Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...