರಿ ಸೇವೆಯಲ್ಲಿದ್ದರೆ, ಭಾರತ ಮೂಲದವರಾಗಿದ್ದು ಭಾರತದಲ್ಲಿ ಈಗಾಗಲೇ ವಾಸ್ತವ್ಯ ಹೂಡಿದ್ದರೆ ಅಥವಾ ಭಾರತದೊಳಗೆ ಸೇರಿಸಿಕೊಳ್ಳಲಾದ ಅನ್ಯದೇಶದ ಭೂಭಾಗದ ನಿವಾಸಿಯಾಗಿದ್ದರೆ, ಅಸ್ಸಾಂ ಒಪ್ಪಂದಕ್ಕೆ ಸೇರಿದ ಜನರಿಗೆ ಪೌರತ್ವ ಅವಕಾಶವನ್ನು ನೀಡಲಾಗಿತ್ತು, ಈ ಕಾಯಿದೆಯು ವಿದೇಶಿ ಅಕ್ರಮ ವಲಸಿಗರು ಭಾರತೀಯ ಪೌರತ್ವವನ್ನು ಪಡೆದುಕೊಳ್ಳುವುದನ್ನು ನಿಷೇಧಿಸಿದೆ. ಇದಲ್ಲದೆ 1955ರ ಕಾಯ್ದೆಯ ಪ್ರಕಾರ ಪೌರತ್ವವನ್ನು ಪಡೆಯಬೇಕಿದ್ದರೆ ಆತ ಭಾರತದಲ್ಲಿ ಕನಿಷ್ಠ 11ವರ್ಷ ವಾಸಿಸಿರಬೇಕು.

ಪೌರತ್ವ (ತಿದ್ದುಪಡಿ) ಮಸೂದೆ-2019

ಈ ಕಾಯ್ದೆಯಡಿಯಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಥವಾ ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಮುಸ್ಲಿಮೇತರರು ಅಂದರೆ ಹಿಂದೂ, ಸಿಖ್, ಬೌದ್ಧ, ಜೈನ್, ಪಾರ್ಸಿ ಅಥವಾ ಕ್ರಿಶ್ಚಿಯನ್ ಧಾರ್ಮಿಕ ಸಮುದಾಯಗಳಿಗೆ ಸೇರಿದ ಅಕ್ರಮ ವಲಸಿಗರು ಡಿಸೆಂಬರ್ 31, 2014ರಂದು ಅಥವಾ ಅದಕ್ಕೂ ಮೊದಲು ಭಾರತಕ್ಕೆ ಪ್ರವೇಶಿಸಿದರೆ ಅವರಿಗೆ ಪೌರತ್ವವನ್ನು ನೀಡಬಹುದು. ಕಾಯಿದೆಯ ಮೂರನೇ ಶೆಡ್ಯೂಲ್‌ನ ಸೆಕ್ಷನ್ 5 ರ ಅಡಿಯಲ್ಲಿನ ಷರತ್ತುಗಳಿಗೆ ಸಮ್ಮತಿಸಿದರೆ ಒಬ್ಬ ವ್ಯಕ್ತಿಗೆ ನೋಂದಣಿ ಪ್ರಮಾಣಪತ್ರ ನೀಡಬಹುದು. ಇದಲ್ಲದೆ ಆ ವ್ಯಕ್ತಿ ಭಾರತದಲ್ಲಿ ಕಡ್ಡಾಯವಾಗಿ ನೆಲೆಸಿದವನಾಗಿರಬೇಕಾಗಿರುವ ವರ್ಷಗಳ ಸಂಖ್ಯೆಯನ್ನು 11 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿದೆ.

ಇದನ್ನು ಓದಿ: ಬಿಜೆಪಿಗೆ ನಿರ್ಗಮನ ಹಾದಿ ತೋರಿಸುತ್ತೇವೆ: ರಾಂಚಿಯಲ್ಲಿ ಇಂಡಿಯಾ ಮೈತ್ರಿಕೂಟದಿಂದ ಬೃಹತ್‌ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...