Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...