Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...