Homeಮುಖಪುಟಸಂಪುಟ ವಿಸ್ತರಣೆ ವಿಳಂಬ :ಪ್ರಕಟಗೊಳ್ಳದ ಸರ್ಕಾರದ ಹೊಸ ಡೈರಿಗಳು

ಸಂಪುಟ ವಿಸ್ತರಣೆ ವಿಳಂಬ :ಪ್ರಕಟಗೊಳ್ಳದ ಸರ್ಕಾರದ ಹೊಸ ಡೈರಿಗಳು

- Advertisement -
- Advertisement -

ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಕೂಡಿಬಂದಿಲ್ಲ. ಯಡಿಯೂರಪ್ಪ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು ವಾರ, ತಿಂಗಳು, ಅರ್ಧ ವರ್ಷ ಕಳೆದರೂ ಅದ್ಯಾಕೋ ಹೊಂದಾಣಿಕೆಯಾಗುತ್ತಿಲ್ಲ. ಇದೇ ಕಾರಣಕ್ಕೆ ಹೊಸ ವರ್ಷಕ್ಕೆ ಮುದ್ರಣಗೊಳ್ಳಬೇಕಿದ್ದ ಡೈರಿಗಳು ಇನ್ನೂ ಪ್ರಕಟವಾಗಿಲ್ಲ. ಸಂಪುಟ ವಿಸ್ತರಣೆಯಾಗುತ್ತಿಲ್ಲ. ಡೈರಿಗಳ ಮುದ್ರಣಕ್ಕೂ ಯೋಗ ಕೂಡಿ ಬಂದಿಲ್ಲ.

ಪ್ರತಿ ವರ್ಷ ಜನವರಿ ಮೊದಲ ವಾರದಲ್ಲೇ ಸರ್ಕಾರ ಡೈರಿಗಳನ್ನು ಮುದ್ರಣ ಮಾಡಿ ಹಂಚಿಕೆ ಮಾಡುತ್ತಿತ್ತು. ಎಲ್ಲಾ ಅಧಿಕಾರಿಗಳ ಕೈಯಲ್ಲಿ ಹೊಸ ಡೈರಿಗಳು ರಾರಾಜಿಸುತ್ತಿದ್ದವು. ಹೊಸ ಡೈರಿಗಳಲ್ಲೇ ಕಾರ್ಯಕ್ರಮದ ದಿನಾಂಕ, ಸ್ಥಳ ಮೊದಲಾದುವುಗಳನ್ನು ಗುರುತು ಹಾಕಿಕೊಳ್ಳುತ್ತಿದ್ದರು. ವಿವಿಧ ಕಚೇರಿಗಳಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸರ್ಕಾರಿ ನೌಕರರು ಹೊಸ ಡೈರಿಗಳನ್ನು ಪಡೆದು ಖುಷಿಯಾಗಿರುತ್ತಿದ್ದರು.

ಆದರೆ ಈ ಬಾರಿ ಹೊಸ ವರ್ಷದ ಆರಂಭದಲ್ಲೇ ಮುದ್ರಣಗೊಳ್ಳಬೇಕಿದ್ದ ಡೈರಿಗಳು ಇನ್ನೂ ಪ್ರಕಟಗೊಂಡಿಲ್ಲ. ಏಕೆಂದರೆ ಆ ಡೈರಿಗಳಲ್ಲಿ ಸಚಿವರ ಕುರಿತು ಸಮಗ್ರ ಮಾಹಿತಿ ಇರಬೇಕಿದೆ. ಸಂಪುಟ ವಿಸ್ತರಣೆ ಆಗದೇ ಸಚಿವರ ಹೆಸರುಗಳನ್ನು ಪ್ರಕಟಿಸಲು ಸಾಧ್ಯವಿಲ್ಲ. ಸಚಿವ ಸಂಪುಟ ವಿಸ್ತರಣೆ ಬೇಗ ಮುಗಿದುಹೋಗುತ್ತದೆ ಎಂದು ನಂಬಿದ್ದ ಮುಖ್ಯಮಂತ್ರಿಗಳಿಗೆ ಇದೀಗ ಬೇಸರ ತಂದಿರುವುದಂತೂ ಸತ್ಯ. ಜನವರಿ ತಿಂಗಳು ಮುಗಿದು ಫೆಬ್ರವರಿ ಮೊದಲ ವಾರವಾದರೂ ಡೈರಿ ಪ್ರಕಟ ಗೊಳ್ಳದೇ ಇರಲು ಸಚಿವ ಸಂಪುಟ ವಿಸ್ತರಣೆಯ ವಿಳಂಬವೇ ಕಾರಣ ಎಂದು ಅಧಿಕಾರಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಾರದೆ ಡೈರಿಯೂ ಪ್ರಕಟಗೊಳ್ಳುವುದಿಲ್ಲ ಎಂಬ ಕುಹಕದ ಮಾತುಗಳು ಕೇಳಿಬರತೊಡಗಿವೆ. ಡೈರಿ ಮುದ್ರಣಕ್ಕೆ ಸಿದ್ದ ಮಾಡಿಟ್ಟುಕೊಂಡಿದ್ದರೂ ಮುಖ್ಯಮಂತ್ರಿಗಳ ಗ್ರೀನ್ ಸಿಗ್ನಲ್ ಸಿಗದೆ ಮುದ್ರಕರು ಆದೇಶಕ್ಕಾಗಿ ಎದುರು ನೋಡುತ್ತಿದ್ದಾರೆ ಎನ್ನಲಾಗುತ್ತಿದೆ.

ಈಗ ಸಚಿವ ಸಂಪುಟ ಪೂರ್ಣ ಗೊಂಡಿಲ್ಲ. ಬಿಜೆಪಿ ಹೈಕಮಾಂಡ್ ಸಂಪುಟ ವಿಸ್ತರಣೆಗೆ ಫೆಬ್ರವರಿ 6ರಂದು ಅವಕಾಶ ನೀಡಿದ್ದು ಅಂದು ವಿಸ್ತರಣೆಯಾಗುವುದೇ ಎಂಬ ಅನುಮಾನಗಳು ವ್ಯಕ್ತವಾಗುತ್ತಿವೆ. ಒಂದೊಮ್ಮೆ ಫೆಬ್ರವರಿ 5ರಂದು ಸಂಪುಟ ವಿಸ್ತರಣೆಯಾದರೆ ಮುಂದಿನ ವಾರದಲ್ಲಿ ಅಧಿಕಾರಿಗಳಿಗೆ ಡೈರಿಗಳು ಸಿಗಬಹುದು. ಇಲ್ಲವಾದರೆ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...