Homeಕರ್ನಾಟಕಮೈಕ್ರೊ ಫೈನಾನ್ಸ್‌ ಕಡಿವಾಣಕ್ಕೆ ಸುಗ್ರೀವಾಜ್ಞೆ; ಒಪ್ಪಿಗೆ ಸೂಚಿಸಿದ ಸಚಿವ ಸಂಪುಟ

ಮೈಕ್ರೊ ಫೈನಾನ್ಸ್‌ ಕಡಿವಾಣಕ್ಕೆ ಸುಗ್ರೀವಾಜ್ಞೆ; ಒಪ್ಪಿಗೆ ಸೂಚಿಸಿದ ಸಚಿವ ಸಂಪುಟ

- Advertisement -
- Advertisement -

ಮೈಕ್ರೋ ಫೈನಾನ್ಸ್ ಹಾವಳಿಯಿಂದ ರಾಜ್ಯದಲ್ಲಿ ಆತ್ಮಹತ್ಯೆ ಹಾಗೂ ಕುಟುಂಬಗಳು ಊರು ತೊರೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಹೊಸದಾಗಿ ಮಸೂದೆ ತರಲು ಒಪ್ಪಿಗೆ ಪಡೆಯಲಾಗಿದೆ. ಕಿರುಕುಳ ತಡೆಗೆ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ರಾಜ್ಯಪಾಲರ ಬಳಿ ಅಂಕಿತ ಪಡೆಯಲು ಸಂಪುಟ ಸಭೆ ಇಂದು ನಿರ್ಧರಿಸಿದೆ.

ಕೆಲವು ಪ್ರಮುಖ ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ. ಹೀಗಾಗಿ, ಮೈಕ್ರೋ ಫೈನಾನ್ಸ್ ವಿಚಾರವಾಗಿ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ನಿರ್ಣಯ ಕೈಗೊಳ್ಳುವ ಪರಮಾಧಿಕಾರವನ್ನು ಸಚಿವ ಸಂಪುಟ ಮುಖ್ಯಮಂತ್ರಿಗಳಿಗೆ ನೀಡಿದೆ.

“ಖಾಸಗಿ ಫೈನಾನ್ಸ್​​​ ಕಂಪನಿಗಳಿಗೆ ಕಡಿವಾಣ ಹಾಕುವ ಸುಗ್ರೀವಾಜ್ಞೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಅಮಾನವೀಯವಾಗಿ ಮೈಕ್ರೋ ಪೈನಾನ್ಸ್​ನಿಂದ ಸಾಲ ವಸೂಲಿ ಆಗುತ್ತಿದೆ. ಇಂದು ಕೂಡ ಆತ್ಮಹತ್ಯೆ ಪ್ರಕರಣ ನಡೆದಿದ್ದು, ಮಸೂದೆ ತರಲು ತೀರ್ಮಾನಿಸಿ ಕೆಲವು ತಾಂತ್ರಿಕ ಅಂಶ ಚರ್ಚಿಸಿದ್ದೇವೆ. ಇಂದು ಸಂಜೆ ಮುಖ್ಯಮಂತ್ರಿಗಳು ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಕೆಲವು ಮಹತ್ವದ ವಿಚಾರ ಇರುವುದರಿಂದ ಸಭೆ ಮಾಡುತ್ತಿದ್ದೇವೆ. ಆಗ ಮಸೂದೆಗೆ ಸ್ಪಷ್ಟ ಚಿತ್ರಣ ನೀಡುತ್ತೇವೆ” ಎಂದು ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾನೂನು ಮತ್ತು ಸಂಸದೀಯ ಸಚಿವ ಎಚ್​ಕೆ ಪಾಟೀಲ್ ತಿಳಿಸಿದರು.

“ನಮ್ಮಲ್ಲಿರುವ ಕಾನೂನುಗಳು ಕೆಲವು ಪ್ಲಸ್ ಆಗಲಿವೆ; ಕೆಲವು ಮೈನಸ್ ಆಗಲಿವೆ. ಆದ್ದರಿಂದ, ಕಾನೂನಾತ್ಮಕ ತೀರ್ಮಾನಕ್ಕೆ ಸಂಜೆ ಹಿರಿಯ ಸಚಿವರ ಸಭೆ ಕರೆಯಲಾಗಿದೆ. ಸುಗ್ರೀವಾಜ್ಞೆ ತರಲು ಸಿಎಂಗೆ ಸಚಿವ ಸಂಪುಟ ಅಧಿಕಾರವನ್ನು ನೀಡಿದೆ. ಸಿಎಂ ಜೊತೆ ಸಭೆಯ ಬಳಿಕ ಕಾನೂನಾತ್ಮಕವಾಗಿ ತಿರ್ಮಾನ ಆಗಲಿದೆ” ಎಂದು ಅವರು ಹೇಳಿದರು.

ಇದನ್ನೂ ಓದಿ; ಗೋಡ್ಸೆಗೆ ಮಹಾತ್ಮ ಗಾಂಧಿಯ ಮೌಲ್ಯ ಕೊಲ್ಲಲು ಅಸಾಧ್ಯ – ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...