Homeಮುಖಪುಟಪೌರತ್ವ ಕಾಯ್ದೆಯೊಳಗಿನ ಹುಳುಕುಗಳು ಮುಂದೆ ಹಿಂದೂಗಳನ್ನೇ ಬಾಧಿಸಲಿವೆ!

ಪೌರತ್ವ ಕಾಯ್ದೆಯೊಳಗಿನ ಹುಳುಕುಗಳು ಮುಂದೆ ಹಿಂದೂಗಳನ್ನೇ ಬಾಧಿಸಲಿವೆ!

- Advertisement -
- Advertisement -
ಪೌರತ್ವ ಪ್ರತಿರೋಧ ವಿಶೇಷ

 

ಕೃಪೆ: ದಿ ಹಿಂದೂ
ಅನುವಾದ: ನಿಖಿಲ್ ಕೋಲ್ಪೆ

ಭಾರತ ಸರಕಾರವು ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯು ರಕ್ಷಿಸಲು ಬಯಸಿರುವ ವಿದೇಶಗಳಲ್ಲಿರುವ ಸಮುದಾಯಗಳ ವಿರುದ್ಧ ಆ ದೇಶಗಳಲ್ಲಿ ಹಿಂಸಾಚಾರವನ್ನು ಭುಗಿಲೆಬ್ಬಿಸಿದರೆ, ಏನಾದೀತು? ಈ ಪ್ರಶ್ನೆಯನ್ನು ಕೇಳಿದ್ದಾರೆ ಕಾಮನ್ವೆಲ್ತ್ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್‍ನ ಅಂತರರಾಷ್ಟ್ರೀಯ ನಿರ್ದೇಶಕ ಸಂಜೊಯ್ ಹಜಾರಿಕಾ.

ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಯು ನೆರೆಯ ಮೂರು ರಾಷ್ಟ್ರಗಳಲ್ಲಿ ‘ದೌರ್ಜನ್ಯ’ಕ್ಕೆ ಒಳಗಾಗಿರುವ, ಆದರೆ ಈ ತನಕ ನಿರಾಶ್ರಿತರೆಂದು ಘೋಷಿಸಲಾಗದಿರುವ ಐದು ಮುಸ್ಲಿಮೇತರ ಸಮುದಾಯಗಳಿಗೆ ಪೌರತ್ವ ನೀಡಲು ಬಯಸುತ್ತದೆ.

‘ನಿರಾಶ್ರಿತ’ ಎಂಬ ಅಭಿದಾನವು ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದಿರುವ ಒಂದು ರಾಜಕೀಯ ಸ್ಥಾನಮಾನವನ್ನು ಜನರಿಗೆ ನೀಡುತ್ತದೆ. ಆದರೆ, ಧಾರ್ಮಿಕ, ರಾಜಕೀಯ, ಭಾಷೆ, ಜನಾಂಗೀಯ ದೌರ್ಜನ್ಯ ಎದುರಿಸುತ್ತಿರುವ ನಿರಾಶ್ರಿತರನ್ನು ರಕ್ಷಿಸುವ ಹೊಣೆಯನ್ನು ಸರಕಾರಗಳಿಗೆ ಕಡ್ಡಾಯಗೊಳಿಸುವ ಜಿನೇವಾ ಒಪ್ಪಂದಕ್ಕೆ ಸಹಿಹಾಕಿದ ದೇಶಗಳಲ್ಲಿ ಭಾರತ ಸೇರಿಲ್ಲ. ದೌರ್ಜನ್ಯದ ಪ್ರಮಾಣವನ್ನು ಹೇಗೆ ನಿರ್ಧಾರ ಮಾಡಲಾಗಿದೆ ಅಥವಾ ಹೇಗೆ ನಿರ್ಧಾರ ಮಾಡಲಾಗುವುದು ಎಂಬ ಬಗ್ಗೆ ಸಿಎಎಯಲ್ಲಿ ಯಾವುದೇ ಸ್ಪಷ್ಟತೆಯಿಲ್ಲ.

ಈ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ಈಶಾನ್ಯದ ನೆರೆಹೊರೆಯ ರಾಜ್ಯಗಳಲ್ಲಿ ಅಂತಹ ಪ್ರಮಾಣದ ಹಿಂಸಾಚಾರ ಏಕೆ ಭುಗಿಲೆದ್ದಿತು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ರಾಷ್ಟ್ರೀಯ ಪೌರತ್ವ ನೋಂದಣಿ (ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್- ಎನ್‍ಆರ್‍ಸಿ)ಯು ಅಸ್ಸಾಂನಲ್ಲಿ 19 ಲಕ್ಷ “ಹೊರಗಿನ” ಜನರನ್ನು “ಗುರುತಿಸಿದರಿಂದ” ಮೊದಲೇ ಅಲ್ಲಿ ಜನರ ಸಿಟ್ಟು ಕುದಿಯುತ್ತಿತ್ತು. ಹೀಗೆ ಗುರುತಿಸಲಾದವರಲ್ಲಿ ಹೆಚ್ಚಿನವರು ಹಿಂದುಗಳಾಗಿದ್ದು, ಮುಸ್ಲಿಮರ, ಸ್ಥಳೀಯ ಆದಿವಾಸಿ ಸಮುದಾಯಗಳು ಮತ್ತು ಗೂರ್ಖಾಗಳು ಸೇರಿದಂತೆ ಇತರ ಸಮುದಾಯಗಳವರ ಸಂಖ್ಯೆ ತೀರಾ ಚಿಕ್ಕದಾಗಿತ್ತು. ಈ “ಬೇಡವಾದವರ” ಪಟ್ಟಿಯನ್ನು ಒಪ್ಪಲು ಸಾಧ್ಯವಿಲ್ಲದ ಬಿಜೆಪಿಯು ರಾಷ್ಟ್ರವ್ಯಾಪಿ ಎನ್‍ಆರ್‍ಸಿಯ ಮೊರೆಹೋಯಿತು.

ಪ್ರಶ್ನೆಯೆಂದರೆ, ಅಸ್ಸಾಮಿನ ಈ ಕಾರ್ಯಾಚರಣೆಗೆ ಖರ್ಚಾದ ಹಣ, ಶ್ರಮ, ಸಮಯ ಒತ್ತಟ್ಟಿಗಿರಲಿ, ಅದು ನಾಗರಿಕರಲ್ಲಿ ಉಂಟುಮಾಡಿದ ಆಳವಾದ ಆತಂಕ, ಅದು ಹುಟ್ಟುಹಾಕಿದ ಹತಾಶೆಯ ವಿಷಯವೇನು? ಅಸ್ಸಾಂ ಸರಕಾರವು ಎನ್‍ಆರ್‍ಸಿಯ ಯಾದಿಯನ್ನು ತಿರಸ್ಕರಿಸಲು ಅಧಿಕೃತವಾಗಿ ಸುಪ್ರೀಂಕೋರ್ಟಿನ ಮುಂದೆ ಬಂದಿಲ್ಲ. ಅದು ಆಗುವತನಕ ಆ ಅಧ್ಯಾಯ ಮುಗಿಯುವುದಿಲ್ಲ. ಈ ಹೊರತುಪಡಿಸುವಿಕೆ ಅಥವಾ ತಿರಸ್ಕಾರವನ್ನು ಪ್ರಶ್ನಿಸುವ ಪ್ರಕ್ರಿಯೆಯನ್ನು ಭಾರತೀಯರು ಸೇರಿದಂತೆ ಈ ಯಾದಿಯಲ್ಲಿರುವ 19 ಲಕ್ಷ ಮಂದಿ ಅನುಭವಿಸಲೇಬೇಕಾಗಿದೆ.

ವಿದೇಶೀಯರ ನ್ಯಾಯಮಂಡಳಿ, ನಂತರ ಹೈಕೋರ್ಟ್, ಆ ಬಳಿಕ ಸುಪ್ರೀಂಕೋರ್ಟಿನ ಮೊರೆಹೋಗುವ ಹಿಂಸೆಯನ್ನು ಈ ಜನರು ಅನುಭವಿಸಬೇಕಾಗಿದೆ. (ಇಂತಹ 100ರಷ್ಟು ನ್ಯಾಯಮಂಡಳಿಗಳು ಅಸ್ತಿತ್ವದಲ್ಲಿದ್ದು, ಇನ್ನೂ 200ನ್ನು ಸ್ಥಾಪಿಸಲಾಗುತ್ತಿದೆ.) ತಮ್ಮ ಪೌರತ್ವವನ್ನು ಸಾಬೀತುಪಡಿಸಲು ವಿದೇಶಿಯರ ನ್ಯಾಯಮಂಡಳಿಯ ಮೊರೆಹೋಗಬೇಕಾದ ಭಾರತೀಯರ ಸ್ಥಿತಿಯನ್ನು ಕಲ್ಪಿಸಿನೋಡಿ.

ಈ ಎನ್‍ಆರ್‍ಸಿಯ ಪರ ಭಾರೀ ಬೊಬ್ಬೆ ಹೊಡೆದವರನ್ನು ಈಗ ಹಿಮ್ಮೆಟ್ಟಿಸಿರುವುದೆಂದರೆ, ಪ್ರತ್ಯೇಕಿಸಲಾಗಿರುವ 19 ಲಕ್ಷ ಜನರಲ್ಲಿ ಬಹುಸಂಖ್ಯಾತರು ಹಿಂದೂಗಳಾಗಿರುವುದು. ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಅವರನ್ನು ವಿದೇಶೀಯರು ಎಂದು ಘೋಷಿಸುವಂತಿಲ್ಲ. ಆದರೆ, ಅವರ ಭವಿಷ್ಯ ಅನಿಶ್ಚಿತವಾಗಿದ್ದು, ಹೆಚ್ಚಿನವರಿಗೆ ಕಾನೂನು ನೆರವು ಪಡೆಯುವ ತಾಕತ್ತೂ ಇಲ್ಲ.

ಈ ಕಾರಣದಿಂದಲೇ ಅಸ್ಸಾಮಿನ ಜನರಲ್ಲಿ ಕೋಪವು ಬೂದಿಮುಚ್ಚಿದ ಕೆಂಡದಂತೆ ಒಳಗೆಯೇ ಉರಿಯುತ್ತಿತ್ತು. ಆದುದರಿಂದ ಅಸ್ಸಾಮಿನ ಆತಂಕಗಳಿಗೆ ಪ್ರತಿಸ್ಪಂದಿಸದ ಇನ್ನೊಂದು ಕಾನೂನು ಬಂದಾಗ ಅದು ಮತ್ತೆ ಸ್ಫೋಟಗೊಂಡಿತು. ಮೇಲಾಗಿ ದಶಕಗಳಿಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫಘಾನಿಸ್ಥಾನಗಳಿಂದ ಕಾನೂನುಬಾಹಿರವಾಗಿ ಒಳನುಸುಳಿರುವವರಿಗೆ ಪೌರತ್ವ ನೀಡಿದರೆ, ಅದು ಅಸ್ಸಾಮಿನ ಜನಸಂಖ್ಯೆಯ ಸ್ವರೂಪವನ್ನೇ ಬದಲಿಸಿಹಾಕಬಹುದು ಎಂಬ ಭಯವೂ ಇದರೊಂದಿಗೆ ಸೇರಿಕೊಂಡಿದೆ.

ಇನ್ನರ್ ಲೈನ್ ಲಿಮಿಟ್ (ಐಎಲ್‍ಪಿ) ಎಂದು ಕರೆಯಲ್ಪಡುವ ವ್ಯವಸ್ಥೆಯ ಅಡಿಯಲ್ಲಿ ಸ್ವಲ್ಪಮಟ್ಟಿನ ರಕ್ಷಣೆ ಒದಗಿಸುವ ಪ್ರಸ್ತಾಪ ಇದೆ. ಆದರೆ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಆರುಣಾಚಲ ಪ್ರದೇಶದಲ್ಲಿ ದಶಕಗಳಿಂದ ಅಸ್ತಿತ್ವದಲ್ಲಿರುವ ಐಎಲ್‍ಪಿ ಪರಿಣಾಮಕಾರಿಯಲ್ಲ ಎಂದು ಅನುಭವವು ತೋರಿಸಿಕೊಟ್ಟಿದೆ.

ಮೇಘಾಲಯ ಮತ್ತು ಮಿಜೋರಾಂನ ಬುಡಕಟ್ಟು ಹಿತಾಸಕ್ತಿಗಳಿಗೆ ಜನಾಂಗೀಯ, ಸಾಂಸ್ಕೃತಿಕ ಮತ್ತು ರಾಜಕೀಯ ಮೀಸಲಾತಿ ಒದಗಿಸುವ ಕಾನೂನಾಗಿರುವ ಐಎಲ್‍ಪಿಯನ್ನು ಸಂವಿಧಾನದ ಆರನೇ ಪರಿಚ್ಛೇದದಲ್ಲಿ ಬರುವ ಪ್ರದೇಶಗಳ ಜೊತೆಗೆ, ಅಸ್ಸಾಂ ಮತ್ತು ತ್ರಿಪುರದ ಆದಿವಾಸಿ ಪ್ರದೇಶಗಳಿಗೆ ಅನ್ವಯಿಸುವ ಮೂಲಕ ಕೇಂದ್ರವು ಹಗ್ಗದ ಮೇಲಿನ ನಡಿಗೆಗೆ ಯತ್ನಿಸಿದೆ. ಆದರೆ, ಸಂವಿಧಾನದ ಆರನೇ ಪರಿಚ್ಛೇದವು ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಣಿಪುರಕ್ಕೆ ಅನ್ವಯಿಸುವುದಿಲ್ಲ. ಪರಿಣಾಮವಾಗಿ ಮೊದಲೇ ಸಂಕೀರ್ಣವಾಗಿದ್ದ ಸಮಸ್ಯೆಯು ಇನ್ನಷ್ಟು ಸವಾಲಿನದ್ದಾಗಿದೆ.

ಪತ್ರಕರ್ತ ಹರ್ಷ ಮಂದಾರ್ ಈ ಪ್ರಶ್ನೆಯನ್ನು ಎತ್ತಿದ್ದಾರೆ: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫಘಾನಿಸ್ಥಾನದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಲಕ್ಷಾಂತರ ಧಾರ್ಮಿಕ ಅಲ್ಪಸಂಖ್ಯಾತರ- ಹಿಂದೂಗಳು ಮತ್ತು ಇತರ ಸಮುದಾಯಗಳ- ಸಮುದಾಯಗಳ ಸಮಸ್ಯೆಯನ್ನು ಸಿಎಎ ಪರಿಹರಿಸಲು ಬಯಸಿದೆ ಎಂದು ಸರಕಾರ ಹೇಳುತ್ತದೆ. ಆದರೆ, ಇದು ಅವರ ವಿರುದ್ಧ ಇನ್ನಷ್ಟು ದೌರ್ಜನ್ಯ ಮತ್ತು ಹಿಂಸಾಚಾರವನ್ನು ಪ್ರಚೋದಿಸದೆ? ಈ “ರಕ್ಷಣೆಯ ಕಂಬಳಿ”ಯನ್ನು ಅವರು ಹೊದ್ದುಕೊಳ್ಳುವುದಾದರೂ ಹೇಗೆ? ವಿಸ್ತೃತವಾದ ದೀರ್ಘಕಾಲೀನ ಮಾತುಕತೆ ಹಾಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಒಳಗೊಳ್ಳುವಿಕೆಯ ತ್ರಿವಳಿ ತತ್ವಗಳಿಗೆ ಒತ್ತು ನೀಡುವುದರಿಂದ, ಕಾಲ ಮೀರಿರುವ ಈ ಸಂದರ್ಭದಲ್ಲಿಯೂ ಸಹಾಯವಾಗಬಹುದು ಎಂಬುದು ಅವರ ಅಭಿಪ್ರಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...