Homeಮುಖಪುಟಗಜ ಪ್ರಸವ ಮುಗಿದರೂ, ಇನ್ನೂ ಮುಗಿಯದ ಖಾತೆ ಖ್ಯಾತೆ..!

ಗಜ ಪ್ರಸವ ಮುಗಿದರೂ, ಇನ್ನೂ ಮುಗಿಯದ ಖಾತೆ ಖ್ಯಾತೆ..!

- Advertisement -
- Advertisement -

ಒಂದೆಡೆ ಸೋತು ಸಚಿವ ಸ್ಥಾನ ಮಿಸ್ ಮಾಡಿಕೊಂಡಿರುವವರ ಒತ್ತಡ, ಮತ್ತೊಂದೆಡೆ ಸಚಿವಗಿರಿ ಸಿಕ್ಕರೂ ಇಷ್ಟದ ಖಾತೆ ಸಿಗದೆ ಕ್ಯಾತೆ ತೆಗೆಯುತ್ತಿರುವವರ ಕಿರಿಕಿರಿ, ಸಾಲದ್ದಕ್ಕೆ `ಎಲ್ಲಿಂದಲೋ ಬಂದವರು’ ತಮ್ಮ ಪಕ್ಷದ ಸರ್ಕಾರದಲ್ಲಿ ಸಚಿವರಾಗೋದನ್ನು ಕಂಡು ಮರುಗುತ್ತಿರುವ ಮಂತ್ರಿಗಿರಿ ವಂಚಿತ ಮೂಲ ಬಿಜೆಪಿಗರ ಗೋಳಾಟ, ಹೈಕಮಾಂಡ್‍ನ ನಿರಂತರ ನಿರ್ಲಕ್ಷ್ಯ ಇವೆಲ್ಲವೂ ಮುಂದಿನ ದಿನಗಳಲ್ಲಿ ಯಡಿಯೂರಪ್ಪನವರ  ಸರ್ಕಾರಕ್ಕೆ ಸರಿಯಾಗೇ ಕಾಟಕೊಡಲು ಸಜ್ಜಾಗಿವೆ…..

ಕಳೆದ ಎರಡು ತಿಂಗಳಿನಿಂದ ಸಾಕ್ಷಾತ್ ಗಜ ಪ್ರಸವವೇ ಏನೋ ಎಂಬಂತೆ ಭಾಸವಾಗಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತ್ತು.

ಕೊನೆಗೆ ಉಮೇಶ್ ಕತ್ತಿ , ರೇಣುಕಾಚಾರ್ಯನಂತಹ ಸ್ವಪಕ್ಷೀಯ ಶಾಸಕರ ಅಸಮಾಧಾನದ ನಡುವೆಯೂ ಯಶಸ್ವಿಯಾಗಿ ಸಂಪುಟ ವಿಸ್ತರಿಸಿದ್ದ ಬಿಎಸ್‍ವೈ 10 ಜನ ವಲಸಿಗರಿಗೆ ಸಚಿವ ಸ್ಥಾನ ನೀಡುವ ಮೂಲಕ ಗಜ ಪ್ರಸವಕ್ಕೆ ಸ್ವಾಭಾವಿಕ ಹೆರಿಗೆಯನ್ನೇ ಮಾಡಿಸಿದ್ದರು. ಆದರೆ, ಸ್ವಾಭಾವಿಕ ಹೆರಿಗೆಯ ಖುಷಿ ರಾಜ್ಯ ಬಿಜೆಪಿ ಸರ್ಕಾರಕ್ಕೆ ತುಂಬಾ ದಿನ ಉಳಿಯುವ ಯಾವುದೇ ಲಕ್ಷಣ ಸದ್ಯಕ್ಕೆ ಕಾಣಿಸುತ್ತಿಲ್ಲ.

 

ಕಾಂಗ್ರೆಸ್-ಜೆಡಿಎಸ್ ಪಕ್ಷದಿಂದ ಬಿಜೆಪಿ ವಲಸೆಬಂದ ಶಾಸಕರು ನಿರೀಕ್ಷೆಯಂತೆ ಉಪ-ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಚಿವ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಮಹೇಶ್ ಕುಮಟಳ್ಳಿಗೆ ಹೊರತುಪಡಿಸಿ ಉಳಿದ ಎಲ್ಲಾ ಶಾಸಕರಿಗೂ ಸಂಪುಟ ದರ್ಜೆಯ ಸಚಿವ ಸ್ಥಾನವನ್ನೇನೋ ನೀಡಲಾಗಿದೆ.

ಆದರೆ, ಹೀಗೆ ಸಚಿವ ಸ್ಥಾನ ಪಡೆದಿರುವ ಶಾಸಕರು ಅಷ್ಟಕ್ಕೆ ತೃಪ್ತರಾಗದೆ ಇದೀಗ ಪ್ರತಿಯೊಬ್ಬರೂ ಇಂತಹದ್ದೇ ಖಾತೆ ಕೊಡಿ ಎಂದು ಬಿಎಸ್‍ವೈ ಎದುರು ಪ್ರಬಲ ಖಾತೆಗೆ ಬೇಡಿಕೆ ಇಡುತ್ತಿರುವುದು ಸಿಎಂ ತಲೆನೋವಿಗೆ ಕಾರಣವಾಗಿದೆ ಎನ್ನಲಾಗುತ್ತಿದೆ.
ಮತ್ತೊಂದೆಡೆ ಮಹೇಶ್ ಕುಮಟಳ್ಳಿ ಪರ ಮಾತನಾಡುವ ಭರದಲ್ಲಿ ಬಿಜೆಪಿ ಶಾಸಕ ಬಸಡನಗೌಡ ಪಾಟೀಲ್ ಯತ್ನಾಳ್ ದಿನಕ್ಕೊಂದು ಹೇಳಿಕೆ ನೀಡುತ್ತಿರುವುದು ಬಿಜೆಪಿ ಸರ್ಕಾರ ಮತ್ತು ಸ್ವತಃ ಯಡಿಯೂರಪ್ಪನವರಿಗೆ ಮತ್ತಷ್ಟು ಮುಜುಗರಕ್ಕೀಡುಮಾಡುತ್ತಿದೆ.

ಬಿಜೆಪಿಯಲ್ಲಿ ಮುಗಿಯದ ಖಾತೆ ಖ್ಯಾತೆ

ಕಳೆದ ಜೂನ್ ತಿಂಗಳಲ್ಲಿ ಬಿಜೆಪಿ ಸರ್ಕಾರದ ರಚನೆ ವೇಳೆ ಬಿ.ಎಸ್. ಯಡಿಯೂರಪ್ಪ ತಾವು ಕೊಟ್ಟ ಮಾತಿನಂತೆ ಕೊನೆಗೂ 10 ಜನ ವಲಸಿಗ/ಅರ್ಹ ಶಾಸಕರಿಗೆ ಸಚಿವ ಸ್ಥಾನ ನೀಡಿದ್ದಾರೆ. ಸ್ವಪಕ್ಷೀಯ ಹಿರಿಯ ನಾಯಕರು ಮತ್ತು ದೆಹಲಿಯ ಹೈಕಮಾಂಡ್ ನಾಯಕರ ವಿರೋಧ ಕಟ್ಟಿಕೊಂಡು ಕೊನೆಗೂ ಕೊಟ್ಟ ಮಾತು ಉಳಿಸಿಕೊಳ್ಳುವ ಮೂಲಕ ವಚನಭ್ರಷ್ಟ ಎಂಬ ಹಣೆಪಟ್ಟಿಯಿಂದ ತಪ್ಪಿಸಿಕೊಂಡಿದ್ದಾರೆ. ಆದರೆ, ಇದು ಇಲ್ಲಿಗೆ ಮುಗಿಯುವ ಕಥೆ ಅಲ್ಲ.

ಸೋಮವಾರ ರಾಜ್ಯಪಾಲರಿಗೆ ನೂತನ ಸಚಿವರ ಖಾತೆ ವಿವರದ ಪಟ್ಟಿಯನ್ನು ಕಳುಹಿಸಿದ್ದ ಬಿ.ಎಸ್. ಯಡಿಯೂರಪ್ಪ, ರಮೇಶ್ ಜಾರಕಿಹೊಳಿ – ಜಲ ಸಂಪನ್ಮೂಲ, ಡಾ.ಕೆ. ಸುಧಾಕರ್-ವೈದ್ಯಕೀಯ ಶಿಕ್ಷಣ, ಆನಂದ್ ಸಿಂಗ್-ಆಹಾರ ಮತ್ತು ನಾಗರಿಕ, ಶ್ರೀಮಂತ ಪಾಟೀಲ್- ಜವಳಿ ಇಲಾಖೆ, ನಾರಾಯಣ ಗೌಡ- ಪೌರಾಡಳಿತ ಮತ್ತು ತೋಟಗಾರಿಕೆ, ಎಸ್.ಟಿ. ಸೋಮಶೇಖರ್- ಸಹಕಾರ, ಶಿವರಾಂ ಹೆಬ್ಬಾರ್-ಕಾರ್ಮಿಕ, ಭೈರತಿ ಬಸವರಾಜು – ನಗರಾಭಿವೃದ್ಧಿ, ಗೋಪಾಲಯ್ಯ-ಸಣ್ಣ ಕೈಗಾರಿಕೆ ಹಾಗೂ ಬಿ.ಸಿ. ಪಾಟೀಲ್‍ಗೆ ಅರಣ್ಯ ಖಾತೆಯನ್ನು ನೀಡಿದ್ದರು.

 

ಆದರೆ, ಖಾತೆ ಹಂಚಿಕೆಯ ವಿವರಗಳು ಬಹಿರಂಗಗೊಳ್ಳುತ್ತಿದ್ದಂತೆ ಹಿರೇಕೆರೂರು ಕ್ಷೇತ್ರದ ಶಾಸಕ ಬಿ.ಸಿ. ಪಾಟೀಲ್ ಮತ್ತು ಕೋಲಾರದ ಶಾಸಕ ಡಾ. ಸುಧಾಕರ್ ಬಹಿರಂಗವಾಗಿಯೇ ತಗಾದೆ ತೆಗೆದಿದ್ದಾರೆ.

ಆರಂಭದಿಂದಲೂ ಬಿಸಿ ಪಾಟೀಲ್ ಗೃಹ ಇಲಾಖೆಯ ಮೇಲೆ ಕಣ್ಣಿಟ್ಟಿದ್ದರು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. “ಪೊಲೀಸ್ ಅಧಿಕಾರಿಯಾಗಿದ್ದ ನಾನು ಗೃಹ ಸಚಿವನಾಗಬೇಕು ಎಂಬುದು ಹಲವು ಪೊಲೀಸರ ಆಕಾಂಕ್ಷೆ” ಎಂದು ಅವರು ಬಹಿರಂಗವಾಗಿಯೇ ಹೇಳಿದ್ದರು. ಹೀಗಾಗಿ ಅರಣ್ಯ ಇಲಾಖೆ ಸ್ಥಾನಮಾನ ಸ್ವಾಭಾವಿಕವಾಗಿ ಅವರ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನೂ ಡಾ. ಸುಧಾಕರ್ ಆರಂಭದಲ್ಲೇ ತನಗೆ ಇಂಧನ ಖಾತೆ ನೀಡುವಂತೆ ಬಿಎಸ್‍ವೈ ಎದುರು ಬೇಡಿಕೆ ಇಟ್ಟಿದ್ದಾರೆ. ಇದಕ್ಕೆ ಬಿಎಸ್‍ವೈ ಸಹ ಸಮ್ಮತಿ ಸೂಚಿಸಿದ್ದರು ಎನ್ನಲಾಗುತ್ತಿದೆ. ಆದರೆ, ಇದೀಗ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆ ನೀಡಿರುವುದು ಸುಧಾಕರ್ ಅವರನ್ನು ಕೆರಳಿಸಿದೆ. ಹೀಗಾಗಿ ಈ ಇಬ್ಬರೂ ನಾಯಕರು ತಮಗೆ ಪ್ರಬಲ ಖಾತೆ ನೀಡುವಂತೆ ಬಹಿರಂಗವಾಗಿಯೇ ಪಟ್ಟು ಹಿಡಿದು ಕುಳಿತಿದ್ದಾರೆ.

ಪರಿಣಾಮ ಇವರನ್ನು ಸಮಾಧಾನಿಸಲು ಮುಂದಾಗಿರುವ ಸಿಎಂ ಬಿಎಸ್‍ವೈ ಮಂಗಳವಾರ ಮತ್ತೆ ಖಾತೆ ಮರುಹಂಚಿಕೆ ಮಾಡಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಹೆಚ್ಚುವರಿಯಾಗಿ ನೀಡಲಾಗಿದ್ದ ಕೃಷಿ ಖಾತೆಯನ್ನು ಇದೀಗ ಬಿಸಿ ಪಾಟೀಲ್‍ಗೆ ವಹಿಸಲಾಗಿದೆ.

ಬಿ.ಸಿ. ಪಾಟೀಲ್ ಮಾತ್ರವಲ್ಲದೆ ಇನ್ನೂ ನಾಲ್ವರು ಸಚಿವರಿಗೆ ಖಾತೆ ಮರುಹಂಚಿಕೆ ಮಾಡಲಾಗಿದೆ. ಆನಂದ ಸಿಂಗ್‍ಗೆ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಬದಲು ಅರಣ್ಯ ಹಾಗೂ ಜೈವಿಕ ಪರಿಸರ ಇಲಾಖೆಯನ್ನು ನೀಡಲಾಗಿದೆ. ಗೋಪಾಲಯ್ಯ ಅವರಿಗೆ ಸಣ್ಣ ಕೈಗಾರಿಕೆ ಬದಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ನೀಡಲಾಗಿದೆ.

ಶಿವರಾಮ್ ಹೆಬ್ಬಾರ್ ಅವರಿಗೆ ಕಾರ್ಮಿಕ ಇಲಾಖೆ ಜೊತೆಗೆ ಸಕ್ಕರೆ ಖಾತೆಯನ್ನೂ ನೀಡಲಾಗಿದೆ. ಸಚಿವ ಸಿ.ಸಿ. ಪಾಟೀಲ್‍ಗೆ ಗಣಿ ಮತ್ತು ಭೂವಿಜ್ಞಾನ ಖಾತೆಯ ಜೊತೆಗೆ ಹೆಚ್ಚುವರಿಯಾಗಿ ವಾಣಿಜ್ಯ ಮತ್ತು ಕೈಗಾರಿಕೆ ಖಾತೆಯನ್ನು ನೀಡಲಾಗಿದೆ.

ಈ ಪರಿಷ್ಕøತ ಪಟ್ಟಿಯನ್ನು ಈಗಾಗಲೇ ರಾಜಭವನಕ್ಕೆ ಕಳುಹಿಸಲಾಗಿದೆ. ಆದರೆ, ಡಾ. ಸುಧಾಕರ್ ಅವರ ಖಾತೆ ಬದಲಾವಣೆ ಕುರಿತು ಈ ಪಟ್ಟಿಯಲ್ಲಿ ಎಲ್ಲೂ ಉಲ್ಲೇಖಿಸದಿರುವುದು ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಮತ್ತಷ್ಟು ಅಸಮಾಧಾನಕ್ಕೆ ಕಾರಣವಾದರೂ ಅಚ್ಚರಿ ಇಲ್ಲ ಎಂದು ವಿಶ್ಲೇಷಿಸಲಾಗುತ್ತಿದೆ.

ಬಿಎಸ್‍ವೈಗೆ ಬಿಡದ ಶಾಸಕ ಯತ್ನಾಳ್ ಎಂಬ ತಲೆನೋವು
ಸಂಪುಟ ವಿಸ್ತರಣೆಗೂ ಮುನ್ನವೇ ತನಗೆ ಸಚಿವ ಸ್ಥಾನ ಇಲ್ಲ ಎಂಬ ವಿಚಾರವನ್ನು ಅರಿತಿದ್ದ ಶಾಸಕ ಮಹೇಶ್ ಕುಮಟಳ್ಳಿ, “ಮುಖ್ಯಮಂತ್ರಿ ಯಡಿಯೂರಪ್ಪ ಪ್ರಾಣ ಬಿಟ್ಟರೂ ಬಿಟ್ಟಾರು ಆದರೆ, ಕೊಟ್ಟ ಮಾತು ಮಾತ್ರ ತಪ್ಪಲಾರರು. ಅವರು ನನಗೆ ಮಾತು ಕೊಟ್ಟಂತೆ ಸಚಿವ ಸ್ಥಾನ ನೀಡಿಯೇ ತೀರುತ್ತಾರೆ” ಎಂದು ವೀರಾವೇಶದ ಹೇಳಿಕೆ ನೀಡುವ ಮೂಲಕ ಹೊಸ ಆಟಕ್ಕೆ ಮುಂದಾಗಿದ್ದರು.

ಆದರೆ, ಇದ್ಯಾವುದಕ್ಕೂ ಕ್ಯಾರೆ ಎನ್ನದ ಯಡಿಯೂರಪ್ಪ ಬೆಳಗಾವಿಗೆ ಎರಡು ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದರು. ಅಲ್ಲದೆ, ಶಾಸಕ ಮಹೇಶ್ ಕುಮಟಳ್ಳಿಗೆ ಎಂಎಸ್‍ಐಎಲ್ (ಮೈಸೂರು ಸೇಲ್ಸ್ ಇಂಟರ್‍ನ್ಯಾಷನಲ್ ಲಿಮಿಟೆಡ್) ನಿಗಮದ ಅಧ್ಯಕ್ಷ ಸ್ಥಾನ ನೀಡಿ ಕೈತೊಳೆದುಕೊಂಡಿದ್ದರು.

ತನಗೆ ಸಚಿವ ಸ್ಥಾನ ಲಭಿಸುವುದಿಲ್ಲ ಎಂಬ ಸತ್ಯ ಅರಿವಾದ ಮೇಲೆ ಕುಮಟಳ್ಳಿ ಸಹ ಸ್ವಲ್ಪ ಮೆತ್ತಗಾಗಿದ್ದಾರೆ. ಹಠವನ್ನು ಪಕ್ಕಕ್ಕಿಟ್ಟು “ನಾನು ಒಬ್ಬ ಸಿವಿಲ್ ಇಂಜಿನಿಯರ್. ಹೀಗಾಗಿ ಎಂಎಸ್‍ಐಎಲ್ ಬದಲು ಬೇರೆ ಯಾವುದಾದರೂ ನಿಗಮ ಅಥವಾ ಮಂಡಳಿ ಕೊಟ್ಟರೆ ಕೆಲಸ ಮಾಡಲು ಸಿದ್ಧನಿದ್ದೇನೆ” ಎಂದು ಹೇಳುವ ಮೂಲಕ ತಮ್ಮ ಅಸಮಾಧಾನದಿಂದ ಪಕ್ಷಕ್ಕೆ ಆಗಬಹುದಾದ ಮುಜುಗರವನ್ನು ತಪ್ಪಿಸಿದ್ದರು.

ಆದರೆ, ಸಚಿವ ಸ್ಥಾನ ಸಿಗದ ಕುರಿತಾಗಿ ಸ್ವತಃ ಮಹೇಶ್ ಕುಮಟಳ್ಳಿ ಸುಮ್ಮನಾದರೂ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸುಮ್ಮನಾಗುವ ಯಾವುದೇ ಲಕ್ಷಣಗಳು ಕಾಣಿಸುತ್ತಿಲ್ಲ,

ಮಂಗಳವಾರ ವಿಜಯಪುರ ಜಿಲ್ಲೆಯಲ್ಲಿ ಈ ಕುರಿತು ಹೇಳಿಕೆ ನೀಡಿರುವ ಯತ್ನಾಳ್, “ಚುನಾವಣೆ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ತುಂಬು ಸಭೆಯಲ್ಲಿ ಕುಮಟಳ್ಳಿಯವರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಹೀಗಾಗಿ ಅವರು ಕೊಟ್ಟ ಮಾತು ಉಳಿಸಿಕೊಳ್ಳಬೇಕು ಇಲ್ಲದಿದ್ದರೆ, ಹೆಚ್.ಡಿ. ಕುಮಾರಸ್ವಾಮಿಯವರನ್ನು ಈ ಹಿಂದೆ ವಚನಭ್ರಷ್ಟ ಎಂದು ಬೈದಿದ್ದ ಬಿಎಸ್‍ವೈ ಸ್ವತಃ ವಚನಭ್ರಷ್ಟ ಎಂದೆನಿಸಿಕೊಳ್ಳುತ್ತಾರೆ” ಎಂದು ಹೇಳುವ ಮೂಲಕ ಸಿಎಂಗೆ ಟಾಂಗ್ ನೀಡಿದ್ದಾರೆ.

ಯತ್ನಾಳ್ ಹೀಗೆ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಪ್ರವಾಹದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪರಿಹಾರ ಹಣ ಬಿಡುಗಡೆ ಮಾಡದ ಕುರಿತಾಗಿ ಬಹಿರಂಗವಾಗಿ ಅಸಮಾಧಾನ ಹೊರಹಾಕುವ ಮೂಲಕ ಪಕ್ಷದಿಂದ ಷೊಕಾಸ್ ನೋಟಿಸ್ ಪಡೆದಿದ್ದರು. ಶಿಸ್ತು ಕ್ರಮಕ್ಕೂ ಒಳಗಾಗಿದ್ದರು.
ಅಲ್ಲದೆ, ತನಗೂ ಸಿಎಂ ಆಗುವ, ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷನಾಗುವ ಯೋಗ್ಯತೆ ಇದೆ ಎಂದು ಹೇಳುವ ಮೂಲಕ ಪಕ್ಷದ ವರಿಷ್ಠರ ಕೋಪಕ್ಕೆ ತುತ್ತಾಗಿದ್ದರು. ನಳಿನ್ ಕುಮಾರ್ ಕಟೀಲ್ ಅವರನ್ನು ಬಿಜೆಪಿ ನೂತನ ರಾಜ್ಯಾಧ್ಯಕ್ಷ ಎಂದು ಘೋಷಿಸಿದಾಗ ಬಹಿರಂಗವಾಗಿಯೇ ಕುಟುಕಿದ್ದರು.

ಒಂದೆಡೆ ಸಂಪುಟ ವಿಸ್ತರಣೆ, ಖಾತೆ ಹಂಚಿಕೆಯ ಖ್ಯಾತೆ ಸ್ವಪಕ್ಷೀಯರ ಬಂಡಾಯ ಮತ್ತು ಹೈಕಮಾಂಡ್ನ ನಿರಂತರ ಕಿರಿಕಿರಿಯಿಂದ ಈಗಾಗಲೇ ನಲುಗಿಹೋಗಿರುವ ಯಡಿಯೂರಪ್ಪನವರಿಗೆ ಯತ್ನಾಳ್ ಹೀಗೆ ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಸರ್ಕಾರ ವರ್ಚಸ್ಸಿಗೆ ಧಕ್ಕೆ ತರುತ್ತಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...