Homeಮುಖಪುಟಕೃಷಿ ಕಾಯ್ದೆ ವಾಪಸ್‌ಗೆ ಸಂಪುಟ ಒಪ್ಪಿಗೆ: ಅಧಿವೇಶನದ ಮೊದಲ ದಿನವೇ ಹಿಂತೆಗೆತ ಪ್ರಕ್ರಿಯೆ ಆರಂಭ

ಕೃಷಿ ಕಾಯ್ದೆ ವಾಪಸ್‌ಗೆ ಸಂಪುಟ ಒಪ್ಪಿಗೆ: ಅಧಿವೇಶನದ ಮೊದಲ ದಿನವೇ ಹಿಂತೆಗೆತ ಪ್ರಕ್ರಿಯೆ ಆರಂಭ

C2+50% ಸೂತ್ರದ ಪ್ರಕಾರ MSP ಅನ್ನು ಕಾನೂನುಬದ್ಧಗೊಳಿಸುವುದಾಗಿ ಮೋದಿಯವರು ಚುನಾವಣಾ ಭರವಸೆ ನೀಡಿದ್ದರು. ಆದರೆ ಸರ್ಕಾರ ಈಗ ಅದನ್ನು ಜಾರಿಗೊಳಿಸದೆ ಏಕೆ ತಪ್ಪಿಸಿಕೊಳ್ಳುತ್ತಿದೆ ಎಂದು ರೈತರು ಪ್ರಶ್ನಿಸಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ 5 ದಿನಗಳಲ್ಲೇ ಅದಕ್ಕೆ ಸಂಪುಟದಲ್ಲಿ ಅನುಮೋದನೆ ಸಿಕ್ಕಿದೆ. ಚಳಿಗಾಲದ ಅಧಿವೇಶನದ ಮೊದಲ ದಿನವೇ ಕೃಷಿ ಕಾಯ್ದೆಗಳ ಹಿಂತೆಗೆತ ಪ್ರಕ್ರಿಯೆ ಆರಂಭವಾಗಲಿದ್ದು, ಅದು ನಮ್ಮ ಆದ್ಯತೆಯ ಕರ್ತವ್ಯವಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

‘ಮುಂಬರುವ ಚಳಿಗಾಲದ ಅಧಿವೇಶನದಲ್ಲಿ, ಈ ಮಸೂದೆಗಳನ್ನು ಕೈಗೆತ್ತಿಗೊಳ್ಳುವುದು. ಸಂಸತ್ತಿನ ಅಧಿವೇಶನದ ಮೊದಲ ದಿನದಿಂದಲೇ ಈ ಪ್ರಕ್ರಿಯೆ ಪ್ರಾರಂಭವಾಗಲಿದೆ. ನವೆಂಬರ್‌ 19ರಂದು ಪ್ರಧಾನಿ ನೀಡಿದ್ದ ಭರವಸೆಯನ್ನು ಘೋಷಣೆಯಾದ ಐದು ದಿನಗಳಲ್ಲಿ ಈಡೇರಿಸಲಾಗಿದೆ. ಕಾಯ್ದೆ ರದ್ದತಿ ವಿಷಯ ಇಂದಿನ ಕಾರ್ಯಸೂಚಿಯಲ್ಲಿ ಇಲ್ಲ ಎಂದು ಅನೇಕ ಪತ್ರಕರ್ತರು ಹೇಳುತ್ತಿದ್ದರು. ಆದರೆ ಸಂಪುಟವು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ ಎಂದು ಸಚಿವರು ತಿಳಿಸಿದರು.

2020ರ ಸೆಪ್ಟೆಂಬರ್‌ನಲ್ಲಿ ಸಂಸತ್ತು ಅಂಗೀಕರಿಸಿದ್ದ ಮೂರು ಕೃಷಿ ಕಾನೂನುಗಳ ವಿರುದ್ಧ ಕಳೆದ ಒಂದು ವರ್ಷದಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಕಳೆದ ನವೆಂಬರ್‌ 19ರಂದು ಪ್ರಧಾನಿ ನರೇಂದ್ರ ಮೋದಿಯವರು ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿ, ರೈತರ ಅನುಕೂಲಕ್ಕಾಗಿ ಕಾನೂನುಗಳನ್ನು ಪರಿಚಯಿಸಲಾಗಿದ್ದರೂ, ಅವರಿಗೆ ಅದರ ಪ್ರಯೋಜನಗಳನ್ನು ವಿವರಿಸಲು ಸರ್ಕಾರ ವಿಫಲವಾಗಿದೆ ಎಂದು ಪ್ರಧಾನಿಗಳು ತಪ್ಪೊಪ್ಪಿಕೊಂಡರು.

ಪ್ರಧಾನಿ ಮೋದಿಯವರ ಘೋಷಣೆಯ ನಂತರ ಇಂದು ನಡೆದ ಮೊದಲ ಸಂಪುಟ ಸಭೆಯಲ್ಲಿ ಮೂರು ಕಾನೂನುಗಳನ್ನು ರದ್ದುಗೊಳಿಸಲು ಕೃಷಿ ಕಾನೂನುಗಳ ರದ್ದತಿ ಮಸೂದೆ -2021 ಅನ್ನು ಅನುಮೋದಿಸಿದೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಹೊಸ ಚೌಕಟ್ಟಿನ ಬಗ್ಗೆ ಕೆಲಸ ಮಾಡಲು ಸರ್ಕಾರವು ಸಮಿತಿಯನ್ನು ರಚಿಸಲಿದೆ ಎಂದು ಪ್ರಧಾನಿ ಘೋಷಿಸಿದ್ದರು. ಸಂಪುಟದ ನಿರ್ಧಾರಗಳ ಬಗ್ಗೆ ವಿವರಿಸಿದ ಕೇಂದ್ರ ಸಚಿವ ಅನುರಾಗ್‌ ಠಾಕೂರ್, ಹೊಸ ಸಮಿತಿಯ ಬಗ್ಗೆ ಏನನ್ನು ಮಾತನಾಡಲಿಲ್ಲ. ಈ ಕುರಿತು ರೈತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯು ಕಾರ್ಪೊರೇಟ್ ಪರವಾದ ಕೃಷಿ ಕಾನೂನುಗಳನ್ನು ಜಾರಿಗೊಳಿಸಿ ದೊಡ್ಡ ತಪ್ಪು ಮಾಡಿತು. ಅದರ ವಿರುದ್ಧ ರೈತರು ಹೋರಾಡಿದರು ಮತ್ತು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಲಾಯಿತು. C2+50% ಸೂತ್ರದ ಪ್ರಕಾರ MSP ಅನ್ನು ಕಾನೂನುಬದ್ಧಗೊಳಿಸುವುದಾಗಿ ಮೋದಿಯವರು ಚುನಾವಣಾ ಭರವಸೆ ನೀಡಿದ್ದರು. ಆದರೆ ಸರ್ಕಾರ ಈಗ ಅದನ್ನು ಜಾರಿಗೊಳಿಸದೆ ಏಕೆ ತಪ್ಪಿಸಿಕೊಳ್ಳುತ್ತಿದೆ? ಸಚಿವರ ಈ ಬಗ್ಗೆ ಮಾತನಾಡಲು ಏಕೆ ಹಿಂಜರಿಯುತ್ತಿದ್ದಾರೆ ಎಂದು ಟ್ರ್ಯಾಕ್ಟರ್‌ಟುಟ್ವಿಟರ್ ಪ್ರಶ್ನಿಸಿದೆ.


ಇದನ್ನೂ ಓದಿ: ರಾಜ್ಯದಲ್ಲಿ ರೈತ ಹೋರಾಟ ತೀವ್ರಗೊಳಿಸಲು ನಿರ್ಧಾರ: ನ.26ರಂದು ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...