Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಖಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಭವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ 31 ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 12ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ 9-3 ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಜನರ ಲಾಬಿ

ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ 12 ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ 9 ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು 30 ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿತ್ತಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿಂದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ ಸಿಗದ ಶಾಂತಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ 17 ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊಂದು ಕಥೆ ಎಂಬಂತಾಗಿದೆ.

15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ 12 ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ 15 ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.17ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎರಡು ವರ್ಷದಲ್ಲಿ 532 ನಕ್ಸಲರ ಹತ್ಯೆ; 2004 ಜನರ ಬಂಧನ: ಛತ್ತೀಸ್‌ಗಢ ಉಪ ಮುಖ್ಯಮಂತ್ರಿ

2024 ರ ಜನವರಿಯಿಂದ ರಾಜ್ಯದಲ್ಲಿ 532 ನಕ್ಸಲರು ಸಾವನ್ನಪ್ಪಿದ್ದಾರೆ, 2004 ಜನರನ್ನು ಬಂಧಿಸಲಾಗಿದ್ದು, 2,700 ಜನರು ಶರಣಾಗಿದ್ದಾರೆ ಎಂದು ಛತ್ತೀಸ್‌ಗಢ ಉಪಮುಖ್ಯಮಂತ್ರಿ ವಿಜಯ್ ಶರ್ಮಾ ಶುಕ್ರವಾರ ಹೇಳಿದ್ದಾರೆ. 2026ರ ಮಾರ್ಚ್ 31 ರೊಳಗೆ...

ಅತ್ಯಾಚಾರ ಸಂತ್ರಸ್ತೆಯನ್ನು ವಿವಾಹವಾಗುವುದಾಗಿ ಒಪ್ಪಿದ ಪೋಕ್ಸೋ ಪ್ರಕರಣದ ಆರೋಪಿಗೆ ಜಾಮೀನು

ಅಸ್ಸಾಂ (ಬೊಂಗಾನ್): ಎರಡು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಕಳೊಂದಿಗೆ ಸ್ನೇಹ ಬೆಳೆಸಿದ ನಂತರ ಅವಳೊಂದಿಗೆ ಸಹವಾಸ ಮಾಡಿದ ಆರೋಪದ ಮೇಲೆ ಬಂಧಿಸಲ್ಪಟ್ಟ 24 ವರ್ಷದ ಯುವಕನಿಗೆ ಇಲ್ಲಿನ ಬೊಂಗಾನ್ ಉಪ-ವಿಭಾಗೀಯ ನ್ಯಾಯಾಲಯವು ಜಾಮೀನು...

ಕೇರಳ: ಪಾದಚಾರಿ ಮಾರ್ಗದಲ್ಲಿ ಸ್ಕೂಟರ್ ಸವಾರನನ್ನು ತಡೆದ ವೃದ್ಧೆಗೆ ಸಾರಿಗೆ ಅಧಿಕಾರಿಗಳಿಂದ ಸನ್ಮಾನ

ಕಳೆದ ಶುಕ್ರವಾರ ಕೋಝಿಕ್ಕೋಡ್‌ನಲ್ಲಿ ಸ್ಕೂಟರ್ ಸವಾರನೊಬ್ಬ ಪಾದಚಾರಿ ಮಾರ್ಗದಲ್ಲಿ ಬೈಕ್ ಚಾಲನೆ ಮಾಡುವುದುನ್ನು ತಡೆದ ವೃದ್ಧ ಮಹಿಳೆಯನ್ನು ಕೇರಳದ ಮೋಟಾರು ವಾಹನ ಇಲಾಖೆ (ಎಂವಿಡಿ) ಅಧಿಕಾರಿಗಳು ಸನ್ಮಾನಿಸಿದರು. ಮುಖ್ಯ ರಸ್ತೆಯಲ್ಲಿನ ದಟ್ಟಣೆಯನ್ನು ತಪ್ಪಿಸಲು ಎರಂಜಿಪಾಲಂನ...

ಫೆಬ್ರವರಿ 14, ಪ್ರೇಮಿಗಳ ದಿನದಂದು ನಂದಿ ಬೆಟ್ಟಕ್ಕೆ ಪ್ರವೇಶ ನಿರ್ಬಂಧ: ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಪ್ರವೇಶ ನಿಷೇಧಿಸಿದ ಜಿಲ್ಲಾಡಳಿತ 

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಫೆಬ್ರವರಿ 14 ರಂದು ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ನಂದಿ ಬೆಟ್ಟಕ್ಕೆ ಪ್ರವಾಸಿಗರು ಪ್ರವೇಶಿಸುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಬೆಂಗಳೂರಿನಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಈ...

ಮೊಹಮ್ಮದ್ ದೀಪಕ್ ಜಿಮ್‌ನಲ್ಲಿ ಸದಸ್ಯತ್ವ ಪಡೆದ 15 ಜನ ಹಿರಿಯ ಸುಪ್ರೀಂ ಕೋರ್ಟ್ ವಕೀಲರು

ಉತ್ತರಾಖಂಡದ ಕೋಟ್ದ್ವಾರದ ದೀಪಕ್ ಅವರ ಜಿಮ್‌ ಈ ಹಿಂದೆ 150 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿತ್ತು, ಜನನಿಬಿಡ ಕೇಂದ್ರವಾಗಿದ್ದ ದೀಪಕ್ ಕುಮಾರ್ ಅವರ 'ಹಲ್ಕ್' ಜಿಮ್‌ಗೆ, ಮುಸ್ಲಿಂ ವ್ಯಾಪಾರಿ ಪರವಾಗಿ ನಿಂತ ಬಳಿಕ...

ಮೀರತ್‌ನಲ್ಲಿ ‘ಲವ್ ಜಿಹಾದ್’ ಕಾನೂನಿನಡಿಯಲ್ಲಿ ಮುಸ್ಲಿಂ ವ್ಯಕ್ತಿ ವಿರುದ್ಧ ಪ್ರಕರಣ ದಾಖಲು; ಹಿಂದುತ್ವದ ಹೇಳಿಕೆಗಳನ್ನು ತಿರಸ್ಕರಿಸಿದ ಬೌದ್ಧ ವಧು

ಉತ್ತರ ಪ್ರದೇಶದ ಮುಸ್ಲಿಂ ವ್ಯಕ್ತಿಯೊಬ್ಬನ ವಿರುದ್ಧ ವಧುವಿನ ಚಿಕ್ಕಪ್ಪ ಆತನ ನಿಶ್ಚಿತಾರ್ಥದ ದಿನ ಅಂತರಧರ್ಮೀಯ ವಿವಾಹಕ್ಕೆ ಆಕ್ಷೇಪ ವ್ಯಕ್ತಪಡಿಸಿ ಪೊಲೀಸ್ ದೂರು ದಾಖಲಿಸಿದ್ದು, ಶುಕ್ರವಾರ ನಡೆಯಬೇಕಿದ್ದ ವಿವಾಹದ ಸುತ್ತ ಉದ್ವಿಗ್ನತೆ ಹೆಚ್ಚಾಗಿದೆ. ಈ ಪ್ರಕರಣವು...

ತಮಿಳುನಾಡು: ವಿಧಾನಸಭಾ ಚುನಾವಣೆಗೂ ಮುನ್ನ 1.31 ಕೋಟಿ ಮಹಿಳೆಯರ ಖಾತೆಗೆ 5000ರೂ ಜಮಾ ಮಾಡಿದ ಸ್ಟಾಲಿನ್ ಸರ್ಕಾರ

ಚೆನ್ನೈ: ವಿಧಾನಸಭಾ ಚುನಾವಣೆಗೆ ಮುನ್ನ ಮಹತ್ವದ ಹೆಜ್ಜೆಯಾಗಿ, ತಮಿಳುನಾಡಿನ ಡಿಎಂಕೆ ಸರ್ಕಾರ ಶುಕ್ರವಾರ ಮಹಿಳೆಯರಿಗೆ ಮಾಸಿಕ ರೂ.1,000 ಸಹಾಯ ಯೋಜನೆಯ 1.31 ಕೋಟಿ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ರೂ.5,000 ಜಮಾ ಮಾಡಿದೆ. ಏಪ್ರಿಲ್-ಮೇ ವಿಧಾನಸಭಾ...

17 ವರ್ಷಗಳ ಗಡಿಪಾರಿನ ಬಳಿಕ ತಾರಿಕ್ ರೆಹಮಾನ್ ರಾಜಕೀಯ ಪುನರಾಗಮನ; ಬಾಂಗ್ಲಾದೇಶ ಚುನಾವಣೆಯಲ್ಲಿ ಬಿಎನ್‌ಪಿಗೆ ಬಹುಮತ

17 ವರ್ಷಗಳ ಗಡಿಪಾರಾದ ನಂತರ ತಾರಿಕ್ ರೆಹಮಾನ್ ರಾಜಕೀಯವಾಗಿ ಪುನರಾಗಮನ ಮಾಡಿದ್ದಾರೆ. 2026 ರ ಬಾಂಗ್ಲಾದೇಶ ಚುನಾವಣೆಯಲ್ಲಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷವನ್ನು ಭರ್ಜರಿ ಗೆಲುವಿನತ್ತ ಕೊಂಡೊಯ್ದಿದ್ದಾರೆ. ಬಿಎನ್‌ಪಿ ಅಧ್ಯಕ್ಷರಾಗಿರುವ ತಾರಿಕ್ ಎರಡು ಕ್ಷೇತ್ರಗಳಿಂದ...

ಸುಡಾನ್: ನೈಲ್ ನದಿಯಲ್ಲಿ ದೋಣಿ ಮುಳುಗಿ ಕನಿಷ್ಠ 21 ಸಾವು, ಹಲವರು ನಾಪತ್ತೆ!

ಉತ್ತರ ಸುಡಾನ್‌ನ ನೈಲ್ ರಾಜ್ಯದ ನೈಲ್ ನದಿಯಲ್ಲಿ ಪ್ರಯಾಣಿಕರ ದೋಣಿ ಮುಳುಗಿದ ನಂತರ ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ಯುದ್ಧ ಪೀಡಿತ ದೇಶದ ನಾಗರಿಕ ರಕ್ಷಣಾ...

ಹೊಸಕೋಟೆ ಭೀಕರ ಅಪಘಾತದಲ್ಲಿ 7 ಮಂದಿ ಸಾವು: ಮೃತರಲ್ಲಿ 6 ಮಂದಿ 17-18 ವರ್ಷದ ವಿದ್ಯಾರ್ಥಿಗಳು!

ಬೆಂಗಳೂರು: ಫೆಬ್ರವರಿ 13, ಶುಕ್ರವಾರ ಬೆಳಗಿನ ಜಾವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯ ಹೊರವಲಯದಲ್ಲಿ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ಪೊಲೀಸರ ಪ್ರಕಾರ,...