Homeಕರ್ನಾಟಕಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ

- Advertisement -
- Advertisement -

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ”ನೇರ, ನಿಷ್ಠುರ ಮಾತುಗಳೇ ನನಗೆ ಮುಳುವಾಯಿತು. ಲಾಬಿ ಮಾಡಿದವರು ಸಚಿವರಾಗುತ್ತಾರೆ. ಯಾರ ಬಳಿಯೂ ಲಾಬಿ ಮಾಡುವ ಹವ್ಯಾಸ ನನಗೆ ಇಲ್ಲ. ಅದು ನನ್ನ ಅಪರಾಧ. ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ” ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ನಿವೃತ್ತಿಯ ಬಗ್ಗೆ BJP ಹೈಕಮಾಂಡ್ ಹೇಳಿದ್ದೇನು?

“ಇದು ಬೆಂಗಳೂರು-ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು” ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ, ವಿಜಯಪುರ ಶಾಸಕ ಬಸನಗೌಡ ಪಾಟಿಲ ಯತ್ನಾಳ್, ಸಂಕ್ರಾಂತಿಯ ನಂತರ ಯಡಿಯೂರಪ್ಪ ಅವರ ಅಧಃಪತನ ಆರಂಭವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಮೂರು ಬ್ಲ್ಯಾಕ್‌ಮೇಲರ್‌ಗಳನ್ನು ಮಂತ್ರಿಗಳನ್ನಾಗಿ ಮಾಡುತ್ತಿದ್ದಾರೆ. ಸಂಕ್ರಾಂತಿಯ ನಂತರ ಅವರ ಅಧಃಪತನ ಪ್ರಾರಂಭವಾಗುತ್ತದೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಃಪತನ ಆರಂಭ: ಯತ್ನಾಳ್

ಬೊಮ್ಮನಹಳ್ಳಿಯ ಶಾಸಕ ಸತಿಶ್ ರೆಡ್ಡಿ ಟ್ವೀಟ್ ಮಾಡಿ, “ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಅನಂತಕುಮಾರ್ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದಕ್ಕೆ ಬೆಂಬಲವಿದೆ: ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಸುನಿಲ್ ಕುಮಾರ್ ಕಾರ್ಕಳ ಟ್ವೀಟ್ ಮಾಡಿ, “ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ. ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ತಕ್ಷಣವೇ ರಾಜೀನಾಮೆ ಕೊಡಿ, ಇಲ್ಲದಿದ್ದರೆ ವಜಾಗೊಳಿಸಲಾಗುವುದು’ – ಯಡಿಯೂರಪ್ಪ ಎಚ್ಚರಿಕೆ

ಮತ್ತೋರ್ವ ವಿಧಾನ ಪರಿಷತ್ ಸದಸ್ಯರಾದ ಎಚ್‌ ವಿಶ್ವನಾಥ್ ಮೈಸೂರಿನಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, “ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಅದೇ ರೀತಿ ಯಡಿಯೂರಪ್ಪನವರ ಪ್ರತಿಷ್ಠೆ ಡೆಮಾಲಿಷ್ ಆಗೋಕೂ ವಿಜಯೇಂದ್ರರೇ ಕಾರಣ. ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಯಡಿಯೂರಪ್ಪ ಸಂಪಾದಿಸಿದ್ದ ಹೆಸರು ಹಾಳಾಗುತ್ತಿದೆ. ಎಲ್ಲಾದಕ್ಕೂ ಸುಮ್ಮನೆ ಹೈಕಮಾಂಡ್ ಹೆಸರು ಬಳಸಬೇಡಿ. ಕರ್ನಾಟಕಕ್ಕೆ ಬಿಎಸ್ ಯಡಿಯೂರಪ್ಪರೇ ಹೈಕಮಾಂಡ್” ಎಂದು ಕಿಡಿ ಕಾರಿದ್ದಾರೆ.

“ಯೋಗೇಶ್ವರ್‌ ಅವರದ್ದು ಟೋಟಲಿ ಬ್ಲಾಕ್ ಮೇಲ್ ತಂತ್ರ. ಆ ಬ್ಲಾಕ್ ಮೇಲ್ ಏನಂತ ಯಾವತ್ತಾದರೂ ಒಂದು ದಿನ ಹೊರಗೆ ಬರುತ್ತೆ. ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದುಕೊಳ್ಳೋದೆ ಮಾನದಂಡವೇ..? ಯೋಗೇಶ್ವರ್ ಬಾಂಬೆಯಲ್ಲಿ ಬ್ಯಾಗ್ ಹಿಡಿದ್ದಿದ್ದು ಬಿಟ್ರೆ ಮತ್ತೇನು ಮಾಡಿಲ್ಲ. ಈ ಎಲ್ಲ ಬೆಳವಣಿಗೆಯಿಂದ ನನಗೆ ನೋವಾಗಿದೆ. ನಾವು ಮನುಷ್ಯರು, ನಮಗೂ ಹೃದಯ ಇದೆ, ನಮಗೂ ನೋವಾಗುತ್ತೆ. ಯಡಿಯೂರಪ್ಪನವರೇ ಸಿದ್ಧಲಿಂಗೇಶ್ವರ ನಿಮಗೆ ಒಳ್ಳೆಯದು ಮಾಡಲ್ಲ. ಕೊಟ್ಟ ಮಾತು ಉಳಿಸಿಕೊಳ್ಳದ ನಿಮ್ಮನ್ನು ಸಿದ್ಧಲಿಂಗೇಶ್ವರ ಕ್ಷಮಿಸೋದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಭಿಕ್ಷೆಯಿಂದಲೇ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಅವರು ಮಾತಿಗೆ ತಪ್ಪಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ನಾಯಕತ್ವದ ಬಗ್ಗೆ ಅಸಮಾಧಾನಗೊಂಡು ಬಂಡೆದ್ದು ಬಂದ ಎಲ್ಲ 17 ಮಂದಿಗೂ ಸಚಿವ ಸ್ಥಾನ ನೀಡುವುದು ಆದ್ಯತೆ ಆಗಿತ್ತು. ನಾವು ಬಂಡೇಳದಿದ್ದರೆ, ಬಿಜೆಪಿ ಸರ್ಕಾರ ರಚನೆ ಆಗಲು ಅವಕಾಶವೇ ಇರಲಿಲ್ಲ” ಎಂದು ಕಿಡಿ ಕಾರಿದ್ದಾರೆ.

ಇನ್ನು ಹಾಲಿ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದ್ದು, ಬೇರೆ ಯಾವುದಾದರೂ ಸಮನಾಂತರ ಹುದ್ದೆ ನೀಡುವುದಾಗಿ ಭರವಸೆ ನೀಡಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೈತರ ಕೊರಳಿಗೆ ಬಿದ್ದ ರೇಶಿಮೆ ಕುಣಿಕೆ; ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಅವಲೋಕನ

ಆದರೆ ನಾಗೇಶ್‌ ಅವರನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಅವರ ಬೆಂಬಲಿಗರು ಮುಖ್ಯಮಂತ್ರಿಯವರ ನಿವಾಸ ‘ಕೃಷ್ಣಾ’ದ ಮುಂದೆ ಪ್ರತಿಭಟನೆ ನಡೆಸಿದರು. “ಬಲಗೈ ಸಮುದಾಯಕ್ಕೆ ಸೇರಿದ ನಾಗೇಶ್‌ ಅವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಬಿಜೆಪಿ ಸರ್ಕಾರ ರಚನೆಯಾಗಲು ಪ್ರಮುಖ ಕಾರಣರೂ ಆಗಿದ್ದು, ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಕಾರಣರಾಗಿದ್ದಾರೆ” ಎಂದು ವಾದಿಸಿದರು.

ಬಳ್ಳಾರಿಯ ರೆಡ್ಡಿ ಸಹೋದರರಾದ ಸೋಮಶೇಖರ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ಅವರು ಮುನಿಸಿಕೊಂಡು ಹೊಸಪೇಟೆಯಲ್ಲಿ ನಡೆದ ಜನಸೇವಕ ಸಮಾವೇಶ ಬಹಿಷ್ಕರಿಸಿದ್ದಾರೆ.

ಒಟ್ಟಾರೆಯಾಗಿ ಈಗ ಬಿಜೆಪಿಯ ಒಳಗೆ ಬಿರುಕು ಬಿಡಲು ಪ್ರಾರಂಭವಾಗಿದ್ದು, ಇದು ಬಿರುಸಾಗುತ್ತಲೇ ಇದೆ. ಬಹುಶಃ ಈ ತಾಪತ್ರಯದಿಂದಲೆ ಯಡಿಯೂರಪ್ಪನವರು ಇಷ್ಟುದಿನ ಸಂಪುಟ ವಿಸ್ತರಣೆಗೆ ಮೀನ-ಮೇಷ ಎಣಿಸುತ್ತಿದ್ದರು ಎನಿಸುತ್ತಿದೆ.

ಈ ಭಿನ್ನಮತೀಯರ ಅಸಮಾಧಾನವನ್ನು ಹತ್ತಿಕ್ಕಲು ಯಡಿಯೂರಪ್ಪನವರು ಯಾವ ತಂತ್ರ ಬಳಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ


ಇದನ್ನೂ ಓದಿ: ಲಾಬಿ ಮಾಡಿದವರು ಸಚಿವರಾಗುತ್ತಾರೆ, ನನಗೆ ಬೇಸರವಾಗಿದೆ: ಶಾಸಕ ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...