Homeಮುಖಪುಟವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ವರ್ಕೌಟ್ ಆಗದ ವಚನಾನಂದ ಸ್ವಾಮಿ ಧಮಕಿ : ಮರುಗೇಶ ನಿರಾಣಿಗಿಲ್ಲ ಸಚಿವ ಸ್ಥಾನ!

ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ 'ಕತ್ತಿ' ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ.

- Advertisement -
- Advertisement -

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದ ಬಹುತೇಕ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಅರ್ಹತೆ, ಅನುಭವ ಇದ್ದರೂ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳದೆ ದೂರವೇ ಇಡಲಾಗಿದೆ. ಉಮೇಶ್ ಕತ್ತಿ, ಮುರುಗೇಶ್ ನಿರಾಣಿ ಮೊದಲಾದವರಿಗೆ ಸಚಿವ ಸ್ಥಾನ ತಪ್ಪಿದೆ. ಇದು ಬಿಜೆಪಿಯಲ್ಲಿ ಭಿನ್ನಮತಕ್ಕೆ  ಕಾರಣವಾಗಬಹುದು. ಸಚಿವ ಸ್ಥಾನ ದೊರೆಯದೇ ಇರುವವರ ಮುಂದಿನ ನಡೆಯ ಬಗ್ಗೆ ಸದ್ಯಕ್ಕೆ ಏನೂ ಹೇಳಲು ಆಗದಿದ್ದರೂ ದೂರಗಾಮಿ ಪರಿಣಾಮ ಬೀರದೆ ಇರದು.

ಯಡಿಯೂರಪ್ಪ ಅಧಿಕಾರದಲ್ಲಿ ಇರಲಿ, ಬಿಡಲಿ  ಅವರನ್ನು ಎಡಬಿಡದೆ ಜೊತೆಯಲ್ಲಿದ್ದುಕೊಂಡು ಬಂದವರು ಉಮೇಶ್‌ ಕತ್ತಿ ಮತ್ತು ಮುರುಗೇಶ್ ನಿರಾಣಿ. ಎಂತಹ ಪರಿಸ್ಥಿತಿಯಲ್ಲೂ ಇವರಿಬ್ಬರು ಯಡಿಯೂರಪ್ಪ ಅವರನ್ನು ಬಿಟ್ಟು ಕೊಡಲಿಲ್ಲ. ಯಡಿಯೂರಪ್ಪ ಎಲ್ಲಿಗೆ ಹೋಗುತ್ತಾರೋ ಅಲ್ಲಿ ಇವರು ಇರುತ್ತಿದ್ದರು. ಅವರ ನೆರವಿಗೆ ಬರುತ್ತಿದ್ದರು. ಇದೇ ಕಾರಣಕ್ಕೆ ಉಮೇಶ್ ಕತ್ತಿ ಮತ್ತು ಮುರುಗೇಶ್ ನಿರಾಣಿಗೆ ಸಚಿವ ಸ್ಥಾನ ಸಿಗಲಿದೆ. ಯಡಿಯೂರಪ್ಪ ಇವರಿಬ್ಬರನ್ನು ಕೈಬಿಡಲ್ಲ  ಎಂಬುದು ಬಹುತೇಕರಿಗೆ ಖಚಿತವಾಗಿತ್ತು. ಈಗ ಅದೆಲ್ಲವೂ ಹುಸಿಯಾಗಿದೆ.

ಮುರುಗೇಶ ನಿರಾಣಿ

ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದ ಪಂಚಮಸಾಲಿಗರ ಸಮಾವೇಶದಲ್ಲಿ ವಚನಾನಂದ ಶ್ರೀಗಳು ಮುಖ್ಯಮಂತ್ರಿ ಸಮ್ಮುಖದಲ್ಲಿಯೇ ತಮ್ಮ ಸಮುದಾಯದ ಮುರುಗೇಶ್ ನಿರಾಣಿಗೆ ಮಂತ್ರಿ ಸ್ಥಾನ ಕೊಡಬೇಕು. ಇಲ್ಲಿದಿದ್ದರೆ ಸಮುದಾಯ ಮುಖ್ಯಮಂತ್ರಿಗಳನ್ನು ಕೈಬಿಡಲಿದೆ ಎಂದು ಧಮಕಿ ಹಾಕಿದ್ದರು. ಆಗ ಯಡಿಯೂರಪ್ಪ ಸಿಟ್ಟಿನಿಂದ ಎದ್ದುನಿಂತು ಹಾಗೆಲ್ಲ ಹೇಳಬೇಡಿ ಎಂದು ಹೇಳಿ ಸಾವರಿಸಿಕೊಂಡು ಕುಳಿತಿದ್ದರು. ಮುಖ್ಯಮಂತ್ರಿಗಳು ಆಗ ತಮ್ಮ ನಿಲುವನ್ನು ವ್ಯಕ್ತಪಡಿಸದೇ ಹೋದರೂ, ಈಗ ಧಮಕಿಗೆ ಮಣಿಯುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

ಸಚಿವ ಸಂಪುಟದ ವಿಸ್ತರಣೆಯಲ್ಲಿ ಪಂಚಮಸಾಲಿ ಸಮುದಾಯದ  ಒಬ್ಬರನ್ನೂ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳದೇ ಇರುವುದು ಪಂಚಮಸಾಲಿಗಳಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ವಚನಾನಂದ ಶ್ರೀಗಳು ಹಾಕಿದ ಧಮಕಿಯೂ ವರ್ಕೌಟ್ ಆಗಿಲ್ಲ. ಇದರಿಂದ ಶ್ರೀಗಳು ಬೇಸರಗೊಂಡು ಉತ್ತರ ಕರ್ನಾಟಕದಲ್ಲಿ ಪ್ರಬಲ ವಾಗಿರುವ ತಮ್ಮ ಪಂಚಮಸಾಲಿ ಸಮುದಾಯಕ್ಕೆ ಯಾವ ಸಂದೇಶವನ್ನು ರವಾನಿಸುತ್ತಾರೋ ನೋಡಬೇಕು. ರೇಣುಕಾಚಾರ್ಯ ಮೊದಲಾದವರು ಸಚಿವ ಸ್ಥಾನ ಬೇಕು ಎಂದು ಹೇಳಿಕೆಗಳನ್ನು ನೀಡುತ್ತಿದ್ದರೂ ಈ ಇಬ್ಬರು ಮಾತ್ರ ಮೌನವಾಗೇ ಹೆಜ್ಜೆಹಾರುತ್ತಾ ಬರುತ್ತಿದ್ದಾರೆ.

ಉಮೇಶ್‌ ಕತ್ತಿ

ಪ್ರತ್ಯೇಕ ರಾಜ್ಯದ ಮಾತುಗಳನ್ನಾಡುತ್ತ ಸುದ್ದಿಯಲ್ಲಿರುತ್ತಿದ್ದ ಉಮೇಶ್ ಕತ್ತಿ ಈಗ ಏನು ಮಾಡುತ್ತಾರೆಂಬುದು ಕುತೂಹಲ ಮೂಡಿಸಿದೆ. ತನಗೆ ಅನ್ಯಾಯವಾದಾಗಲೆಲ್ಲ ಪತ್ಯೇಕತೆಯ ಕೂಗು ಹಾಕುತ್ತ ‘ಕತ್ತಿ’ ಝಳಪಿಸುತ್ತಿದ್ದ ಉಮೇಶ್ ಕತ್ತಿ ನನಗೆ ಸಚಿವ ಸ್ಥಾನ ಬೇಡ., ನಾನು ಮುಖ್ಯಮಂತ್ರಿ ಆಗಿಯೇ ತೀರುತ್ತೇನೆ ಎನ್ನುತ್ತಿದ್ದವರು ಈಗ ಮೌನಕ್ಕೆ ಜಾರಿದ್ದಾರೆ. ಮೌನ ಸ್ಪೋಟಿಸಲು ಕಾಲ ಪಕ್ವವಾಗಬೇಕು. ‘ಪಕ್ವಕ್ಕಲ್ಲದೆ ಪರಿಣಾಮಕ್ಕಕ್ಕುಂ’ ಎಂಬ ಕವಿಯೊಬ್ಬರ ಮಾತಿನಂತೆ ಬೇಗುದಿ ಸ್ಪೋಟವಾದರೂ ಅಚ್ಚರಿ ಇಲ್ಲ.

ಸಂಪುಟ ವಿಸ್ತರಣೆಯ ಈ ಸಂದರ್ಭದಲ್ಲೂ ಉತ್ತರ ಕರ್ನಾಟಕವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಅಭಿವೃದ್ಧಿಗೆ ಶ್ರಮಿಸುತ್ತಿಲ್ಲ ಎಂದು ಕೂಗಾಡುತ್ತಿದ್ದ ಆ ಭಾಗದ ಶಾಸಕರು ಯಡಿಯೂರಪ್ಪ ಅವಧಿಯಲ್ಲಿ ಮೌನಕ್ಕೆ ಜಾರಿರುವುದು ಐತಿಹಾಸಿಕ ವ್ಯಂಗ್ಯ. ನಿರ್ಲಕ್ಷ್ಯಕ್ಕೆ ‘ಉತ್ತರ’ ನೀಡಬಲ್ಲುದೇ ಕರ್ನಾಟಕ? ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...