Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಖಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಭವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ 31 ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 12ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ 9-3 ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಜನರ ಲಾಬಿ

ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ 12 ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ 9 ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು 30 ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿತ್ತಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿಂದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ ಸಿಗದ ಶಾಂತಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ 17 ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊಂದು ಕಥೆ ಎಂಬಂತಾಗಿದೆ.

15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ 12 ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ 15 ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.17ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...