Homeಕರ್ನಾಟಕಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

ಬಾಕಿ ಪ್ರಕರಣಗಳ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಸಲಹೆ : ಸಚಿವ ಸಂಪುಟ ನಿರ್ಧಾರ

- Advertisement -
- Advertisement -

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್ ಅವರ ಪಕ್ಷಪಾತಿ ನಡೆ ಕುರಿತು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಚರ್ಚೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ವಿಚಾರದಲ್ಲಿ ರಾಜ್ಯಪಾಲರು ತೋರಿದ ಆಸಕ್ತಿ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡದ ಇತರ ಪ್ರಕರಣಗಳಲ್ಲಿ ಕಂಡು ಬರದ ಹಿನ್ನೆಲೆ, ರಾಜ್ಯಪಾಲರಿಗೆ ಸೂಕ್ತ ನೆರವು ಮತ್ತು ಸಲಹೆ ನೀಡುವ ನಿರ್ಣಯವನ್ನು ಸಚಿವ ಸಂಪುಟ ತೆಗೆದುಕೊಂಡಿದೆ. ಇದರಿಂದ ಬಿಜೆಪಿ ಮತ್ತು ಜೆಡಿಎಸ್​​ ನಾಯಕರಿಗೆ ಢವಢವ ಶುರುವಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಹೆಚ್​. ಕೆ ಪಾಟೀಲ್, “ರಾಜ್ಯಪಾಲರ ಬಳಿ ಪ್ರಾಸಿಕ್ಯೂಷನ್​​ಗೆ ಬಾಕಿ ಇರುವ ಹಲವು ಪ್ರಕರಣಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಇನ್ನೂ ಕೆಲವು ಪ್ರಕರಣಗಳು ಲೋಕಾಯುಕ್ತದಿಂದ ರಾಜ್ಯಪಾಲರಿಗೆ ಹೋಗಿದೆ. ಕೆಲವು ತನಿಖಾ ಸಂಸ್ಥೆಗಳ ವರದಿ ರಾಜ್ಯಪಾಲರಿಗೆ ಸಲ್ಲಿಕೆಯಾಗಿದೆ. ಅನೇಕ ಅನುಮೋದನೆ ಅರ್ಜಿಗಳು ರಾಜ್ಯಪಾಲರ ಸಮಕ್ಷಮದಲ್ಲಿ ಬಾಕಿ ಇವೆ. ಈ ಅರ್ಜಿಗಳಲ್ಲಿ ಕೆಲವು ಚಾರ್ಜ್​ಶೀಟ್ ಸಲ್ಲಿಕೆಗೆ ಒಪ್ಪಿಗೆ ಬಾಕಿ ಇವೆ. 1980ರ ಭ್ರಷ್ಟಾಚಾರ ತಡೆಕಾಯ್ದೆ ಸೆಕ್ಷನ್ 19ರಡಿ ಅನುಮೋದನೆಗೆ ಬಾಕಿ ಇದೆ. 17ಎ ಅಡಿಯಲ್ಲೂ ರಾಜ್ಯಪಾಲರ ಪೂರ್ವಾನುಮತಿಗೆ ಬಾಕಿ ಇದೆ. ಆ ಎಲ್ಲ ಪ್ರಕರಣಗಳ ಬಗ್ಗೆ ಶೀಘ್ರವೇ ತೀರ್ಮಾನ ತೆಗೆದುಕೊಳ್ಳುವಂತೆ 163ರ ಅನ್ವಯ ರಾಜ್ಯಪಾಲರಿಗೆ ಸಲಹೆ ಮತ್ತು ನೆರವು ನೀಡಲು ಸಂಪುಟ ಸಭೆ ನಿರ್ಣಯಿಸಿದೆ” ಎಂದು ತಿಳಿಸಿದ್ದಾರೆ.

“ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ, ಜನಾರ್ದನ ರೆಡ್ಡಿ ಹಾಗೂ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ವಿರುದ್ಧದ ಪ್ರಕರಣಗಳಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಲಾಗಿದೆ. ಹೆಚ್‌ಡಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಲೋಕಾಯುಕ್ತ ಎಸ್‌ಐಟಿಯಿಂದ ಸ್ಪಷ್ಟೀಕರಣ ಕೋರಿದ್ದರು. ಇದಕ್ಕೆ ಅಗತ್ಯವಿರುವ ಸ್ಪಷ್ಟೀಕರಣವನ್ನು ಪತ್ರದ ಮೂಲಕ ಎಸ್‌ಐಟಿ ನೀಡಿದೆ. ಬಾಕಿ ಇರುವ ಪ್ರಾಸಿಕ್ಯೂಷನ್‌ಗೆ ಅನುಮತಿ ಪ್ರಕರಣಗಳ ಬಗ್ಗೆ ಶೀಘ್ರವಾಗಿ ತೀರ್ಮಾನ ಕೈಗೊಳ್ಳಲು ರಾಜ್ಯಪಾಲರಿಗೆ ಸಲಹೆ ನೀಡುತ್ತೇವೆ” ಎಂದು‌ ಹೆಚ್‌.ಕೆ ಪಾಟೀಲ್ ವಿವರಿಸಿದ್ದಾರೆ.

“ಆ.1 ರಂದು ಸಚಿವ ಸಂಪುಟ ಸಭೆ ನಡೆದಿತ್ತು. ಅಂದು ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಸಭೆ ನಡೆಸಲು ಸೂಚಿಸಿದ್ದರು. ಆರ್ಟಿಕಲ್ 163ರ ಅನ್ವಯ ಏಡ್ ಆ್ಯಂಡ್ ಅಡ್ವೈಸ್ ರಾಜ್ಯಪಾಲರಿಗೆ ನೀಡಿದ್ದೆವು. ದೃಢೀಕರಣ ಸಂದರ್ಭದಲ್ಲಿ ಸಿಎಂ ತಾವಿರುವುದು ಸೂಕ್ತ ಅಲ್ಲ ಎಂದು ಸಭೆಯಿಂದ ಹೊರಗೆ ಇದ್ದರು. ಆ ಸಭೆ ಆದ ಬಳಿಕ ಸಂಪುಟದ ನಿರ್ಣಯವನ್ನು ದೃಢೀಕರಿಸಲು ಇಂದು ಸಭೆ ನಡೆದಿದ್ದು, ಆ.1ರ ನಿರ್ಣಯವನ್ನು ದೃಢೀಕರಿಸಿದ್ದೇವೆ” ಎಂದು ಹೇಳಿದ್ದಾರೆ.

“ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಪ್ರಕರಣದಲ್ಲಿ ಖಾಸಗಿ ವ್ಯಕ್ತಿ ದೂರು ಸಲ್ಲಿಸಿದ್ದಾರೆ. ಈ ಬಗ್ಗೆ ತರಾತುರಿಯಲ್ಲಿ ರಾಜ್ಯಪಾಲರು ಶೋಕಾಸ್ ನೋಟಿಸ್ ನೀಡಿದ್ದಾರೆ. ಆದರೆ ಈ ನಾಲ್ಕು ಪ್ರಕರಣದಲ್ಲಿ ತನಿಖೆಯಾಗಿದೆ ಹಾಗೂ ಎರಡು ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿದರೂ ಏನೂ ಕ್ರಮ ಆಗಿಲ್ಲ. ಹೀಗಿರುವಾಗ ಸಂಪುಟ ಸಲಹೆ ಕೊಡುವುದು ಸೂಕ್ತ” ಎಂದಿದ್ದಾರೆ.

2021ರ ಡಿ.9ರಂದು ಶಶಿಕಲಾ ಜೊಲ್ಲೆ ವಿರುದ್ಧ ಮತ್ತು 2024ರ ಫೆಬ್ರವರಿ 26ರಂದು ಮುರುಗೇಶ್ ನಿರಾಣಿ ವಿರುದ್ಧ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಲಾಗಿದೆ. 2023ರ ನವೆಂಬರ್ 21ರಂದು ಹೆಚ್.​ ಡಿ ಕುಮಾರಸ್ವಾಮಿ ವಿರುದ್ಧವೂ ಅರ್ಜಿ ಸಲ್ಲಿಕೆಯಾಗಿದೆ. ಕುಮಾರಸ್ವಾಮಿ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡುವಂತೆ ಲೋಕಾಯಕ್ತ ಎಸ್​ಐಟಿ ರಾಜ್ಯಪಾಲರಿಗೆ ಮತ್ತೆ ಮನವಿ ಮಾಡಿದೆ. ನಿನ್ನೆಯ ಸಂಪುಟ ಸಭೆಯ ನಿರ್ಧಾರ ರಾಜ ಭವನ ವರ್ಸಸ್​ ರಾಜ್ಯ ಸರ್ಕಾರದ ನಡುವೆ ಮತ್ತೊಂದು ಸುತ್ತಿನ ಕಾನೂನು ಸಮರಕ್ಕೆ ಮುನ್ನುಡಿಯಾಗಿದೆ.

ಇದನ್ನೂ ಓದಿ : ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...