Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಿಳಾ ಮೀಸಲಾತಿ ಮಸೂದೆ; ತ್ವರಿತ ಅನುಷ್ಠಾನಕ್ಕೆ ವಿಪಕ್ಷಗಳ ಅಭಿಪ್ರಾಯ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ: ಮಹಿಳಾ ಮೀಸಲಾತಿ ಕಾನೂನಿನ ಅನುಷ್ಠಾನವನ್ನು ತ್ವರಿತಗೊಳಿಸುವ ಪ್ರಯತ್ನದಲ್ಲಿ, ಲೋಕಸಭೆ ಮತ್ತು ರಾಜ್ಯ ಶಾಸಕಾಂಗ ಸಭೆಗಳಲ್ಲಿ ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಶಾಸನವನ್ನು ತಿದ್ದುಪಡಿ ಮಾಡುವ ಪ್ರಸ್ತಾಪದ ಕುರಿತು ಅಭಿಪ್ರಾಯಗಳನ್ನು...

ಕೋಲ್ಕತ್ತಾ : ಕಾಳಿಘಾಟ್ ಬಳಿಕ ದಕ್ಷಿಣೇಶ್ವರದಲ್ಲೂ ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ‘ಗೋ ಬ್ಯಾಕ್ ಘೋಷಣೆ’

ಕಾಳಿಘಾಟ್ ಬಳಿಕ ಕೋಲ್ಕತ್ತಾದ ದಕ್ಷಿಣೇಶ್ವರ ದೇವಸ್ಥಾನದಲ್ಲೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ದ 'ಗೋ ಬ್ಯಾಕ್ ಘೋಷಣೆಗಳು' ಕೇಳಿ ಬಂದಿವೆ. ಮಂಗಳವಾರ (ಮಾ.10) ಬೆಳಿಗ್ಗೆ ಜ್ಞಾನೇಶ್ ಕುಮಾರ್ ದಕ್ಷಿಣೇಶ್ವರ ಕಾಳಿ ದೇವಸ್ಥಾನಕ್ಕೆ ಭೇಟಿ...

ಉತ್ತರ ಪ್ರದೇಶ| ಹೋಳಿ ಹಬ್ಬದ ಶುಭ ಕೋರಿದ ದಲಿತ ಯುವಕನನ್ನು ಕೊಂದ ಪ್ರಬಲಜಾತಿ ಕುಟುಂಬ

ಉತ್ತರ ಪ್ರದೇಶದ ಲಕ್ನೋದ ದುಬಗ್ಗಾ ಪ್ರದೇಶದಲ್ಲಿ, ಹೋಳಿ ಹಬ್ಬದ ಸಂದರ್ಭದಲ್ಲಿ ಶುಭಕೋರಿದ 22 ವರ್ಷದ ದಲಿತ ವ್ಯಕ್ತಿಯನ್ನು ಬ್ರಾಹ್ಮಣ ಕುಟುಂಬದ ಸದಸ್ಯರು ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಈ ಘಟನೆ ಮಾರ್ಚ್ 4...

‘ಒಂದು ಲೀಟರ್ ತೈಲವನ್ನೂ ರಫ್ತು ಮಾಡುವುದಿಲ್ಲ’: ಟ್ರಂಪ್ ‘ಹಾರ್ಮುಜ್ ಜಲಸಂಧಿ ಸ್ವಾಧೀನ’ ಹೇಳಿಕೆಯ ನಂತರ ಕಠಿಣ ಎಚ್ಚರಿಕೆ ನೀಡಿದ ಇರಾನ್

ಟೆಹ್ರಾನ್: ಇಸ್ರೇಲ್-ಅಮೆರಿಕ ಮತ್ತು ಇರಾನ್ ನಡುವೆ ನಡೆಯುತ್ತಿರುವ ಸಂಘರ್ಷದ ಮಧ್ಯೆ, ತನ್ನ ವಿರುದ್ಧ ದಾಳಿಗಳು ಮುಂದುವರಿದರೆ, ಈ ಪ್ರದೇಶದಿಂದ ಒಂದು ಲೀಟರ್ ತೈಲವನ್ನು ರಫ್ತು ಮಾಡಲು ಸಹ ಇರಾನ್ ಅನುಮತಿಸುವುದಿಲ್ಲ ಎಂದು ಇರಾನ್...

ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು...

ಟ್ರಕ್ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣ : ಇಬ್ಬರು ಸ್ವಘೋಷಿತ ಗೋರಕ್ಷಕರ ಬಂಧನ

ಎಮ್ಮೆಗಳನ್ನು ಸಾಗಿಸುತ್ತಿದ್ದ ಟ್ರಕ್‌ ಚಾಲಕನಿಗೆ ಥಳಿಸಿ, ಸೆಗಣಿ ತಿನ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸ್ವಘೋಷಿತ ಗೋರಕ್ಷಕರನ್ನು ಮಹಾರಾಷ್ಟ್ರದ ಪುಣೆ ನಗರ ಪೊಲೀಸರು ಬಂಧಿಸಿದ್ದಾರೆ. ಬಿಪಾಶಾ ಅಲಿಯಾಸ್ ಆಕಾಶ್ ಮಾಣಿಕಂ ಮತ್ತು ಹೇಮಂತ್ ಗಾಯಕ್ವಾಡ್ ಬಂಧಿತರು....

ದೆಹಲಿ ಗಲಭೆ ಪ್ರಕರಣ : ಶಾರ್ಜೀಲ್ ಇಮಾಮ್‌ಗೆ 10 ದಿನಗಳ ಮಧ್ಯಂತರ ಜಾಮೀನು

ದೆಹಲಿ ಗಲಭೆ ಪ್ರಕರಣದಲ್ಲಿ ಬಂಧಿತರಾಗಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಸಂಶೋಧನಾ ವಿದ್ಯಾರ್ಥಿ ಶಾರ್ಜೀಲ್ ಇಮಾಮ್ ಅವರಿಗೆ ನ್ಯಾಯಾಲಯ ಸೋಮವಾರ (ಮಾ.9) 10 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ತನ್ನ ಸಹೋದರನ...

‘ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ..’; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ

'ಬಲಾಢ್ಯರ ಓಲೈಕೆಗಾಗಿ ಸಾಮಾಜಿಕ ನ್ಯಾಯದ ಸಮಾಧಿ ಮಾಡಲಾಗಿದೆ; ಬಜೆಟ್‌ನಲ್ಲಿ ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಲಾಗಿದೆ ಎಂದು 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟ' ಸಿದ್ದರಾಮಯ್ಯ ಅವರ ಬಜೆಟ್‌ ಕುರಿತು ಅಸಮಾಧಾನ ಹೊರಹಾಕಿದೆ. ಈ ಕುರಿತು...

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ. ಈ...

ನಾಸಿರ್–ಜುನೈದ್ ಕೊಲೆ ಪ್ರಕರಣ: ಜಾಮೀನಿನ ಮೇಲೆ ಹೊರಬಂದ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಗೆ ಗುರುಗ್ರಾಮದಲ್ಲಿ ಭವ್ಯ ಸ್ವಾಗತ 

2023 ರಲ್ಲಿ ಹರಿಯಾಣದಲ್ಲಿ ಗೋರಕ್ಷಣೆ ಹೆಸರಿನಲ್ಲಿ ಇಬ್ಬರು ಮುಸ್ಲಿಂ ಪುರುಷರ ಹತ್ಯೆ ಪ್ರಕರಣದ ಆರೋಪಿಯಾಗಿರುವ ಹಿಂದುತ್ವ ಕಾರ್ಯಕರ್ತ ಮೋನು ಮಾನೇಸರ್ ಅವರಿಗೆ ರಾಜಸ್ಥಾನ ಹೈಕೋರ್ಟ್ ಜಾಮೀನು ನೀಡಿದ ನಂತರ ಶನಿವಾರ ಸಂಜೆ ಭರತ್‌ಪುರ...