Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...