Homeಕರ್ನಾಟಕರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ: 1 ಸಮೀಕ್ಷೆಗೆ 10 ವರ್ಷ...

ರಾಜ್ಯದಲ್ಲಿ ಜಾತಿ ಗಣತಿ ಮರು ಸಮೀಕ್ಷೆಗೆ ಸಚಿವ ಸಂಪುಟ ಒಪ್ಪಿಗೆ: 1 ಸಮೀಕ್ಷೆಗೆ 10 ವರ್ಷ ಅವಧಿ ಎಂದ ಸಿಎಂ

- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಜನಗಣತಿ) ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ.

ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ.

ನ್ಯಾ.ಕಾಂತರಾಜು ಅವರ ಆಯೋಗ ವರದಿ ಸಲ್ಲಿಸಿ 10 ವರ್ಷ ಕಳೆದಿದೆ. ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಸೆಕ್ಷನ್ 11ರ ಪ್ರಕಾರ 10 ವರ್ಷ ಆದ ಬಳಿಕ ಹೊಸ ಸಮೀಕ್ಷೆ ನಡೆಸಬೇಕು ಎಂದು ಹೇಳಿದೆ. ಅಲ್ಲದೆ ಹೈಕಮಾಂಡ್ ಕೂಡಾ ಸಲಹೆ ನೀಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತಿ ಗಣತಿ ಮರು ಸಮೀಕ್ಷೆ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ (ಜೂ.12) ವಿಶೇಷ ಸಚಿವ ಸಂಪುಟ ಸಭೆ  ನಡೆಯಿತು.

ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ಸಮೀಕ್ಷೆ ಕುರಿತು ಚರ್ಚಿಸಿದ್ದೇವೆ. 2011ರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸ್ಥಿತಿ ಬಗ್ಗೆ ಸರ್ವೆ ನಡೆಸಲಾಗಿತ್ತುನಡೆಸಿದ್ದೆವು. 54 ಮಾನದಂಡಗಳು ಇಟ್ಟುಕೊಂಡು ಮನೆ ಮನೆಗೆ ಹೋಗಿ ಸರ್ವೆ ಮಾಡಿರುವ ವರದಿ ಪಡೆದಿದ್ದೇವೆ. 2011ರ ಜನಗಣತಿ ಪ್ರಕಾರ ರಾಜ್ಯದ ಜನಸಂಖ್ಯೆ 6.11 ಕೋಟಿ ಇದೆ ಎಂದು ಹೇಳಿದರು.

2015ರಲ್ಲಿ 6.35 ಕೋಟಿ ಜನಸಂಖ್ಯೆ ಎಂದು ಅಂದಾಜಿಸಲಾಗಿದೆ. ಇದರಲ್ಲಿ ಸರ್ವೆ ಆಗಿದ್ದು 5.98 ಕೋಟಿ ಜನರದ್ದು. 2015ರ ಏಪ್ರಿಲ್​ 11ರಂದು ಜಾತಿಗಣತಿ ಸರ್ವೆ ಆರಂಭಿಸಿದೆ. 2025ರ ನವೆಂಬರ್​ 30ರಂದು ಸರ್ವೆ ಮುಕ್ತಾಯಗೊಂಡಿತ್ತು. 1.60 ಲಕ್ಷ ಸಿಬ್ಬಂದಿ ಜಾತಿಗಣತಿ ಸರ್ವೆಯಲ್ಲಿ ಭಾಗಿಯಾಗಿದ್ದರು ಎಂದರು.

ನ್ಯಾ.ಕಾಂತರಾಜು ಸರ್ವೆಯ ದತ್ತಾಂಶ ಪಡೆದು ಜಯಪ್ರಕಾಶ್ ಹೆಗ್ಡೆ ಅವರು ಶಿಫಾರಸು ಮಾಡಿದರು. 2024ರ ಫೆ.29ರಂದು ಸರ್ಕಾರಕ್ಕೆ ಜಯಪ್ರಕಾಶ್ ಅವರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ಪಾರ್ಲಿಮೆಂಟ್ ಚುನಾವಣೆ ಕಾರಣದಿಂದ ವರದಿ ಚರ್ಚಿಸಲಿಲ್ಲ ಎಂದರು.

ಗುಜರಾತ್ | 200 ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ ಎಸ್‌ಐಆರ್ ಗಡುವು ವಿಸ್ತರಿಸಲು ಸುಪ್ರೀಂ ಕೋರ್ಟ್ ನಿರ್ದೇಶನ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.9) ಹಲವಾರು ನಿರ್ದೇಶನಗಳನ್ನು ನೀಡಿದೆ. ಚುನಾವಣಾ ಆಯೋಗವು ನಿಯೋಜಿಸಿರುವ ಮೈಕ್ರೋ-ಅಬ್ಸರ್ವರ್‌ಗಳ (ಸೂಕ್ಷ್ಮ ವೀಕ್ಷಕರು) ಬದಲಿಗೆ ಗ್ರೂಪ್...

ಮುಸ್ಲಿಮರಿಗೆ ಗುಂಡಿಕ್ಕುವಂತೆ ವಿಡಿಯೋ ಹಂಚಿಕೆ: ಅಸ್ಸಾಂ ಸಿಎಂ ವಿರುದ್ಧ ಓವೈಸಿ ದೂರು: ದ್ವೇಷ ಭಾಷಣ ಆದೇಶ ಉಲ್ಲೇಖ 

ಅಸ್ಸಾಂ ಬಿಜೆಪಿ ಘಟಕದ ಅಧಿಕೃತ 'ಎಕ್ಸ್' ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾದ ಮತ್ತು ಈಗ ಅಳಿಸಲಾದ ವೀಡಿಯೊದಲ್ಲಿ, ಮುಸ್ಲಿಮರ ಮೇಲೆ ಸಾಂಕೇತಿಕವಾಗಿ ಗುಂಡು ಹಾರಿಸುತ್ತಿರುವುದನ್ನು ತೋರಿಸಲಾಗಿದೆ ಎಂದು ಆರೋಪಿಸಿ ಹಿಮಂತ ಬಿಸ್ವಾ ಶರ್ಮಾ ವಿರುದ್ಧ...

ನರವಾಣೆ ಪುಸ್ತಕಕ್ಕೆ ಹೆದರಿ ಪ್ರಧಾನಿ ಲೋಕಸಭೆಗೆ ಬರುತ್ತಿಲ್ಲ : ರಾಹುಲ್ ಗಾಂಧಿ

ಪ್ರತಿಪಕ್ಷಗಳು ಎತ್ತಿರುವ ವಿಷಯಗಳಿಂದ, ವಿಶೇಷವಾಗಿ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಪುಸ್ತಕದ ವಿಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಭಯಗೊಂಡಿದ್ದಾರೆ. ಹಾಗಾಗಿ, ಅವರು ರಾಷ್ಟ್ರಪತಿಯ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆಗೆ...

ಡಿಜಿಟಲ್ ‘ಡಕಾಯಿತಿ’: 54,000 ಕೋಟಿಗೂ ಹೆಚ್ಚಿನ ಹಣ ವಂಚನೆ: ಎಸ್‌ಒಪಿ ರಚಿಸಲು ಕೇಂದ್ರಕ್ಕೆ ಸೂಚನೆ ನೀಡಿದ ಸುಪ್ರೀಂ

ನವದೆಹಲಿ: ಡಿಜಿಟಲ್ ವಂಚನೆಯಿಂದ 54,000 ಕೋಟಿ ರೂ.ಗಳಿಗೂ ಹೆಚ್ಚು ಹಣವನ್ನು ವಂಚಿಸುವುದು ಸಂಪೂರ್ಣ "ದರೋಡೆ ಅಥವಾ ಡಕಾಯಿತಿ" ಎಂದು ಸುಪ್ರೀಂ ಕೋರ್ಟ್ ಸೋಮವಾರ ಬಣ್ಣಿಸಿದೆ ಮತ್ತು ಅಂತಹ ಪ್ರಕರಣಗಳನ್ನು ನಿಭಾಯಿಸಲು ಆರ್‌ಬಿಐ, ಬ್ಯಾಂಕುಗಳು...

ಪಾಕಿಸ್ತಾನ ನಂಟು : ಸಿಎಂ ಶರ್ಮಾ ಆರೋಪ ನಿರಾಧಾರ, ಸಿ-ಗ್ರೇಡ್ ಸಿನಿಮಾ ಎಂದ ಗೌರವ್ ಗೊಗೊಯ್

ತಮಗೂ ಪಾಕಿಸ್ತಾನಕ್ಕೂ ಸಂಬಂಧವಿದೆ ಎಂಬ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಆರೋಪಗಳನ್ನು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ತಳ್ಳಿಹಾಕಿದ್ದು, ಎಸ್‌ಐಟಿ ವರದಿಯು ಕಳೆದ ಆರು ತಿಂಗಳಿನಿಂದ ಮುಖ್ಯಮಂತ್ರಿ ಬಳಿಯೇ ಇದೆ....

ಪಂಜಾಬ್: ತರಗತಿಯೊಳಗೆ ವಿದ್ಯಾರ್ಥಿನಿಯನ್ನು ಕೊಂದು, ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಕಾನೂನು ವಿದ್ಯಾರ್ಥಿ

ಚಂಡೀಗಢ: ಪಂಜಾಬ್‌ನ ತರ್ನ್ ತರಣ್ ಜಿಲ್ಲೆಯಲ್ಲಿ ಕಾನೂನು ವಿದ್ಯಾರ್ಥಿಯೊಬ್ಬ ಶಾಲಾ ಕೋಣೆಯೊಳಗೆ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿ ಕೊಂದ ಘಟನೆ ಸೋಮವಾರ ನಡೆದಿದೆ. ಸಹಪಾಠಿಗಳು ಭಯಭೀತರಾಗಿ ನೋಡುತ್ತಿದ್ದ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು...

ಅಸ್ಸಾಂ ಸಿಎಂ ಮುಸ್ಲಿಮರ ವಿರುದ್ಧ ನರಮೇಧವನ್ನು ಪ್ರಚೋದಿಸುತ್ತಿದ್ದಾರೆ : ಗೌರವ್ ಗೊಗೊಯ್

ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಮುಸ್ಲಿಮರ ವಿರುದ್ದ ದ್ವೇಷ ಹರಡುತ್ತಿದ್ದಾರೆ, ಅವರ ಜನಾಂಗೀಯ ಹತ್ಯೆಗೆ ಪ್ರಚೋದಿಸುತ್ತಿದ್ದಾರೆ ಎಂದು ಅಸ್ಸಾಂ ರಾಜ್ಯ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಹಾಗೂ ಸಂಸದ ಗೌರವ್ ಗೊಗೊಯ್ ಹೇಳಿದ್ದಾರೆ. ಅಸ್ಸಾಂ...

‘ಎಂಡಿಎಂಎ ಡ್ರಗ್ಸ್ ಕೇಂದ್ರವಾಗಿ ಮಾರ್ಪಟ್ಟ ಮಧ್ಯಪ್ರದೇಶ-ರಾಜಸ್ಥಾನ ಗಡಿ’: 13ಕೋಟಿ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಪೊಲೀಸರು. 

ಭೋಪಾಲ್: ದೇಶದ ಅಫೀಮು ಕೃಷಿ ಮತ್ತು ಕಳ್ಳಸಾಗಣೆ ಮಾರ್ಗವಾಗಿ ದೀರ್ಘಕಾಲದಿಂದ ಕುಖ್ಯಾತಿ ಗಳಿಸಿರುವ ಪಶ್ಚಿಮ ಮಧ್ಯಪ್ರದೇಶ ಮತ್ತು ಪಕ್ಕದ ಆಗ್ನೇಯ ರಾಜಸ್ಥಾನದ ಜಿಲ್ಲೆಗಳು ಈಗ MDMA ಸಂಶ್ಲೇಷಿತ ಡ್ರಗ್ಸ್ ಅಕ್ರಮ ಉತ್ಪಾದನೆ ಮತ್ತು...

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾದ ವಿರೋಧ ಪಕ್ಷಗಳು: ವರದಿ

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ವಿರೋಧ ಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ವಿಪಕ್ಷ ಸಂಸದರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ 'ಅನಿರೀಕ್ಷಿತ ಕೃತ್ಯ' ಎಸಗಲು ಸಂಚು...

ಮೆಟಾ-ವಾಟ್ಸಾಪ್ ಗೌಪ್ಯತೆ ನೀತಿ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆ ಫೆಬ್ರವರಿ 23ಕ್ಕೆ ಮುಂದೂಡಿಕೆ 

ನವದೆಹಲಿ: ಗೌಪ್ಯತೆ ನೀತಿಯ ಮೇಲೆ 213.14 ಕೋಟಿ ರೂ. ದಂಡ ವಿಧಿಸಿದ ಭಾರತೀಯ ಸ್ಪರ್ಧಾ ಆಯೋಗದ (ಸಿಸಿಐ) ಆದೇಶದ ವಿರುದ್ಧ ಮೆಟಾ ಪ್ಲಾಟ್‌ಫಾರ್ಮ್ಸ್ ಇಂಕ್ ಮತ್ತು ವಾಟ್ಸಾಪ್ ಸಲ್ಲಿಸಿದ ಅರ್ಜಿಗಳನ್ನು ಸುಪ್ರೀಂ ಕೋರ್ಟ್...