Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಖಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಭವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ 31 ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 12ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ 9-3 ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಜನರ ಲಾಬಿ

ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ 12 ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ 9 ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು 30 ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿತ್ತಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿಂದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ ಸಿಗದ ಶಾಂತಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ 17 ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊಂದು ಕಥೆ ಎಂಬಂತಾಗಿದೆ.

15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ 12 ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ 15 ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.17ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...