Homeಕರ್ನಾಟಕಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ

- Advertisement -
- Advertisement -

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ”ನೇರ, ನಿಷ್ಠುರ ಮಾತುಗಳೇ ನನಗೆ ಮುಳುವಾಯಿತು. ಲಾಬಿ ಮಾಡಿದವರು ಸಚಿವರಾಗುತ್ತಾರೆ. ಯಾರ ಬಳಿಯೂ ಲಾಬಿ ಮಾಡುವ ಹವ್ಯಾಸ ನನಗೆ ಇಲ್ಲ. ಅದು ನನ್ನ ಅಪರಾಧ. ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ” ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ನಿವೃತ್ತಿಯ ಬಗ್ಗೆ BJP ಹೈಕಮಾಂಡ್ ಹೇಳಿದ್ದೇನು?

“ಇದು ಬೆಂಗಳೂರು-ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು” ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ, ವಿಜಯಪುರ ಶಾಸಕ ಬಸನಗೌಡ ಪಾಟಿಲ ಯತ್ನಾಳ್, ಸಂಕ್ರಾಂತಿಯ ನಂತರ ಯಡಿಯೂರಪ್ಪ ಅವರ ಅಧಃಪತನ ಆರಂಭವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಮೂರು ಬ್ಲ್ಯಾಕ್‌ಮೇಲರ್‌ಗಳನ್ನು ಮಂತ್ರಿಗಳನ್ನಾಗಿ ಮಾಡುತ್ತಿದ್ದಾರೆ. ಸಂಕ್ರಾಂತಿಯ ನಂತರ ಅವರ ಅಧಃಪತನ ಪ್ರಾರಂಭವಾಗುತ್ತದೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಃಪತನ ಆರಂಭ: ಯತ್ನಾಳ್

ಬೊಮ್ಮನಹಳ್ಳಿಯ ಶಾಸಕ ಸತಿಶ್ ರೆಡ್ಡಿ ಟ್ವೀಟ್ ಮಾಡಿ, “ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಅನಂತಕುಮಾರ್ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದಕ್ಕೆ ಬೆಂಬಲವಿದೆ: ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಸುನಿಲ್ ಕುಮಾರ್ ಕಾರ್ಕಳ ಟ್ವೀಟ್ ಮಾಡಿ, “ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ. ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ತಕ್ಷಣವೇ ರಾಜೀನಾಮೆ ಕೊಡಿ, ಇಲ್ಲದಿದ್ದರೆ ವಜಾಗೊಳಿಸಲಾಗುವುದು’ – ಯಡಿಯೂರಪ್ಪ ಎಚ್ಚರಿಕೆ

ಮತ್ತೋರ್ವ ವಿಧಾನ ಪರಿಷತ್ ಸದಸ್ಯರಾದ ಎಚ್‌ ವಿಶ್ವನಾಥ್ ಮೈಸೂರಿನಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, “ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಅದೇ ರೀತಿ ಯಡಿಯೂರಪ್ಪನವರ ಪ್ರತಿಷ್ಠೆ ಡೆಮಾಲಿಷ್ ಆಗೋಕೂ ವಿಜಯೇಂದ್ರರೇ ಕಾರಣ. ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಯಡಿಯೂರಪ್ಪ ಸಂಪಾದಿಸಿದ್ದ ಹೆಸರು ಹಾಳಾಗುತ್ತಿದೆ. ಎಲ್ಲಾದಕ್ಕೂ ಸುಮ್ಮನೆ ಹೈಕಮಾಂಡ್ ಹೆಸರು ಬಳಸಬೇಡಿ. ಕರ್ನಾಟಕಕ್ಕೆ ಬಿಎಸ್ ಯಡಿಯೂರಪ್ಪರೇ ಹೈಕಮಾಂಡ್” ಎಂದು ಕಿಡಿ ಕಾರಿದ್ದಾರೆ.

“ಯೋಗೇಶ್ವರ್‌ ಅವರದ್ದು ಟೋಟಲಿ ಬ್ಲಾಕ್ ಮೇಲ್ ತಂತ್ರ. ಆ ಬ್ಲಾಕ್ ಮೇಲ್ ಏನಂತ ಯಾವತ್ತಾದರೂ ಒಂದು ದಿನ ಹೊರಗೆ ಬರುತ್ತೆ. ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದುಕೊಳ್ಳೋದೆ ಮಾನದಂಡವೇ..? ಯೋಗೇಶ್ವರ್ ಬಾಂಬೆಯಲ್ಲಿ ಬ್ಯಾಗ್ ಹಿಡಿದ್ದಿದ್ದು ಬಿಟ್ರೆ ಮತ್ತೇನು ಮಾಡಿಲ್ಲ. ಈ ಎಲ್ಲ ಬೆಳವಣಿಗೆಯಿಂದ ನನಗೆ ನೋವಾಗಿದೆ. ನಾವು ಮನುಷ್ಯರು, ನಮಗೂ ಹೃದಯ ಇದೆ, ನಮಗೂ ನೋವಾಗುತ್ತೆ. ಯಡಿಯೂರಪ್ಪನವರೇ ಸಿದ್ಧಲಿಂಗೇಶ್ವರ ನಿಮಗೆ ಒಳ್ಳೆಯದು ಮಾಡಲ್ಲ. ಕೊಟ್ಟ ಮಾತು ಉಳಿಸಿಕೊಳ್ಳದ ನಿಮ್ಮನ್ನು ಸಿದ್ಧಲಿಂಗೇಶ್ವರ ಕ್ಷಮಿಸೋದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಭಿಕ್ಷೆಯಿಂದಲೇ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಅವರು ಮಾತಿಗೆ ತಪ್ಪಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ನಾಯಕತ್ವದ ಬಗ್ಗೆ ಅಸಮಾಧಾನಗೊಂಡು ಬಂಡೆದ್ದು ಬಂದ ಎಲ್ಲ 17 ಮಂದಿಗೂ ಸಚಿವ ಸ್ಥಾನ ನೀಡುವುದು ಆದ್ಯತೆ ಆಗಿತ್ತು. ನಾವು ಬಂಡೇಳದಿದ್ದರೆ, ಬಿಜೆಪಿ ಸರ್ಕಾರ ರಚನೆ ಆಗಲು ಅವಕಾಶವೇ ಇರಲಿಲ್ಲ” ಎಂದು ಕಿಡಿ ಕಾರಿದ್ದಾರೆ.

ಇನ್ನು ಹಾಲಿ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದ್ದು, ಬೇರೆ ಯಾವುದಾದರೂ ಸಮನಾಂತರ ಹುದ್ದೆ ನೀಡುವುದಾಗಿ ಭರವಸೆ ನೀಡಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೈತರ ಕೊರಳಿಗೆ ಬಿದ್ದ ರೇಶಿಮೆ ಕುಣಿಕೆ; ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಅವಲೋಕನ

ಆದರೆ ನಾಗೇಶ್‌ ಅವರನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಅವರ ಬೆಂಬಲಿಗರು ಮುಖ್ಯಮಂತ್ರಿಯವರ ನಿವಾಸ ‘ಕೃಷ್ಣಾ’ದ ಮುಂದೆ ಪ್ರತಿಭಟನೆ ನಡೆಸಿದರು. “ಬಲಗೈ ಸಮುದಾಯಕ್ಕೆ ಸೇರಿದ ನಾಗೇಶ್‌ ಅವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಬಿಜೆಪಿ ಸರ್ಕಾರ ರಚನೆಯಾಗಲು ಪ್ರಮುಖ ಕಾರಣರೂ ಆಗಿದ್ದು, ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಕಾರಣರಾಗಿದ್ದಾರೆ” ಎಂದು ವಾದಿಸಿದರು.

ಬಳ್ಳಾರಿಯ ರೆಡ್ಡಿ ಸಹೋದರರಾದ ಸೋಮಶೇಖರ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ಅವರು ಮುನಿಸಿಕೊಂಡು ಹೊಸಪೇಟೆಯಲ್ಲಿ ನಡೆದ ಜನಸೇವಕ ಸಮಾವೇಶ ಬಹಿಷ್ಕರಿಸಿದ್ದಾರೆ.

ಒಟ್ಟಾರೆಯಾಗಿ ಈಗ ಬಿಜೆಪಿಯ ಒಳಗೆ ಬಿರುಕು ಬಿಡಲು ಪ್ರಾರಂಭವಾಗಿದ್ದು, ಇದು ಬಿರುಸಾಗುತ್ತಲೇ ಇದೆ. ಬಹುಶಃ ಈ ತಾಪತ್ರಯದಿಂದಲೆ ಯಡಿಯೂರಪ್ಪನವರು ಇಷ್ಟುದಿನ ಸಂಪುಟ ವಿಸ್ತರಣೆಗೆ ಮೀನ-ಮೇಷ ಎಣಿಸುತ್ತಿದ್ದರು ಎನಿಸುತ್ತಿದೆ.

ಈ ಭಿನ್ನಮತೀಯರ ಅಸಮಾಧಾನವನ್ನು ಹತ್ತಿಕ್ಕಲು ಯಡಿಯೂರಪ್ಪನವರು ಯಾವ ತಂತ್ರ ಬಳಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ


ಇದನ್ನೂ ಓದಿ: ಲಾಬಿ ಮಾಡಿದವರು ಸಚಿವರಾಗುತ್ತಾರೆ, ನನಗೆ ಬೇಸರವಾಗಿದೆ: ಶಾಸಕ ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...