Homeಮುಖಪುಟಕೇರಳ, ತಮಿಳುನಾಡಿನಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಸಿಎಂಗಳಿಂದ ಘೋಷಣೆ

ಕೇರಳ, ತಮಿಳುನಾಡಿನಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಸಿಎಂಗಳಿಂದ ಘೋಷಣೆ

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ)ಯನ್ನು ತಮ್ಮ ರಾಜ್ಯಗಳಲ್ಲಿ ಜಾರಿಗೊಳಿಸುವುದಿಲ್ಲ ಎಂದು ಕೇರಳ ಮತ್ತು ತಮಿಳುನಾಡಿನ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ.

ಸಿಎಎ ಸಂಪೂರ್ಣ ಅನಗತ್ಯ ಕಾನೂನು ಎಂದು ಕರೆದಿರುವ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ತಮ್ಮ ರಾಜ್ಯದಲ್ಲಿ ಅದನ್ನು ಜಾರಿಗೊಳಿಸುವುದಿಲ್ಲ ಎಂದಿದ್ದಾರೆ.

“ಸಿಎಎಯಿಂದ ಯಾವುದೇ ಉಪಯೋಗ ಇಲ್ಲ. ಇದು ಭಾರತೀಯರಲ್ಲಿ ಒಡಕು ಮೂಡಿಸಲು ಮಾತ್ರ ದಾರಿ ಮಾಡಿಕೊಡುತ್ತದೆ. ಸಿಎಎ ಸಂಪೂರ್ಣ ಅನಪೇಕ್ಷಿತ ಎಂಬುವುದು ತಮಿಳುನಾಡು ಸರ್ಕಾರದ ನಿಲುವು. ಈ ಕಾನೂನು ರದ್ದುಗೊಳಿಸಬೇಕು” ಎಂದು ಸ್ಟಾಲಿನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

“ಬಹುತ್ವ, ಜಾತ್ಯತೀತತೆ, ಅಲ್ಪಸಂಖ್ಯಾತ ಸಮುದಾಯದವರು ಮತ್ತು ಶ್ರೀಲಂಕಾ ತಮಿಳು ನಿರಾಶ್ರಿತರಿಗೆ ವಿರುದ್ಧವಾದ ಸಿಎಎಯನ್ನು ಜಾರಿಗೆ ತರಲು ತಮಿಳುನಾಡು ಸರ್ಕಾರ ಯಾವುದೇ ಅವಕಾಶ ನೀಡುವುದಿಲ್ಲ” ಎಂದು ಸ್ಟಾಲಿನ್ ಘೋಷಿಸಿದ್ದಾರೆ.

ಕೇರಳದಲ್ಲಿ ಸಿಎಎ ಜಾರಿಗೊಳಿಸುವುದಿಲ್ಲ: ಪಿಣರಾಯಿ ವಿಜಯನ್

ಕೇರಳದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಜಾರಿಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು “ಮುಸ್ಲಿಂ ಅಲ್ಪಸಂಖ್ಯಾತರನ್ನು ಎರಡನೇ ದರ್ಜೆಯ ನಾಗರಿಕರನ್ನಾಗಿ ಪರಿಗಣಿಸುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇರಳದಲ್ಲಿ ಜಾರಿಗೊಳಿಸುವುದಿಲ್ಲ ಎಂದು ಎಲ್‌ಡಿಎಫ್ ಸರ್ಕಾರ ಹಲವಾರು ಬಾರಿ ಹೇಳಿದೆ. ನಾವು ಆ ನಿಲುವನ್ನು ಪುನರುಚ್ಚರಿಸುತ್ತೇವೆ. ಈ ಕೋಮುವಾದ ಮತ್ತು ವಿಭಜಕ ಕಾನೂನನ್ನು ವಿರೋಧಿಸಲು ಕೇರಳ ಒಗ್ಗಟ್ಟಾಗಿ ನಿಲ್ಲುತ್ತದೆ ಹೇಳಿದ್ದಾರೆ.

ಕೇರಳ ಮತ್ತು ತಮಿಳುನಾಡು ಸರ್ಕಾರಗಳು ಸಿಎಎ ಜಾರಿಗೊಳಿಸುವುದಿಲ್ಲ ಎಂದು ಈಗಾಗಲೇ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿವೆ.

ಕೇರಳದಲ್ಲಿ ಆಡಳಿತರೂಡ ಎಲ್‌ಡಿಎಫ್‌ ಮತ್ತು ಪ್ರತಿಪಕ್ಷ ಯುಡಿಎಫ್ ಜಂಟಿಯಾಗಿ ಸಿಎಎ ವಿರುದ್ದ ಹೋರಾಡುವುದಾಗಿ ಘೋಷಿಸಿವೆ. ಈ ಹಿಂದೆಯೂ ಎರಡು ಬಣಗಳು ಒಂದಾಗಿ ಪ್ರತಿಭಟನೆ ನಡೆಸಿತ್ತು.

ತಮಿಳುನಾಡಿನಲ್ಲೂ ಆಡಳಿತರೂಡ ಡಿಎಂಕೆ ಸಿಎಎ ವಿರೋಧಿಸಿದೆ. ಇದಕ್ಕೆ ಪ್ರತಿಪಕ್ಷ ಎಐಡಿಎಂಕೆ ಹಾಗೂ ಇತ್ತೀಚೆಗೆ ಹೊಸ ಪಕ್ಷ ಸ್ಥಾಪಿಸಿದ ನಟ ವಿಜಯ್ ಕೂಡ ಧ್ವನಿಗೂಡಿಸಿದ್ದಾರೆ.

ಇದನ್ನೂ ಓದಿ : CAA: ಕಾನೂನು ಸವಾಲು ಏನಾಯ್ತು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...