Homeಕರ್ನಾಟಕಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ

- Advertisement -
- Advertisement -

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಬುಧವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಎಂ.ಪಿ. ರೇಣುಕಾಚಾರ್ಯ, ”ನೇರ, ನಿಷ್ಠುರ ಮಾತುಗಳೇ ನನಗೆ ಮುಳುವಾಯಿತು. ಲಾಬಿ ಮಾಡಿದವರು ಸಚಿವರಾಗುತ್ತಾರೆ. ಯಾರ ಬಳಿಯೂ ಲಾಬಿ ಮಾಡುವ ಹವ್ಯಾಸ ನನಗೆ ಇಲ್ಲ. ಅದು ನನ್ನ ಅಪರಾಧ. ವೈಯಕ್ತಿಕವಾಗಿ ನನಗೆ ಬೇಸರವಾಗಿದೆ. ಮಂತ್ರಿಗಿರಿ ಕೊಡಿ ಎಂದು ಯಾರಿಗೂ ನಾನು ಅರ್ಜಿ ಹಾಕಲ್ಲ” ಎಂದು ಪ್ರತಿಕ್ರಿಯಿಸಿದ್ದರು.

ಇದನ್ನೂ ಓದಿ: ಮುಖ್ಯಮಂತ್ರಿ ಯಡಿಯೂರಪ್ಪ ನಿವೃತ್ತಿಯ ಬಗ್ಗೆ BJP ಹೈಕಮಾಂಡ್ ಹೇಳಿದ್ದೇನು?

“ಇದು ಬೆಂಗಳೂರು-ಬೆಳಗಾವಿ ಕ್ಯಾಬಿನೆಟ್ ಆಗಿದೆ. ಮಧ್ಯ ಕರ್ನಾಟಕಕ್ಕೆ ಅನ್ಯಾಯವಾಗಿದೆ. ನನಗೆ ಬೇಸರವಾಗಿದೆ. ನಾವು ಯಾರ ಮುಂದೆ ಆಸಮಾಧಾನ ಹೇಳಿಕೊಳ್ಳಬೇಕು.‌ ಸ್ವಾಭಿಮಾನ ಬಿಟ್ಟು ಬದುಕುವ ವ್ಯಕ್ತಿ ನಾನಲ್ಲ.‌ ಕ್ಷೇತ್ರದ ಜನ ಹೇಳಿದಂತೆ ಕೇಳುವ ವ್ಯಕ್ತಿ ನಾನು” ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದರು.

ನೂತನ ಸಚಿವರ ಪಟ್ಟಿ ಬಿಡುಗಡೆಯಾಗುತ್ತಿದ್ದಂತೆಯೇ, ವಿಜಯಪುರ ಶಾಸಕ ಬಸನಗೌಡ ಪಾಟಿಲ ಯತ್ನಾಳ್, ಸಂಕ್ರಾಂತಿಯ ನಂತರ ಯಡಿಯೂರಪ್ಪ ಅವರ ಅಧಃಪತನ ಆರಂಭವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಅವರು ಮೂರು ಬ್ಲ್ಯಾಕ್‌ಮೇಲರ್‌ಗಳನ್ನು ಮಂತ್ರಿಗಳನ್ನಾಗಿ ಮಾಡುತ್ತಿದ್ದಾರೆ. ಸಂಕ್ರಾಂತಿಯ ನಂತರ ಅವರ ಅಧಃಪತನ ಪ್ರಾರಂಭವಾಗುತ್ತದೆ” ಎಂದು ಯತ್ನಾಳ್ ಹೇಳಿದ್ದಾರೆ.

ಇದನ್ನೂ ಓದಿ: ಸಂಕ್ರಾಂತಿ ನಂತರ ಯಡಿಯೂರಪ್ಪ ಅಧಃಪತನ ಆರಂಭ: ಯತ್ನಾಳ್

ಬೊಮ್ಮನಹಳ್ಳಿಯ ಶಾಸಕ ಸತಿಶ್ ರೆಡ್ಡಿ ಟ್ವೀಟ್ ಮಾಡಿ, “ಯಡಿಯೂರಪ್ಪನವರೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ಸಚಿವರ ಆಯ್ಕೆ ಪ್ರಕ್ರಿಯೆಯ ಮಾನದಂಡಗಳೇನು? ನಿಮಗೆ, ನಮ್ಮ ರಾಜ್ಯ ಮತ್ತು ರಾಷ್ಟ್ರದ ನಾಯಕರುಗಳಿಗೆ ನಿಷ್ಟಾವಂತ ಯುವ ಕಾರ್ಯಕರ್ತರು ಕಾಣುತ್ತಿಲ್ಲವೆ? ನಮ್ಮ ಕಷ್ಟ ನಷ್ಟಗಳನ್ನು ಆಲಿಸುತ್ತಿದ್ದ ಅನಂತಕುಮಾರ್ ಇಲ್ಲದಿರುವಿಕೆ ಎದ್ದು ಕಾಣುತ್ತಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕುರುಬರನ್ನು ಎಸ್‌ಟಿ ಪಟ್ಟಿಗೆ ಸೇರಿಸುವುದಕ್ಕೆ ಬೆಂಬಲವಿದೆ: ಸಿದ್ದರಾಮಯ್ಯ

ವಿಧಾನ ಪರಿಷತ್ ಸದಸ್ಯ ಸುನಿಲ್ ಕುಮಾರ್ ಕಾರ್ಕಳ ಟ್ವೀಟ್ ಮಾಡಿ, “ಪಕ್ಷ ನಿಷ್ಠೆ, ಕ್ಷೇತ್ರದ ಅಭಿವೃದ್ಧಿ, ಹಿಂದುತ್ವ ನನ್ನ ಅಜೆಂಡಾ. ನನಗೆ ಅನ್ಯ ಮಾರ್ಗ ತಿಳಿದಿಲ್ಲ. ಜಾತಿ ರಾಜಕೀಯದ ವೈಭವೀಕರಣ ಅರಿತಿಲ್ಲ. ಸ್ಥಾನಮಾನಕ್ಕೆ ಬ್ಲಾಕ್ ಮೇಲ್ ಮಾಡಿದವನಲ್ಲ. ಮುಂದೆಯು ಈ ಮಾರ್ಗ ಹಿಡಿಯುವುದಿಲ್ಲ” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ‘ತಕ್ಷಣವೇ ರಾಜೀನಾಮೆ ಕೊಡಿ, ಇಲ್ಲದಿದ್ದರೆ ವಜಾಗೊಳಿಸಲಾಗುವುದು’ – ಯಡಿಯೂರಪ್ಪ ಎಚ್ಚರಿಕೆ

ಮತ್ತೋರ್ವ ವಿಧಾನ ಪರಿಷತ್ ಸದಸ್ಯರಾದ ಎಚ್‌ ವಿಶ್ವನಾಥ್ ಮೈಸೂರಿನಲ್ಲಿ ತಮ್ಮ ಅಸಮಾಧಾನವನ್ನು ಹೊರಹಾಕಿದ್ದು, “ಯಡಿಯೂರಪ್ಪ ಮನೆಯಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ. ಯೋಗೇಶ್ವರ್ ಮಂತ್ರಿ ಆಗೋಕೆ ವಿಜಯೇಂದ್ರ ಕಾರಣ. ಅದೇ ರೀತಿ ಯಡಿಯೂರಪ್ಪನವರ ಪ್ರತಿಷ್ಠೆ ಡೆಮಾಲಿಷ್ ಆಗೋಕೂ ವಿಜಯೇಂದ್ರರೇ ಕಾರಣ. ಇಡೀ ವಿಧಾನಸೌಧದಲ್ಲಿ ಅವರ ಅಣ್ಣ ತಮ್ಮಂದಿರೇ ಕುಳಿತಿದ್ದಾರೆ. ಯಡಿಯೂರಪ್ಪ ಸಂಪಾದಿಸಿದ್ದ ಹೆಸರು ಹಾಳಾಗುತ್ತಿದೆ. ಎಲ್ಲಾದಕ್ಕೂ ಸುಮ್ಮನೆ ಹೈಕಮಾಂಡ್ ಹೆಸರು ಬಳಸಬೇಡಿ. ಕರ್ನಾಟಕಕ್ಕೆ ಬಿಎಸ್ ಯಡಿಯೂರಪ್ಪರೇ ಹೈಕಮಾಂಡ್” ಎಂದು ಕಿಡಿ ಕಾರಿದ್ದಾರೆ.

“ಯೋಗೇಶ್ವರ್‌ ಅವರದ್ದು ಟೋಟಲಿ ಬ್ಲಾಕ್ ಮೇಲ್ ತಂತ್ರ. ಆ ಬ್ಲಾಕ್ ಮೇಲ್ ಏನಂತ ಯಾವತ್ತಾದರೂ ಒಂದು ದಿನ ಹೊರಗೆ ಬರುತ್ತೆ. ರಾಜ್ಯದಲ್ಲಿ ಸಚಿವರಾಗೋಕೆ ಬ್ಯಾಗ್ ಹಿಡಿದುಕೊಳ್ಳೋದೆ ಮಾನದಂಡವೇ..? ಯೋಗೇಶ್ವರ್ ಬಾಂಬೆಯಲ್ಲಿ ಬ್ಯಾಗ್ ಹಿಡಿದ್ದಿದ್ದು ಬಿಟ್ರೆ ಮತ್ತೇನು ಮಾಡಿಲ್ಲ. ಈ ಎಲ್ಲ ಬೆಳವಣಿಗೆಯಿಂದ ನನಗೆ ನೋವಾಗಿದೆ. ನಾವು ಮನುಷ್ಯರು, ನಮಗೂ ಹೃದಯ ಇದೆ, ನಮಗೂ ನೋವಾಗುತ್ತೆ. ಯಡಿಯೂರಪ್ಪನವರೇ ಸಿದ್ಧಲಿಂಗೇಶ್ವರ ನಿಮಗೆ ಒಳ್ಳೆಯದು ಮಾಡಲ್ಲ. ಕೊಟ್ಟ ಮಾತು ಉಳಿಸಿಕೊಳ್ಳದ ನಿಮ್ಮನ್ನು ಸಿದ್ಧಲಿಂಗೇಶ್ವರ ಕ್ಷಮಿಸೋದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ನಮ್ಮ ಭಿಕ್ಷೆಯಿಂದಲೇ ಮುಖ್ಯಮಂತ್ರಿ ಆಗಿರುವ ಯಡಿಯೂರಪ್ಪ ಅವರು ಮಾತಿಗೆ ತಪ್ಪಿದ್ದಾರೆ. ಕಾಂಗ್ರೆಸ್‌ ಮತ್ತು ಜೆಡಿಎಸ್‌ನಲ್ಲಿ ನಾಯಕತ್ವದ ಬಗ್ಗೆ ಅಸಮಾಧಾನಗೊಂಡು ಬಂಡೆದ್ದು ಬಂದ ಎಲ್ಲ 17 ಮಂದಿಗೂ ಸಚಿವ ಸ್ಥಾನ ನೀಡುವುದು ಆದ್ಯತೆ ಆಗಿತ್ತು. ನಾವು ಬಂಡೇಳದಿದ್ದರೆ, ಬಿಜೆಪಿ ಸರ್ಕಾರ ರಚನೆ ಆಗಲು ಅವಕಾಶವೇ ಇರಲಿಲ್ಲ” ಎಂದು ಕಿಡಿ ಕಾರಿದ್ದಾರೆ.

ಇನ್ನು ಹಾಲಿ ಅಬಕಾರಿ ಸಚಿವ ಎಚ್ ನಾಗೇಶ್ ಅವರನ್ನು ರಾಜೀನಾಮೆ ನೀಡುವಂತೆ ಒತ್ತಾಯಿಸಲಾಗಿದ್ದು, ಬೇರೆ ಯಾವುದಾದರೂ ಸಮನಾಂತರ ಹುದ್ದೆ ನೀಡುವುದಾಗಿ ಭರವಸೆ ನೀಡಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ರೈತರ ಕೊರಳಿಗೆ ಬಿದ್ದ ರೇಶಿಮೆ ಕುಣಿಕೆ; ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನಲೆಯಲ್ಲಿ ಅವಲೋಕನ

ಆದರೆ ನಾಗೇಶ್‌ ಅವರನ್ನು ಕೈಬಿಡುವುದು ಖಚಿತವಾಗುತ್ತಿದ್ದಂತೆ ಅವರ ಬೆಂಬಲಿಗರು ಮುಖ್ಯಮಂತ್ರಿಯವರ ನಿವಾಸ ‘ಕೃಷ್ಣಾ’ದ ಮುಂದೆ ಪ್ರತಿಭಟನೆ ನಡೆಸಿದರು. “ಬಲಗೈ ಸಮುದಾಯಕ್ಕೆ ಸೇರಿದ ನಾಗೇಶ್‌ ಅವರನ್ನು ಯಾವುದೇ ಕಾರಣಕ್ಕೂ ಕೈಬಿಡಬಾರದು. ಬಿಜೆಪಿ ಸರ್ಕಾರ ರಚನೆಯಾಗಲು ಪ್ರಮುಖ ಕಾರಣರೂ ಆಗಿದ್ದು, ಇತ್ತೀಚಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಲು ಕಾರಣರಾಗಿದ್ದಾರೆ” ಎಂದು ವಾದಿಸಿದರು.

ಬಳ್ಳಾರಿಯ ರೆಡ್ಡಿ ಸಹೋದರರಾದ ಸೋಮಶೇಖರ ರೆಡ್ಡಿ ಮತ್ತು ಕರುಣಾಕರ ರೆಡ್ಡಿ ಅವರು ಮುನಿಸಿಕೊಂಡು ಹೊಸಪೇಟೆಯಲ್ಲಿ ನಡೆದ ಜನಸೇವಕ ಸಮಾವೇಶ ಬಹಿಷ್ಕರಿಸಿದ್ದಾರೆ.

ಒಟ್ಟಾರೆಯಾಗಿ ಈಗ ಬಿಜೆಪಿಯ ಒಳಗೆ ಬಿರುಕು ಬಿಡಲು ಪ್ರಾರಂಭವಾಗಿದ್ದು, ಇದು ಬಿರುಸಾಗುತ್ತಲೇ ಇದೆ. ಬಹುಶಃ ಈ ತಾಪತ್ರಯದಿಂದಲೆ ಯಡಿಯೂರಪ್ಪನವರು ಇಷ್ಟುದಿನ ಸಂಪುಟ ವಿಸ್ತರಣೆಗೆ ಮೀನ-ಮೇಷ ಎಣಿಸುತ್ತಿದ್ದರು ಎನಿಸುತ್ತಿದೆ.

ಈ ಭಿನ್ನಮತೀಯರ ಅಸಮಾಧಾನವನ್ನು ಹತ್ತಿಕ್ಕಲು ಯಡಿಯೂರಪ್ಪನವರು ಯಾವ ತಂತ್ರ ಬಳಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ


ಇದನ್ನೂ ಓದಿ: ಲಾಬಿ ಮಾಡಿದವರು ಸಚಿವರಾಗುತ್ತಾರೆ, ನನಗೆ ಬೇಸರವಾಗಿದೆ: ಶಾಸಕ ರೇಣುಕಾಚಾರ್ಯ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...