Homeಮುಖಪುಟಬೀದಿಬದಿ ವ್ಯಾಪಾರಿಗಳಿಗೆ 20 ಸಾವಿರ ಕೋಟಿ ತೆಗೆದಿಡಲು ಕೇಂದ್ರ ಸಚಿವ ಸಂಪುಟ ನಿರ್ಧಾರ

ಬೀದಿಬದಿ ವ್ಯಾಪಾರಿಗಳಿಗೆ 20 ಸಾವಿರ ಕೋಟಿ ತೆಗೆದಿಡಲು ಕೇಂದ್ರ ಸಚಿವ ಸಂಪುಟ ನಿರ್ಧಾರ

- Advertisement -
- Advertisement -

ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾದ ಜನರಿಗೆ ಆರ್ಥಿಕ ನೆರವು ನೀಡುವ ಸಲುವಾಗಿ ಕೇಂದ್ರ ಸರ್ಕಾರದ ಸಂಪುಟ ಸಭೆಯಲ್ಲಿ ಇಂದು ಬೀದಿಬದಿ ವ್ಯಾಪಾರಿಗಳಿಗಾಗಿ 20 ಸಾವಿರ ಕೋಟಿ ರೂ ತೆಗೆದಿಡಲು ನಿರ್ಧರಿಸಲಾಗಿದೆ. ಕ್ಷೌರಿಕ ಅಂಗಡಿಗಳನ್ನೂ ಸಹ ಬೀದಿ ಬದಿಯ ವ್ಯಾಪಾರಿಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದ್ದು, ಇವರಿಗೆ 10,000 ಸಾಲ ನೀಡಲು ಕೇಂದ್ರ ಯೋಜನೆ ರೂಪಿಸಿದೆ. ಈ ಸಾಲ ಒಂದು ವರ್ಷದ ವರೆಗೆ ಬಡ್ಡಿ ರಹಿತವಾಗಿದ್ದು, ಸಾಲ ಪಾವತಿ ವಿಳಂಬಕ್ಕೂ ದಂಡ ವಿಧಿಸುವಂತಿಲ್ಲ ಎಂದು ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

ದೇಶದಾದ್ಯಂತ ಘೋಷಿಸಲಾಗುತ್ತಿರುವ ಲಾಕ್ಡೌನ್ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಜನರಿಗಾಗಿ ಕೇಂದ್ರ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ರೂ ಪ್ಯಾಕೇಜ್ ಗೆ ಕೇಂದ್ರ ಸಚಿವ ಸಂಪುಟ ಸಭೆ ಹಂತಹಂತವಾಗಿ ಒಪ್ಪಿಗೆ ನೀಡುತ್ತಿದೆ ಎನ್ನಲಾಗಿದೆ. ಸಣ್ಣ ಮತ್ತು ಬೀದಿ ಬದಿಯ ವ್ಯಾಪಾರಿಗಳ ಜೊತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು ನೀಡಲು ಕೇಂದ್ರ ಹೊಸ ಯೋಜನೆ ರೂಪಿಸಿದೆ ಎಂದು ತಿಳಿದುಬಂದಿದೆ.

ಇದಲ್ಲದೆ, ಬೆಳೆ ಸಾಲ ಪಾವತಿಗೆ 2021ರ ವರೆಗೆ ಅವಧಿ ವಿಸ್ತರಣೆ, ಪಡಿತರ ಕಾರ್ಡ್ ಇಲ್ಲದವರಿಗೂ ಪಡಿತರ ನೀಡುವ ಯೋಜನೆ, APMC ಕಾಯ್ದೆ ತಿದ್ದುಪಡಿ ಹಾಗೂ ಜೋಳ, ಗೋಧಿ, ಸಜ್ಜೆ, ತೊಗರಿ ಸೇರಿದಂತೆ 14 ಬೆಳೆಗಳಿಗೆ ಬೆಂಬಲ ಬೆಲೆ ನಿಗದಿ ಪಡಿಸಿ ಸರ್ಕಾರವೇ ರೈತರಿಗೆ ಬೆಳೆಗಳನ್ನು ಖರೀದಿ ಮಾಡುವುದಕ್ಕೂ ಸಹ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ಒಪ್ಪಿಗೆ ಪಡೆಯಲಾಗಿದೆ.

ಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳಿಗೆ ಒತ್ತು: ಗಡ್ಕರಿ

ದೇಶದ ಆರ್ಥಿಕತೆಗೆ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಪಾತ್ರ ನಿರ್ಣಾಯಕವಾಗಿದ್ದು, ಲಾಕ್ಡೌನ್ನಿಂದಾಗಿ ಈ ವಲಯವೂ ಸಹ ಸಾಕಷ್ಟು ನಷ್ಟ ಅನುಭವಿಸಿದೆ. ಹೀಗಾಗಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕಿದೆ ಎಂದು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಿತೀನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ದೇಶದ ಜಿಡಿಪಿ ಗೆ ಮಧ್ಯಮ ಮತ್ತು ಸಣ್ಣ ಕೈಗಾರಿಕೆಗಳು ಶೇ.29ರಷ್ಟು ಕೊಡುಗೆ ನೀಡಿವೆ. ಆದ್ದರಿಂದಲೇ ಈ ವಲಯಕ್ಕೆ ಕೇಂದ್ರದ ಕಡೆಯಿಂದ ಹೆಚ್ಚು ಕೊಡಗೆ ನೀಡಲಾಗುತ್ತಿದೆ.
ಈ ವಲಯದಿಂದ ವರ್ಷಕ್ಕೆ ಶೇ.48 ರಷ್ಟು ಉತ್ಪನ್ನಗಳು ವಿದೇಶಕ್ಕೆ ರಫ್ತಾಗುತ್ತಿದೆ. ಆದರೆ, 2006ರ MSME ಕಾಯ್ದೆಯಿಂದಾಗಿ ಉದ್ಯಮಕ್ಕೆ ಲಾಭವಾಗುತ್ತಿಲ್ಲ. ಹೀಗಾಗಿ ಈ ಕಾಯ್ದೆಯಲ್ಲಿ ಬದಲಾವಣೆ ಮಾಡಿ ನೆರವು ನೀಡಲಾಗುತ್ತಿದೆ. ಈಗ ಮಾಡಿರುವ ಬದಲಾವಣೆಯಲ್ಲಿ ,MSME ವ್ಯವಹಾರದಲ್ಲಿ ರಫ್ತನ್ನು ಪರಿಗಣಿಸುವುದಿಲ್ಲ ಪರಿಣಾಮ ಈ ಉದ್ಯಕ್ಕೆ ಹೆಚ್ಚು ಉಳಿತಾಯವಾಗುತ್ತದೆ” ಎಂದು ಮಾಹಿತಿ ನೀಡಿದ್ದಾರೆ.


ಓದಿ: ರಾಜ್ಯ 7.5 ಲಕ್ಷ ಚಾಲಕರಲ್ಲಿ 80 ಸಾವಿರ ಚಾಲಕರಿಗೆ ಮಾತ್ರ ಕೊರೊನಾ ಪರಿಹಾರ: ವರದಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...