Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...