Homeಮುಖಪುಟಪೌರತ್ವ ಕಾಯ್ದೆಯೊಳಗಿನ ಹುಳುಕುಗಳು ಮುಂದೆ ಹಿಂದೂಗಳನ್ನೇ ಬಾಧಿಸಲಿವೆ!

ಪೌರತ್ವ ಕಾಯ್ದೆಯೊಳಗಿನ ಹುಳುಕುಗಳು ಮುಂದೆ ಹಿಂದೂಗಳನ್ನೇ ಬಾಧಿಸಲಿವೆ!

- Advertisement -
- Advertisement -
ಪೌರತ್ವ ಪ್ರತಿರೋಧ ವಿಶೇಷ

 

ಕೃಪೆ: ದಿ ಹಿಂದೂ
ಅನುವಾದ: ನಿಖಿಲ್ ಕೋಲ್ಪೆ

ಭಾರತ ಸರಕಾರವು ತಂದಿರುವ ಪೌರತ್ವ ತಿದ್ದುಪಡಿ ಕಾಯಿದೆಯು ರಕ್ಷಿಸಲು ಬಯಸಿರುವ ವಿದೇಶಗಳಲ್ಲಿರುವ ಸಮುದಾಯಗಳ ವಿರುದ್ಧ ಆ ದೇಶಗಳಲ್ಲಿ ಹಿಂಸಾಚಾರವನ್ನು ಭುಗಿಲೆಬ್ಬಿಸಿದರೆ, ಏನಾದೀತು? ಈ ಪ್ರಶ್ನೆಯನ್ನು ಕೇಳಿದ್ದಾರೆ ಕಾಮನ್ವೆಲ್ತ್ ಹ್ಯೂಮನ್ ರೈಟ್ಸ್ ಇನಿಶಿಯೇಟಿವ್‍ನ ಅಂತರರಾಷ್ಟ್ರೀಯ ನಿರ್ದೇಶಕ ಸಂಜೊಯ್ ಹಜಾರಿಕಾ.

ಪೌರತ್ವ ತಿದ್ದುಪಡಿ ಕಾಯಿದೆ (ಸಿಎಎ)ಯು ನೆರೆಯ ಮೂರು ರಾಷ್ಟ್ರಗಳಲ್ಲಿ ‘ದೌರ್ಜನ್ಯ’ಕ್ಕೆ ಒಳಗಾಗಿರುವ, ಆದರೆ ಈ ತನಕ ನಿರಾಶ್ರಿತರೆಂದು ಘೋಷಿಸಲಾಗದಿರುವ ಐದು ಮುಸ್ಲಿಮೇತರ ಸಮುದಾಯಗಳಿಗೆ ಪೌರತ್ವ ನೀಡಲು ಬಯಸುತ್ತದೆ.

‘ನಿರಾಶ್ರಿತ’ ಎಂಬ ಅಭಿದಾನವು ಅಂತರರಾಷ್ಟ್ರೀಯವಾಗಿ ಮಾನ್ಯತೆ ಪಡೆದಿರುವ ಒಂದು ರಾಜಕೀಯ ಸ್ಥಾನಮಾನವನ್ನು ಜನರಿಗೆ ನೀಡುತ್ತದೆ. ಆದರೆ, ಧಾರ್ಮಿಕ, ರಾಜಕೀಯ, ಭಾಷೆ, ಜನಾಂಗೀಯ ದೌರ್ಜನ್ಯ ಎದುರಿಸುತ್ತಿರುವ ನಿರಾಶ್ರಿತರನ್ನು ರಕ್ಷಿಸುವ ಹೊಣೆಯನ್ನು ಸರಕಾರಗಳಿಗೆ ಕಡ್ಡಾಯಗೊಳಿಸುವ ಜಿನೇವಾ ಒಪ್ಪಂದಕ್ಕೆ ಸಹಿಹಾಕಿದ ದೇಶಗಳಲ್ಲಿ ಭಾರತ ಸೇರಿಲ್ಲ. ದೌರ್ಜನ್ಯದ ಪ್ರಮಾಣವನ್ನು ಹೇಗೆ ನಿರ್ಧಾರ ಮಾಡಲಾಗಿದೆ ಅಥವಾ ಹೇಗೆ ನಿರ್ಧಾರ ಮಾಡಲಾಗುವುದು ಎಂಬ ಬಗ್ಗೆ ಸಿಎಎಯಲ್ಲಿ ಯಾವುದೇ ಸ್ಪಷ್ಟತೆಯಿಲ್ಲ.

ಈ ಹಿನ್ನೆಲೆಯಲ್ಲಿ ಅಸ್ಸಾಂ ಮತ್ತು ಈಶಾನ್ಯದ ನೆರೆಹೊರೆಯ ರಾಜ್ಯಗಳಲ್ಲಿ ಅಂತಹ ಪ್ರಮಾಣದ ಹಿಂಸಾಚಾರ ಏಕೆ ಭುಗಿಲೆದ್ದಿತು ಎಂಬುದನ್ನು ಅರ್ಥಮಾಡಿಕೊಳ್ಳಬೇಕು. ರಾಷ್ಟ್ರೀಯ ಪೌರತ್ವ ನೋಂದಣಿ (ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಜನ್ಸ್- ಎನ್‍ಆರ್‍ಸಿ)ಯು ಅಸ್ಸಾಂನಲ್ಲಿ 19 ಲಕ್ಷ “ಹೊರಗಿನ” ಜನರನ್ನು “ಗುರುತಿಸಿದರಿಂದ” ಮೊದಲೇ ಅಲ್ಲಿ ಜನರ ಸಿಟ್ಟು ಕುದಿಯುತ್ತಿತ್ತು. ಹೀಗೆ ಗುರುತಿಸಲಾದವರಲ್ಲಿ ಹೆಚ್ಚಿನವರು ಹಿಂದುಗಳಾಗಿದ್ದು, ಮುಸ್ಲಿಮರ, ಸ್ಥಳೀಯ ಆದಿವಾಸಿ ಸಮುದಾಯಗಳು ಮತ್ತು ಗೂರ್ಖಾಗಳು ಸೇರಿದಂತೆ ಇತರ ಸಮುದಾಯಗಳವರ ಸಂಖ್ಯೆ ತೀರಾ ಚಿಕ್ಕದಾಗಿತ್ತು. ಈ “ಬೇಡವಾದವರ” ಪಟ್ಟಿಯನ್ನು ಒಪ್ಪಲು ಸಾಧ್ಯವಿಲ್ಲದ ಬಿಜೆಪಿಯು ರಾಷ್ಟ್ರವ್ಯಾಪಿ ಎನ್‍ಆರ್‍ಸಿಯ ಮೊರೆಹೋಯಿತು.

ಪ್ರಶ್ನೆಯೆಂದರೆ, ಅಸ್ಸಾಮಿನ ಈ ಕಾರ್ಯಾಚರಣೆಗೆ ಖರ್ಚಾದ ಹಣ, ಶ್ರಮ, ಸಮಯ ಒತ್ತಟ್ಟಿಗಿರಲಿ, ಅದು ನಾಗರಿಕರಲ್ಲಿ ಉಂಟುಮಾಡಿದ ಆಳವಾದ ಆತಂಕ, ಅದು ಹುಟ್ಟುಹಾಕಿದ ಹತಾಶೆಯ ವಿಷಯವೇನು? ಅಸ್ಸಾಂ ಸರಕಾರವು ಎನ್‍ಆರ್‍ಸಿಯ ಯಾದಿಯನ್ನು ತಿರಸ್ಕರಿಸಲು ಅಧಿಕೃತವಾಗಿ ಸುಪ್ರೀಂಕೋರ್ಟಿನ ಮುಂದೆ ಬಂದಿಲ್ಲ. ಅದು ಆಗುವತನಕ ಆ ಅಧ್ಯಾಯ ಮುಗಿಯುವುದಿಲ್ಲ. ಈ ಹೊರತುಪಡಿಸುವಿಕೆ ಅಥವಾ ತಿರಸ್ಕಾರವನ್ನು ಪ್ರಶ್ನಿಸುವ ಪ್ರಕ್ರಿಯೆಯನ್ನು ಭಾರತೀಯರು ಸೇರಿದಂತೆ ಈ ಯಾದಿಯಲ್ಲಿರುವ 19 ಲಕ್ಷ ಮಂದಿ ಅನುಭವಿಸಲೇಬೇಕಾಗಿದೆ.

ವಿದೇಶೀಯರ ನ್ಯಾಯಮಂಡಳಿ, ನಂತರ ಹೈಕೋರ್ಟ್, ಆ ಬಳಿಕ ಸುಪ್ರೀಂಕೋರ್ಟಿನ ಮೊರೆಹೋಗುವ ಹಿಂಸೆಯನ್ನು ಈ ಜನರು ಅನುಭವಿಸಬೇಕಾಗಿದೆ. (ಇಂತಹ 100ರಷ್ಟು ನ್ಯಾಯಮಂಡಳಿಗಳು ಅಸ್ತಿತ್ವದಲ್ಲಿದ್ದು, ಇನ್ನೂ 200ನ್ನು ಸ್ಥಾಪಿಸಲಾಗುತ್ತಿದೆ.) ತಮ್ಮ ಪೌರತ್ವವನ್ನು ಸಾಬೀತುಪಡಿಸಲು ವಿದೇಶಿಯರ ನ್ಯಾಯಮಂಡಳಿಯ ಮೊರೆಹೋಗಬೇಕಾದ ಭಾರತೀಯರ ಸ್ಥಿತಿಯನ್ನು ಕಲ್ಪಿಸಿನೋಡಿ.

ಈ ಎನ್‍ಆರ್‍ಸಿಯ ಪರ ಭಾರೀ ಬೊಬ್ಬೆ ಹೊಡೆದವರನ್ನು ಈಗ ಹಿಮ್ಮೆಟ್ಟಿಸಿರುವುದೆಂದರೆ, ಪ್ರತ್ಯೇಕಿಸಲಾಗಿರುವ 19 ಲಕ್ಷ ಜನರಲ್ಲಿ ಬಹುಸಂಖ್ಯಾತರು ಹಿಂದೂಗಳಾಗಿರುವುದು. ಕಾನೂನು ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಅವರನ್ನು ವಿದೇಶೀಯರು ಎಂದು ಘೋಷಿಸುವಂತಿಲ್ಲ. ಆದರೆ, ಅವರ ಭವಿಷ್ಯ ಅನಿಶ್ಚಿತವಾಗಿದ್ದು, ಹೆಚ್ಚಿನವರಿಗೆ ಕಾನೂನು ನೆರವು ಪಡೆಯುವ ತಾಕತ್ತೂ ಇಲ್ಲ.

ಈ ಕಾರಣದಿಂದಲೇ ಅಸ್ಸಾಮಿನ ಜನರಲ್ಲಿ ಕೋಪವು ಬೂದಿಮುಚ್ಚಿದ ಕೆಂಡದಂತೆ ಒಳಗೆಯೇ ಉರಿಯುತ್ತಿತ್ತು. ಆದುದರಿಂದ ಅಸ್ಸಾಮಿನ ಆತಂಕಗಳಿಗೆ ಪ್ರತಿಸ್ಪಂದಿಸದ ಇನ್ನೊಂದು ಕಾನೂನು ಬಂದಾಗ ಅದು ಮತ್ತೆ ಸ್ಫೋಟಗೊಂಡಿತು. ಮೇಲಾಗಿ ದಶಕಗಳಿಂದ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫಘಾನಿಸ್ಥಾನಗಳಿಂದ ಕಾನೂನುಬಾಹಿರವಾಗಿ ಒಳನುಸುಳಿರುವವರಿಗೆ ಪೌರತ್ವ ನೀಡಿದರೆ, ಅದು ಅಸ್ಸಾಮಿನ ಜನಸಂಖ್ಯೆಯ ಸ್ವರೂಪವನ್ನೇ ಬದಲಿಸಿಹಾಕಬಹುದು ಎಂಬ ಭಯವೂ ಇದರೊಂದಿಗೆ ಸೇರಿಕೊಂಡಿದೆ.

ಇನ್ನರ್ ಲೈನ್ ಲಿಮಿಟ್ (ಐಎಲ್‍ಪಿ) ಎಂದು ಕರೆಯಲ್ಪಡುವ ವ್ಯವಸ್ಥೆಯ ಅಡಿಯಲ್ಲಿ ಸ್ವಲ್ಪಮಟ್ಟಿನ ರಕ್ಷಣೆ ಒದಗಿಸುವ ಪ್ರಸ್ತಾಪ ಇದೆ. ಆದರೆ, ನಾಗಾಲ್ಯಾಂಡ್, ಮಿಜೋರಾಂ ಮತ್ತು ಆರುಣಾಚಲ ಪ್ರದೇಶದಲ್ಲಿ ದಶಕಗಳಿಂದ ಅಸ್ತಿತ್ವದಲ್ಲಿರುವ ಐಎಲ್‍ಪಿ ಪರಿಣಾಮಕಾರಿಯಲ್ಲ ಎಂದು ಅನುಭವವು ತೋರಿಸಿಕೊಟ್ಟಿದೆ.

ಮೇಘಾಲಯ ಮತ್ತು ಮಿಜೋರಾಂನ ಬುಡಕಟ್ಟು ಹಿತಾಸಕ್ತಿಗಳಿಗೆ ಜನಾಂಗೀಯ, ಸಾಂಸ್ಕೃತಿಕ ಮತ್ತು ರಾಜಕೀಯ ಮೀಸಲಾತಿ ಒದಗಿಸುವ ಕಾನೂನಾಗಿರುವ ಐಎಲ್‍ಪಿಯನ್ನು ಸಂವಿಧಾನದ ಆರನೇ ಪರಿಚ್ಛೇದದಲ್ಲಿ ಬರುವ ಪ್ರದೇಶಗಳ ಜೊತೆಗೆ, ಅಸ್ಸಾಂ ಮತ್ತು ತ್ರಿಪುರದ ಆದಿವಾಸಿ ಪ್ರದೇಶಗಳಿಗೆ ಅನ್ವಯಿಸುವ ಮೂಲಕ ಕೇಂದ್ರವು ಹಗ್ಗದ ಮೇಲಿನ ನಡಿಗೆಗೆ ಯತ್ನಿಸಿದೆ. ಆದರೆ, ಸಂವಿಧಾನದ ಆರನೇ ಪರಿಚ್ಛೇದವು ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಮಣಿಪುರಕ್ಕೆ ಅನ್ವಯಿಸುವುದಿಲ್ಲ. ಪರಿಣಾಮವಾಗಿ ಮೊದಲೇ ಸಂಕೀರ್ಣವಾಗಿದ್ದ ಸಮಸ್ಯೆಯು ಇನ್ನಷ್ಟು ಸವಾಲಿನದ್ದಾಗಿದೆ.

ಪತ್ರಕರ್ತ ಹರ್ಷ ಮಂದಾರ್ ಈ ಪ್ರಶ್ನೆಯನ್ನು ಎತ್ತಿದ್ದಾರೆ: ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫಘಾನಿಸ್ಥಾನದಲ್ಲಿ ದೌರ್ಜನ್ಯಕ್ಕೆ ಒಳಗಾಗಿರುವ ಲಕ್ಷಾಂತರ ಧಾರ್ಮಿಕ ಅಲ್ಪಸಂಖ್ಯಾತರ- ಹಿಂದೂಗಳು ಮತ್ತು ಇತರ ಸಮುದಾಯಗಳ- ಸಮುದಾಯಗಳ ಸಮಸ್ಯೆಯನ್ನು ಸಿಎಎ ಪರಿಹರಿಸಲು ಬಯಸಿದೆ ಎಂದು ಸರಕಾರ ಹೇಳುತ್ತದೆ. ಆದರೆ, ಇದು ಅವರ ವಿರುದ್ಧ ಇನ್ನಷ್ಟು ದೌರ್ಜನ್ಯ ಮತ್ತು ಹಿಂಸಾಚಾರವನ್ನು ಪ್ರಚೋದಿಸದೆ? ಈ “ರಕ್ಷಣೆಯ ಕಂಬಳಿ”ಯನ್ನು ಅವರು ಹೊದ್ದುಕೊಳ್ಳುವುದಾದರೂ ಹೇಗೆ? ವಿಸ್ತೃತವಾದ ದೀರ್ಘಕಾಲೀನ ಮಾತುಕತೆ ಹಾಗೂ ಸ್ವಾತಂತ್ರ್ಯ, ಸಮಾನತೆ ಮತ್ತು ಒಳಗೊಳ್ಳುವಿಕೆಯ ತ್ರಿವಳಿ ತತ್ವಗಳಿಗೆ ಒತ್ತು ನೀಡುವುದರಿಂದ, ಕಾಲ ಮೀರಿರುವ ಈ ಸಂದರ್ಭದಲ್ಲಿಯೂ ಸಹಾಯವಾಗಬಹುದು ಎಂಬುದು ಅವರ ಅಭಿಪ್ರಾಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...