Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...