Homeಮುಖಪುಟಪೌರತ್ವ ಕಾಯ್ದೆಯೊಳಗಿನ ಹುಳುಕುಗಳು ಮುಂದೆ ಹಿಂದೂಗಳನ್ನೇ ಬಾಧಿಸಲಿವೆ!

ಪೌರತ್ವ ಕಾಯ್ದೆಯೊಳಗಿನ ಹುಳುಕುಗಳು ಮುಂದೆ ಹಿಂದೂಗಳನ್ನೇ ಬಾಧಿಸಲಿವೆ!

- Advertisement -
- Advertisement -
ಪೌರತ್ವ ಪ್ರತಿರೋಧ ವಿಶೇಷ

 

ಕೃಪೆ: ದಿ ಹಿಂದೂ
ಅನುವಾದ: ನಿಖಿಲ್ ಕೋಲ್ಪೆ

ಭಾರತ ಸರಕಾರವು ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯು ರಕ್ಷಿಸಲು ಬಯಸಿರುವ ವಿದೇಶಗಳಲ್ಲಿರುವ ಸಮುದಾಯಗಳ ವಿರುದ್ಧ ಆ ದೇಶಗಳಲ್ಲಿ ಹಿಂಸಾಚಾರವನ್ನು ಭುಗಿಲೆಬ್ಬಿಸಿದರೆ, ಏನಾದೀತು? ಈ ಪ್ರಶ್ನೆಯನ್ನು ಕೇಳಿದ್ದಾರೆ ಕಾಮನ್ವೆಲ್ತ್ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್‍ನ ಅಂತರರಾಷ್ಟ್ರೀಯ ನಿರ್ದೇಶಕ ಸಂಜೊಯ್ ಹಜಾರಿಕಾ.

ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಯು ನೆರೆಯ ಮೂರು ರಾಷ್ಟ್ರಗಳಲ್ಲಿ ‘ದೌರ್ಜನ್ಯ’ಕ್ಕೆ ಒಳಗಾಗಿರುವ, ಆದರೆ ಈ ತನಕ ನಿರಾಶ್ರಿತರೆಂದು ಘೋಷಿಸಲಾಗದಿರುವ ಐದು ಮುಸ್ಲಿಮೇತರ ಸಮುದಾಯಗಳಿಗೆ ಪೌರತ್ವ ನೀಡಲು ಬಯಸುತ್ತದೆ.

‘ನಿರಾಶ್ರಿತ’ ಎಂಬ ಅಭಿದಾನವು ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದಿರುವ ಒಂದು ರಾಜಕೀಯ ಸ್ಥಾನಮಾನವನ್ನು ಜನರಿಗೆ ನೀಡುತ್ತದೆ. ಆದರೆ, ಧಾರ್ಮಿಕ, ರಾಜಕೀಯ, ಭಾಷೆ, ಜನಾಂಗೀಯ ದೌರ್ಜನ್ಯ ಎದುರಿಸುತ್ತಿರುವ ನಿರಾಶ್ರಿತರನ್ನು ರಕ್ಷಿಸುವ ಹೊಣೆಯನ್ನು ಸರಕಾರಗಳಿಗೆ ಕಡ್ಡಾಯಗೊಳಿಸುವ ಜಿನೇವಾ ಒಪ್ಪಂದಕ್ಕೆ ಸಹಿಹಾಕಿದ ದೇಶಗಳಲ್ಲಿ ಭಾರತ ಸೇರಿಲ್ಲ. ದೌರ್ಜನ್ಯದ ಪ್ರಮಾಣವನ್ನು ಹೇಗೆ ನಿರ್ಧಾರ ಮಾಡಲಾಗಿದೆ ಅಥವಾ ಹೇಗೆ ನಿರ್ಧಾರ ಮಾಡಲಾಗುವುದು ಎಂಬ ಬಗ್ಗೆ ಸಿಎಎಯಲ್ಲಿ ಯಾವುದೇ ಸ್ಪಷ್ಟತೆಯಿಲ್ಲ.

ಈ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ಈಶಾನ್ಯದ ನೆರೆಹೊರೆಯ ರಾಜ್ಯಗಳಲ್ಲಿ ಅಂತಹ ಪ್ರಮಾಣದ ಹಿಂಸಾಚಾರ ಏಕೆ ಭುಗಿಲೆದ್ದಿತು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ರಾಷ್ಟ್ರೀಯ ಪೌರತ್ವ ನೋಂದಣಿ (ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್- ಎನ್‍ಆರ್‍ಸಿ)ಯು ಅಸ್ಸಾಂನಲ್ಲಿ 19 ಲಕ್ಷ “ಹೊರಗಿನ” ಜನರನ್ನು “ಗುರುತಿಸಿದರಿಂದ” ಮೊದಲೇ ಅಲ್ಲಿ ಜನರ ಸಿಟ್ಟು ಕುದಿಯುತ್ತಿತ್ತು. ಹೀಗೆ ಗುರುತಿಸಲಾದವರಲ್ಲಿ ಹೆಚ್ಚಿನವರು ಹಿಂದುಗಳಾಗಿದ್ದು, ಮುಸ್ಲಿಮರ, ಸ್ಥಳೀಯ ಆದಿವಾಸಿ ಸಮುದಾಯಗಳು ಮತ್ತು ಗೂರ್ಖಾಗಳು ಸೇರಿದಂತೆ ಇತರ ಸಮುದಾಯಗಳವರ ಸಂಖ್ಯೆ ತೀರಾ ಚಿಕ್ಕದಾಗಿತ್ತು. ಈ “ಬೇಡವಾದವರ” ಪಟ್ಟಿಯನ್ನು ಒಪ್ಪಲು ಸಾಧ್ಯವಿಲ್ಲದ ಬಿಜೆಪಿಯು ರಾಷ್ಟ್ರವ್ಯಾಪಿ ಎನ್‍ಆರ್‍ಸಿಯ ಮೊರೆಹೋಯಿತು.

ಪ್ರಶ್ನೆಯೆಂದರೆ, ಅಸ್ಸಾಮಿನ ಈ ಕಾರ್ಯಾಚರಣೆಗೆ ಖರ್ಚಾದ ಹಣ, ಶ್ರಮ, ಸಮಯ ಒತ್ತಟ್ಟಿಗಿರಲಿ, ಅದು ನಾಗರಿಕರಲ್ಲಿ ಉಂಟುಮಾಡಿದ ಆಳವಾದ ಆತಂಕ, ಅದು ಹುಟ್ಟುಹಾಕಿದ ಹತಾಶೆಯ ವಿಷಯವೇನು? ಅಸ್ಸಾಂ ಸರಕಾರವು ಎನ್‍ಆರ್‍ಸಿಯ ಯಾದಿಯನ್ನು ತಿರಸ್ಕರಿಸಲು ಅಧಿಕೃತವಾಗಿ ಸುಪ್ರೀಂಕೋರ್ಟಿನ ಮುಂದೆ ಬಂದಿಲ್ಲ. ಅದು ಆಗುವತನಕ ಆ ಅಧ್ಯಾಯ ಮುಗಿಯುವುದಿಲ್ಲ. ಈ ಹೊರತುಪಡಿಸುವಿಕೆ ಅಥವಾ ತಿರಸ್ಕಾರವನ್ನು ಪ್ರಶ್ನಿಸುವ ಪ್ರಕ್ರಿಯೆಯನ್ನು ಭಾರತೀಯರು ಸೇರಿದಂತೆ ಈ ಯಾದಿಯಲ್ಲಿರುವ 19 ಲಕ್ಷ ಮಂದಿ ಅನುಭವಿಸಲೇಬೇಕಾಗಿದೆ.

ವಿದೇಶೀಯರ ನ್ಯಾಯಮಂಡಳಿ, ನಂತರ ಹೈಕೋರ್ಟ್, ಆ ಬಳಿಕ ಸುಪ್ರೀಂಕೋರ್ಟಿನ ಮೊರೆಹೋಗುವ ಹಿಂಸೆಯನ್ನು ಈ ಜನರು ಅನುಭವಿಸಬೇಕಾಗಿದೆ. (ಇಂತಹ 100ರಷ್ಟು ನ್ಯಾಯಮಂಡಳಿಗಳು ಅಸ್ತಿತ್ವದಲ್ಲಿದ್ದು, ಇನ್ನೂ 200ನ್ನು ಸ್ಥಾಪಿಸಲಾಗುತ್ತಿದೆ.) ತಮ್ಮ ಪೌರತ್ವವನ್ನು ಸಾಬೀತುಪಡಿಸಲು ವಿದೇಶಿಯರ ನ್ಯಾಯಮಂಡಳಿಯ ಮೊರೆಹೋಗಬೇಕಾದ ಭಾರತೀಯರ ಸ್ಥಿತಿಯನ್ನು ಕಲ್ಪಿಸಿನೋಡಿ.

ಈ ಎನ್‍ಆರ್‍ಸಿಯ ಪರ ಭಾರೀ ಬೊಬ್ಬೆ ಹೊಡೆದವರನ್ನು ಈಗ ಹಿಮ್ಮೆಟ್ಟಿಸಿರುವುದೆಂದರೆ, ಪ್ರತ್ಯೇಕಿಸಲಾಗಿರುವ 19 ಲಕ್ಷ ಜನರಲ್ಲಿ ಬಹುಸಂಖ್ಯಾತರು ಹಿಂದೂಗಳಾಗಿರುವುದು. ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಅವರನ್ನು ವಿದೇಶೀಯರು ಎಂದು ಘೋಷಿಸುವಂತಿಲ್ಲ. ಆದರೆ, ಅವರ ಭವಿಷ್ಯ ಅನಿಶ್ಚಿತವಾಗಿದ್ದು, ಹೆಚ್ಚಿನವರಿಗೆ ಕಾನೂನು ನೆರವು ಪಡೆಯುವ ತಾಕತ್ತೂ ಇಲ್ಲ.

ಈ ಕಾರಣದಿಂದಲೇ ಅಸ್ಸಾಮಿನ ಜನರಲ್ಲಿ ಕೋಪವು ಬೂದಿಮುಚ್ಚಿದ ಕೆಂಡದಂತೆ ಒಳಗೆಯೇ ಉರಿಯುತ್ತಿತ್ತು. ಆದುದರಿಂದ ಅಸ್ಸಾಮಿನ ಆತಂಕಗಳಿಗೆ ಪ್ರತಿಸ್ಪಂದಿಸದ ಇನ್ನೊಂದು ಕಾನೂನು ಬಂದಾಗ ಅದು ಮತ್ತೆ ಸ್ಫೋಟಗೊಂಡಿತು. ಮೇಲಾಗಿ ದಶಕಗಳಿಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫಘಾನಿಸ್ಥಾನಗಳಿಂದ ಕಾನೂನುಬಾಹಿರವಾಗಿ ಒಳನುಸುಳಿರುವವರಿಗೆ ಪೌರತ್ವ ನೀಡಿದರೆ, ಅದು ಅಸ್ಸಾಮಿನ ಜನಸಂಖ್ಯೆಯ ಸ್ವರೂಪವನ್ನೇ ಬದಲಿಸಿಹಾಕಬಹುದು ಎಂಬ ಭಯವೂ ಇದರೊಂದಿಗೆ ಸೇರಿಕೊಂಡಿದೆ.

ಇನ್ನರ್ ಲೈನ್ ಲಿಮಿಟ್ (ಐಎಲ್‍ಪಿ) ಎಂದು ಕರೆಯಲ್ಪಡುವ ವ್ಯವಸ್ಥೆಯ ಅಡಿಯಲ್ಲಿ ಸ್ವಲ್ಪಮಟ್ಟಿನ ರಕ್ಷಣೆ ಒದಗಿಸುವ ಪ್ರಸ್ತಾಪ ಇದೆ. ಆದರೆ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಆರುಣಾಚಲ ಪ್ರದೇಶದಲ್ಲಿ ದಶಕಗಳಿಂದ ಅಸ್ತಿತ್ವದಲ್ಲಿರುವ ಐಎಲ್‍ಪಿ ಪರಿಣಾಮಕಾರಿಯಲ್ಲ ಎಂದು ಅನುಭವವು ತೋರಿಸಿಕೊಟ್ಟಿದೆ.

ಮೇಘಾಲಯ ಮತ್ತು ಮಿಜೋರಾಂನ ಬುಡಕಟ್ಟು ಹಿತಾಸಕ್ತಿಗಳಿಗೆ ಜನಾಂಗೀಯ, ಸಾಂಸ್ಕೃತಿಕ ಮತ್ತು ರಾಜಕೀಯ ಮೀಸಲಾತಿ ಒದಗಿಸುವ ಕಾನೂನಾಗಿರುವ ಐಎಲ್‍ಪಿಯನ್ನು ಸಂವಿಧಾನದ ಆರನೇ ಪರಿಚ್ಛೇದದಲ್ಲಿ ಬರುವ ಪ್ರದೇಶಗಳ ಜೊತೆಗೆ, ಅಸ್ಸಾಂ ಮತ್ತು ತ್ರಿಪುರದ ಆದಿವಾಸಿ ಪ್ರದೇಶಗಳಿಗೆ ಅನ್ವಯಿಸುವ ಮೂಲಕ ಕೇಂದ್ರವು ಹಗ್ಗದ ಮೇಲಿನ ನಡಿಗೆಗೆ ಯತ್ನಿಸಿದೆ. ಆದರೆ, ಸಂವಿಧಾನದ ಆರನೇ ಪರಿಚ್ಛೇದವು ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಣಿಪುರಕ್ಕೆ ಅನ್ವಯಿಸುವುದಿಲ್ಲ. ಪರಿಣಾಮವಾಗಿ ಮೊದಲೇ ಸಂಕೀರ್ಣವಾಗಿದ್ದ ಸಮಸ್ಯೆಯು ಇನ್ನಷ್ಟು ಸವಾಲಿನದ್ದಾಗಿದೆ.

ಪತ್ರಕರ್ತ ಹರ್ಷ ಮಂದಾರ್ ಈ ಪ್ರಶ್ನೆಯನ್ನು ಎತ್ತಿದ್ದಾರೆ: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫಘಾನಿಸ್ಥಾನದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಲಕ್ಷಾಂತರ ಧಾರ್ಮಿಕ ಅಲ್ಪಸಂಖ್ಯಾತರ- ಹಿಂದೂಗಳು ಮತ್ತು ಇತರ ಸಮುದಾಯಗಳ- ಸಮುದಾಯಗಳ ಸಮಸ್ಯೆಯನ್ನು ಸಿಎಎ ಪರಿಹರಿಸಲು ಬಯಸಿದೆ ಎಂದು ಸರಕಾರ ಹೇಳುತ್ತದೆ. ಆದರೆ, ಇದು ಅವರ ವಿರುದ್ಧ ಇನ್ನಷ್ಟು ದೌರ್ಜನ್ಯ ಮತ್ತು ಹಿಂಸಾಚಾರವನ್ನು ಪ್ರಚೋದಿಸದೆ? ಈ “ರಕ್ಷಣೆಯ ಕಂಬಳಿ”ಯನ್ನು ಅವರು ಹೊದ್ದುಕೊಳ್ಳುವುದಾದರೂ ಹೇಗೆ? ವಿಸ್ತೃತವಾದ ದೀರ್ಘಕಾಲೀನ ಮಾತುಕತೆ ಹಾಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಒಳಗೊಳ್ಳುವಿಕೆಯ ತ್ರಿವಳಿ ತತ್ವಗಳಿಗೆ ಒತ್ತು ನೀಡುವುದರಿಂದ, ಕಾಲ ಮೀರಿರುವ ಈ ಸಂದರ್ಭದಲ್ಲಿಯೂ ಸಹಾಯವಾಗಬಹುದು ಎಂಬುದು ಅವರ ಅಭಿಪ್ರಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...