Homeಮುಖಪುಟಡಿಬಿಎಸ್ ಬ್ಯಾಂಕ್‌ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನಕ್ಕೆ ಸಂಪುಟ ಅನುಮೋದನೆ

ಡಿಬಿಎಸ್ ಬ್ಯಾಂಕ್‌ನೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ ವಿಲೀನಕ್ಕೆ ಸಂಪುಟ ಅನುಮೋದನೆ

ಡಿಬಿಎಸ್ ಇಂಡಿಯಾ ಹೊಸ ಬಂಡವಾಳವಾಗಿ ಲಕ್ಷ್ಮಿ ವಿಲಾಸ್ ಬ್ಯಾಂಕ್‌ಗೆ 2,500 ಕೋಟಿ ರೂಪಾಯಿಯನ್ನು ತುಂಬಲಿದೆ

- Advertisement -
- Advertisement -

ಡಿಬಿಎಸ್ ಬ್ಯಾಂಕಿನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಡಿಬಿಎಸ್ ಇಂಡಿಯಾದೊಂದಿಗೆ ಲಕ್ಷ್ಮಿ ವಿಲಾಸ್ ಬ್ಯಾಂಕ್ (LVB) ಅನ್ನು ವಿಲೀನಗೊಳಿಸಲು ಬುಧವಾರ(ನ.25) ಸಂಪುಟ ಅನುಮೋದನೆ ನೀಡಿದೆ. ಜೊತೆಗೆ ಠೇವಣಿದಾರರು ತಮ್ಮ ಠೇವಣಿ ಹಿಂಪಡೆಯುವ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದಿದೆ.

“ಬ್ಯಾಂಕುಗಳ ವಿಲೀನವಾಗುವುದರಿಂದ ಠೇವಣಿದಾರರು ತಮ್ಮ ಠೇವಣಿ ಹಿಂಪಡೆಯುವುದಕ್ಕೆ ಯಾವುದೇ ನಿರ್ಬಂಧಗಳಿಲ್ಲ” ಎಂದು ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.

ಬ್ಯಾಂಕುಗಳ ವಿಲೀನದ ಯೋಜನೆಯ ಭಾಗವಾಗಿ, ಡಿಬಿಎಸ್ ಇಂಡಿಯಾ ಹೊಸ ಬಂಡವಾಳವಾಗಿ ಲಕ್ಷ್ಮಿ ವಿಲಾಸ್ ಬ್ಯಾಂಕ್‌ಗೆ 2,500 ಕೋಟಿ ರೂಪಾಯಿಯನ್ನು ಭರಿಸಲಿದೆ.

ತಮಿಳುನಾಡು ಮೂಲದ ಖಾಸಗಿ ವಲಯದ ಲಕ್ಷ್ಮಿ ವಿಲಾಸ್ ಬ್ಯಾಂಕ್ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಬಂಧ ಹೇರಿ,  ಒಂದು ತಿಂಗಳವರೆಗೆ ಹಣ ವಿತ್ ಡ್ರಾ ಮಿತಿಯನ್ನು 25,000ಕ್ಕೆ ನಿಗದಿಪಡಿಸಿತ್ತು. ಬ್ಯಾಂಕ್​ನ ಆರ್ಥಿಕ ಪರಿಸ್ಥಿತಿ ನಿರಂತರವಾಗಿ ಕುಸಿತ ಕಂಡ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿತ್ತು.

ಇದನ್ನೂ ಓದಿ: ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾ ವಿಲೀನಗೊಂಡರೆ ನಮ್ಮ ಸ್ವಾಗತವಿದೆ: ಕಾಂಗ್ರೆಸ್ ಸಚಿವ

ಈ ನಿರ್ಬಂಧ ನವೆಂಬರ್ 17 ರಿಂದ ಡಿಸೆಂಬರ್ 16 ರವರೆಗೆ ಜಾರಿಗೆ ತರಲಾಗಿದ್ದು, ಈ ಆದೇಶವನ್ನು ಎಬಿಐ ಕಾಯ್ದೆಯ ಸೆಕ್ಷನ್ 45 ರ ಅಡಿಯಲ್ಲಿ ಜಾರಿಗೊಳಿಸಲಾಗಿದೆ ಎಂದು ತಿಳಿಸಿತ್ತು.

2019 ರ ಸೆಪ್ಟೆಂಬರ್‌ನಲ್ಲಿ ಎಲ್‌ವಿಬಿಯನ್ನು ಪ್ರಾಂಪ್ಟ್ ಕರೆಕ್ಟಿವ್ ಆಕ್ಷನ್ ಅಡಿಯಲ್ಲಿ ಇರಿಸಲಾಗಿತ್ತು.
ಕೆಟ್ಟ ಸಾಲಗಳು ಮತ್ತು ನಿಬಂಧನೆಗಳ ಏರಿಕೆಯಿಂದಾಗಿ ಸೆಪ್ಟೆಂಬರ್ 2020ಕ್ಕೆ ತನ್ನ ನಿವ್ವಳ ನಷ್ಟ 397 ಕೋಟಿ ರೂಪಾಯಿಗೆ ವಿಸ್ತರಿಸಿದೆ ಎಂದು ಬ್ಯಾಂಕ್ ತಿಳಿಸಿತ್ತು. ತಮಿಳುನಾಡಿನ ಕರೂರು ಮೂಲದ ಲಕ್ಷ್ಮೀ ವಿಲಾಸ ಬ್ಯಾಂಕ್‌ 1926ರಲ್ಲಿ ಸ್ಥಾಪನೆಯಾಗಿದೆ.

ಸೆಪ್ಟೆಂಬರ್ 27 ರಂದು ಭಾರತೀಯ ರಿಸರ್ವ್ ಬ್ಯಾಂಕ್‌ ಮೀತಾ ಮಖಾನ್‌ ನೇತೃತ್ವದ ತ್ರಿಸದಸ್ಯ ಸಮಿತಿಯನ್ನು ಬ್ಯಾಂಕ್‌ ಮುನ್ನಡೆಸಲು ರಚನೆ ಮಾಡಿತ್ತು. ಕೆನರಾ ಬ್ಯಾಂಕ್‌ನ ಮಾಜಿ ಕಾರ್ಯನಿರ್ವಾಹಕೇತರ ಅಧ್ಯಕ್ಷ ಟಿ.ಎನ್‌. ಮನೋಹರನ್‌ ಅವರನ್ನು ಆಡಳಿತಾಧಿಕಾರಿಯಾಗಿ ನೇಮಕ ಮಾಡಲಾಗಿದೆ.


ಇದನ್ನೂ ಓದಿ: ಖಾಸಗೀಕರಣ ಪ್ರಕ್ರಿಯೆ: ರೈಲ್ವೇ ಮಂಡಳಿಯ 7 ಕಾರ್ಖಾನೆಗಳನ್ನು ವಿಲೀನಗೊಳಿಸಿದ ಕೇಂದ್ರ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...