Homeಮುಖಪುಟಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು... ಆದರೆ?

ಸಂಪುಟ ವಿಸ್ತರಣೆ: ಅಂತೂ ಗಜಪ್ರಸವಕ್ಕೆ ಸಮಯ ಬಂತು… ಆದರೆ?

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

- Advertisement -
- Advertisement -

ಉಪ ಚುನಾವಣೆ ಮುಗಿಯುತ್ತಿದ್ದಂತೆ ಸಂಪುಟ ವಿಸ್ತರಣೆ ಖಾಯಂ, ಡಿಸೆಂಬರ್ ಮುಗಿಯಲಿ ನೋಡೋಣ, ಧನುರ್ಮಾಸದಲ್ಲಿ ಸಂಪುಟ ವಿಸ್ತರಣೆ ಒಳ್ಳೆಯದಲ್ಲ, ಸಂಕ್ರಾಂತಿಯೊಂದು ಆಗಿಬಿಡಲಿ, ದಾವೋಸ್ ಸಮ್ಮೇಳನ ನಂತರ ಸಂಪುಟ ವಿಸ್ತರಣೆ ಖಚಿತ… ಅಬ್ಬಬ್ಬಾ! ಭಾಗಶಃ ಕಳೆದ ಎರಡು ತಿಂಗಳಿನ ಅವಧಿಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಿಎಎ ನಂತರ ಅತಿಹೆಚ್ಚು ಗಮನ ಸೆಳೆದ ವಿಚಾರ ಎಂದರೆ ರಾಜ್ಯ ಸಚಿವ ಸಂಪುಟ ವಿಸ್ತರಣೆಯೇ ಇರಬೇಕು.

ಬಿಎಸ್‌ವೈ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿ ಸಚಿವರಿಲ್ಲದೆ ಒನ್ ಮ್ಯಾನ್ ಶೋ ನೀಡುತ್ತಿದ್ದ ಸಂದರ್ಭದಲ್ಲೂ ಸಹ ಸಂಪುಟ ರಚನೆಗೆ ಇಷ್ಟೇ ವಿಳಂಭವಾಗಿತ್ತು ಎಂಬುದು ಉಲ್ಲೇಖಾರ್ಹ.

ಹಾಗೆ ನೋಡಿದರೆ, ಸಂಪುಟ ವಿಸ್ತರಣೆ ಮಾಡುವುದು ಶಿಸ್ತಿನ ಪಕ್ಷ ಎನಿಸಿಕೊಂಡ ಬಿಜೆಪಿಯಲ್ಲಿ ದೊಡ್ಡ ವಿಚಾರ ಏನಲ್ಲ. ಆದರೆ, ಅಧಿಕಾರದ ವಿಚಾರದಲ್ಲಿ ಯಾವ ಶಾಸಕನನ್ನೂ ಮುಂಚಿನಂತೆ ಶಿಸ್ತಿನ ಹೆಸರಲ್ಲಿ ಕಟ್ಟಿಹಾಕಲು ಸಾಧ್ಯವಿಲ್ಲ. ಸ್ವಲ್ಪ ಎಡವಿದರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಂತೆ ಬಿಜೆಪಿ ಸರ್ಕಾರವೂ ಅತೃಪ್ತರ ಭಿನ್ನಮತದಿಂದ ಪತನಗೊಳ್ಳುವುದು ಗ್ಯಾರಂಟಿ ಎಂಬ ವಿಚಾರ ತಿಳಿಯದ ಅಮಾಯಕರೇನಲ್ಲ ಯಡಿಯೂರಪ್ಪ ಮತ್ತು ಬಿಜೆಪಿ ಹೈಕಮಾಂಡ್.

ಇದೇ ಕಾರಣಕ್ಕೆ ಸಂಪುಟ ವಿಸ್ತರಣೆ ವಿಳಂಬವಾಗುತ್ತಲೇ ಇತ್ತು. ಆದರೆ, ಎಷ್ಟೇ ದಿನವಾದರೂ ಗಜಪ್ರಸವ ಕೊನೆಗೊಂದು ದಿನ ಆಗಲೇಬೇಕಲ್ಲ. ಆ ಕಾಲ ಸನ್ನಿಹಿತವಾಗಿದೆ. ಜನವರಿ 31 ರಂದು ಶತಾಯಗತಾಯ ಸಂಪುಟ ವಿಸ್ತರಣೆ ಆಗಲೇಬೇಕು ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ 12ಜನರಿಗೆ ಸಚಿವ ಸ್ಥಾನ ನೀಡಲು ಉದ್ದೇಶಿಸಿರುವ ಯಡಿಯೂರಪ್ಪ 9-3 ಸೂತ್ರಕ್ಕೆ ಮುಂದಾಗಿದ್ದಾರೆ. ಆದರೆ, ಬಿಜೆಪಿಯ ಪಕ್ಷದೊಳಗಿನ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಇದರ ಎರಡರಷ್ಟಿದೆ. ಇನ್ನೂ ಅರ್ಹ ಶಾಸಕರ ಗುಂಪಿನಲ್ಲೂ ಎದ್ದಿರುವ ಭಿನ್ನಮತವನ್ನು ಶಮನಗೊಳಿಸುವುದು ಬಿಜೆಪಿಗೆ ಅಷ್ಟು ಸುಲಭದ ಮಾತಲ್ಲ.

ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಜನರ ಲಾಬಿ

ಒಂದು ಕಡೆ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಸಚಿವ ಸ್ಥಾನ ಆಕಾಂಕ್ಷಿಗಳ ಲಾಬಿ ಶುರುವಾಗಿದೆ. ಈಗಾಗಲೇ ಸ್ವತಃ ಯಡಿಯೂರಪ್ಪ ಸ್ಪಷ್ಟಪಡಿಸಿರುವಂತೆ 12 ಜನರಿಗೆ ಮಾತ್ರ ಸಚಿವ ಸ್ಥಾನ ಈ ಪೈಕಿ 9 ಸ್ಥಾನ ವಲಸೆ/ಅರ್ಹ ಶಾಸಕರ ಪಾಲಾದರೆ, ಉಳಿದ ಮೂರು ಸ್ಥಾನಗಳು ಮಾತ್ರ ಮೂಲ ಬಿಜೆಪಿಗರಿಗೆ ಎನ್ನಲಾಗುತ್ತಿದೆ.

ಈ ಮೂರು ಸ್ಥಾನಗಳ ಪೈಕಿ ಎರಡು ಸ್ಥಾನಕ್ಕೆ ಈಗಾಗಲೇ ಶಾಸಕರನ್ನು ಫೈನಲ್ ಮಾಡಲಾಗಿದೆ ಎನ್ನುತ್ತಿವೆ ಬಿಜೆಪಿ ಮೂಲಗಳು. ಹಾಗೆ ನೋಡಿದರೆ ಮೂಲ ಬಿಜೆಪಿಗರಿಗೆ ಉಳಿಯುವುದು ಇನ್ನೂ ಒಂದು ಸ್ಥಾನ ಮಾತ್ರ. ಆದರೆ, ಈ ಒಂದು ಸ್ಥಾನಕ್ಕೆ ಸುಮಾರು 30 ಜನ ಬಿಜೆಪಿ ನಾಯಕರು ಸಾಲುಗಟ್ಟಿ ನಿಂತಿದ್ದಾರೆ.

ಹಿರಿಯ ಶಾಸಕರಾದ ದತ್ತಾತ್ರೇಯ ರೇವೂರ್ ಪಾಟೀಲ್, ಎಸ್. ಅಂಗಾರ, ಎಸ್.ಎ. ರಾಮದಾಸ್, ಮುರುಗೇಶ್ ನಿರಾಣಿ, ಅಪ್ಪಚ್ಚು ರಂಜನ್, ಬಸವನಗೌಡ ಪಾಟೀಲ್ ಯತ್ನಾಳ್, ಎಂ.ಪಿ. ರೇಣುಕಾಚಾರ್ಯ ಪೂರ್ಣಿಮ ಶ್ರೀನಿವಾಸ್, ಜಿ. ರಾಜುಗೌಡ, ವಿ. ಸುನೀಲ್‌ಕುಮಾರ್, ಹಾಲಪ್ಪ ಆಚಾರ್ ಹೀಗೆ ಸಚಿವ ಸ್ಥಾನ ಆಕಾಂಕ್ಷಿಗಳ ಪಟ್ಟಿ ಬೆಳೆಯುತ್ತಲೇ ಇದೆ.

ಯಡಿಯೂರಪ್ಪ ಪಾಲಿಗೆ ಬಿಸಿ ತುಪ್ಪವಾಗಲಿರುವ ಕತ್ತಿ

ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿ ಪಕ್ಷದ ಪ್ರಬಲ ನಾಯಕರ ಪೈಕಿ ಉಮೇಶ್ ಕತ್ತಿ ಅಗ್ರಗಣ್ಯರು. ಸತತ ೮ ಬಾರಿ ವಿಧಾನಸಭೆಗೆ ಸ್ಪರ್ಧಿಸಿ ಗೆಲುವು ಸಾಧಿಸಿರುವ ಕತ್ತಿ ಬೆನ್ನ ಹಿಂದೆ ರಾಜ್ಯದಲ್ಲಿ ಬೃಹತ್ ಮತಬ್ಯಾಂಕ್ ಹೊಂದಿರುವ ಲಿಂಗಾಯತ ಸಮಾಜ ಇದೆ. ಇದೇ ಧೈರ್ಯದಲ್ಲಿ ಕೆಲ ದಿನಗಳ ಹಿಂದೆ ಅವರು ಸ್ವತಂತ್ರ‍್ಯ ಉತ್ತರ ಕರ್ನಾಟಕ ರಾಜ್ಯದ ಕೂಗನ್ನು ಮುಂದಿತ್ತಿದ್ದರು.

ಆದರೆ, ಬಿಎಸ್‌ವೈ ಸಂಪುಟದಲ್ಲಿ ಎಲ್ಲಾ ಸಮಾಜದವರಿಗೂ ಅವಕಾಶ ಮಾಡಿಕೊಡಬೇಕು ಎಂಬ ಏಕೈಕ ಉದ್ದೇಶದಿಂದ ಉಮೇಶ್ ಕತ್ತಿ ಅವರಿಗೆ ಸಚಿವ ಸ್ಥಾನ ನಿರಾಕರಿಸಲಾಗಿತ್ತು. ಹೇಗಾದರೂ ಸಚಿವ ಸ್ಥಾನ ಪಡೆಯಲೇಬೇಕು ಎಂದು ನಿರ್ಧರಿಸಿದ್ದ ಕತ್ತಿ ಕಳೆದ ಆರು ತಿಂಗಳಿನಿಂದ ಪ್ರತಿನಿತ್ಯ ಯಡಿಯೂರಪ್ಪನವರ ಮನೆಗೆ ಎಡತಾಕುತ್ತಿದ್ದರು. ಆದರೆ, ಈ ಎಲ್ಲಾ ಪ್ರಯತ್ನ ವಿಫಲವಾಗಿವೆ. ಪರಿಣಾಮ ಇದೀಗ ಕತ್ತಿ ನೇರವಾಗಿ ದೆಹಲಿಗೆ ಹಾರಿದ್ದಾರೆ. ಹೈಕಮಾಂಡ್ ನಾಯಕರಿಂದ ಒತ್ತಡ ಹೇರಲು ಮುಂದಾಗಿದ್ದಾರೆ.

ಇಷ್ಟಾದರೂ ಒಂದು ವೇಳೆ ಉಮೇಶ್ ಕತ್ತಿಗೆ ಸಚಿವ ಸ್ಥಾನ ನಿರಾಕರಿಸಿದರೆ ಅವರು ಸುಮ್ಮನೆ ಕೂರುವವರಲ್ಲ. ರಾಜಕೀಯವಾಗಿ ಭವಿಷ್ಯದಲ್ಲಿ ಅವರು ಏನೇ ತಂತ್ರ ಹೂಡಿದರೂ ಅದರ ಫಲವನ್ನು ಯಡಿಯೂರಪ್ಪ ಅನುಭವಿಸಲೇಬೇಕು.

ಅರ್ಹ/ಅತೃಪ್ತರ ಆತ್ಮಗಳಿಗೂ ಸಿಗದ ಶಾಂತಿ

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ತಮಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಏಕೈಕ ಕಾರಣಕ್ಕ 17 ಜನ ಶಾಸಕರು ಸಾಮೂಹಿಕ ರಾಜೀನಾಮೆ ನೀಡುವ ಮೂಲಕ ಸರ್ಕಾರವನ್ನು ಬೀಳಿಸಿ ಬಿಜೆಪಿಗೆ ಹಾರಿದ್ದರು. ಸಚಿವ ಸ್ಥಾನದ ಆಸೆಯಿಂದಲೇ ಅವರೆಲ್ಲಾ ಬಿಜೆಪಿ ಪಾಲಾದರು ಎಂಬುದನ್ನು ಬೇರೆ ಬಿಡಿಸಿ ಹೇಳಬೇಕಿಲ್ಲ. ಆದರೆ, ಕಳೆದ ಉಪ ಚುನಾವಣೆಯ ನಂತರ ಈ ಎಲ್ಲಾ ಅರ್ಹ/ಅತೃಪ್ತ ಶಾಸಕರದ್ದೂ ಒಬ್ಬೊಬ್ಬರದ್ದು ಒಂದೊಂದು ಕಥೆ ಎಂಬಂತಾಗಿದೆ.

15 ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಪೈಕಿ 12 ಕ್ಷೇತ್ರದಲ್ಲಿ ಅನರ್ಹ ಶಾಸಕರು ಗೆಲುವು ಸಾಧಿಸಿದ್ದಾರೆ. ಯಡಿಯೂರಪ್ಪ ಮಾತಿಗೆ ಕಟ್ಟುಬಿದ್ದ ರಾಣಿಬೆನ್ನೂರು ಕ್ಷೇತ್ರದ ಆರ್.ಶಂಕರ್ ವಿಧಾನ ಪರಿಷತ್‌ಗೆ ನಾಮ ನಿರ್ದೇಶನಗೊಂಡು ಸಚಿವನಾಗುವ ಆಸೆಯಿಂದ ಶಾಸಕ ಸ್ಥಾನವನ್ನೂ ತ್ಯಾಗ ಮಾಡಿದ್ದಾರೆ. ಇನ್ನೂ ಚುನಾವಣೆಯಲ್ಲಿ ಸೋಲನುಭವಿಸಿರುವ ಎಂಟಿಬಿ ನಾಗರಾಜ್ ಮತ್ತು ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಸಹ ಪ್ರಮುಖ ಸಚಿವ ಸ್ಥಾನ ಆಕಾಂಕ್ಷಿಗಳು.

ಅಸಲಿಗೆ ಈ ಅತೃಪ್ತರ ಗುಂಪಿಗೆ ಯಡಿಯೂರಪ್ಪ ನೀಡಿರುವುದು ಕೇವಲ 9 ಸ್ಥಾನಗಳು ಮಾತ್ರ. ಆದರೆ, ಆಕಾಂಕ್ಷಿಗಳ ಸಂಖ್ಯೆ 15. ಹೀಗಾಗಿ ಈ ಗುಂಪಿನ ನಾಯಕ ರಮೇಶ್ ಜಾರಕಿಹೊಳಿ ಇದೀಗ ಅಕ್ಷರಶಃ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ.

ಈ 15 ಜನರಿಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ ಕಾರಣಕ್ಕೆ ಇವರು ಮೈತ್ರಿ ಸರ್ಕಾರವನ್ನೇ ಬೀಳಿಸಿದ್ದರು. ಆದರೆ, ಪ್ರಸ್ತುತ ಈ ಪೈಕಿ ಒಬ್ಬರಿಗೆ ಸಚಿವ ಸ್ಥಾನ ನೀಡದಿದ್ದರೂ ಸಹ ಮುಂದಾಗಬಹುದಾದ ಪರಿಣಾಮ ಏನು? ಎಂಬುದು ಇದೀಗ ರಮೇಶ್ ಜಾರಕಿಹೊಳಿ ಹಾಗೂ ಯಡಿಯೂರಪ್ಪ ತಲೆನೋವಿಗೆ ಕಾರಣವಾಗಿದೆ.

ಇನ್ನೂ ಫೆ.17ಕ್ಕೆ ವಿಧಾನ ಪರಿಷತ್ ಚುನಾವಣೆ ನಡೆಯಲಿದ್ದು, ಇರುವ ಒಂದು ಸ್ಥಾನಕ್ಕೆ ಆರ್.ಶಂಕರ್ ಹಾಗೂ ಲಕ್ಷ್ಮಣ ಸವದಿ ಪೈಪೋಟಿ ನಡೆಸುತ್ತಿದ್ದಾರೆ. ಆದರೆ, ಸ್ಥಾನ ಸವದಿಗೆ ಖಾಯಂ ಎನ್ನಲಾಗುತ್ತಿದೆ. ಇದು ಸಾಧ್ಯವಾದರೆ ಆರ್.ಶಂಕರ್ ಸ್ಥಿತಿ ಇರುವುದಲ್ಲೇ ಶೋಚನೀಯ ಎಂಬಂತಾಗುವುದರಲ್ಲಿ ಎರಡು ಮಾತಿಲ್ಲ.

ಒಟ್ಟಿನಲ್ಲಿ ಬಿಜೆಪಿ ಸಂಪುಟ ರಚನೆಗೆ ತೆಗೆದುಕೊಂಡದ್ದಕ್ಕಿಂತ ಹೆಚ್ಚಿನ ಸಮಯವನ್ನು ಸಂಪುಟ ವಿಸ್ತರಣೆ ತೆಗೆದುಕೊಂಡಿದೆ. ಆದರೂ, ಈವರೆಗೆ ಯಾವುದೇ ವಿವಾದವಿಲ್ಲದೆ, ಸಂಪುಟ ವಿಸ್ತರಣೆಯಾಗುವ ಯಾವ ಲಕ್ಷಣವೂ ಕಾಣಿಸುತ್ತಿಲ್ಲ. ಮುಂದಿನ ಒಂದು ವಾರಗಳ ಕಾಲ ಯಡಿಯೂರಪ್ಪನವರದ್ದು ಮಾತ್ರ ಬೆಂಕಿ ಮೇಲಿನ ನಡೆ ಎನ್ನಲು ಅಡ್ಡಿಯಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...