Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...