Homeಕರ್ನಾಟಕಅಸಮಾಧಾನ ಇದ್ದವರು ದೆಹಲಿಗೆ ಹೋಗಿ ದೂರು ನೀಡಲಿ: ಖಡಕ್ ಉತ್ತರ ನೀಡಿದ ಯಡಿಯೂರಪ್ಪ

ಅಸಮಾಧಾನ ಇದ್ದವರು ದೆಹಲಿಗೆ ಹೋಗಿ ದೂರು ನೀಡಲಿ: ಖಡಕ್ ಉತ್ತರ ನೀಡಿದ ಯಡಿಯೂರಪ್ಪ

"ಅತೃಪ್ತ ಶಾಸಕರು ಮನಸ್ಸಿಗೆ ಬಂದಂತೆ ಮಾತನಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಬಾರದು. ಯಾವುದೇ ಬೆಳವಣಿಗೆಯಾದರೂ ಪಕ್ಷದ ವರಿಷ್ಠರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ"

- Advertisement -
- Advertisement -

ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆಯಿಂದ ಬಿಜೆಪಿಯೊಳಗೆ ಬಿರುಕುಂಟಾಗಿದ್ದು, ಪಕ್ಷದ ಮುಖಂಡರು ಯಡಿಯೂರಪ್ಪನವರ ವಿರುದ್ಧ ಕಿಡಿ ಕಾರುತ್ತಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಯಡಿಯೂರಪ್ಪ, “ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಯಾವ ಶಾಸಕರಿಗೆ ಅಸಮಾಧಾನ ಇದೆಯೋ, ಅಂಥವರು ದೆಹಲಿಗೆ ಹೋಗಿ ದೂರು ನೀಡಲಿ. ನನಗೆ ಅಭ್ಯಂತರವಿಲ್ಲ” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಅತೃಪ್ತ ಶಾಸಕರು ಮನಸ್ಸಿಗೆ ಬಂದಂತೆ ಮಾತನಾಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುವ ಕೆಲಸ ಮಾಡಬಾರದು. ಯಾವುದೇ ಬೆಳವಣಿಗೆಯಾದರೂ ಪಕ್ಷದ ವರಿಷ್ಠರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ. ಪಕ್ಷದ ವರಿಷ್ಠರಿಗೆ ಯಾವುದು ಸರಿ ತಪ್ಪು ಎಂಬುದು ತಿಳಿದಿದೆ. ನಮ್ಮ ಶಾಸಕರು ವಿನಾಕಾರಣ ಹೇಳಿಕೆ ನೀಡುವ ಬದಲು ದೂರು ನೀಡಲಿ” ಎಂದು ಹೇಳಿದರು.

ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಒಟ್ಟಾರೆಯಾಗಿ ಈಗ ಬಿಜೆಪಿಯ ಒಳಗೆ ಬಿರುಕು ಬಿಡಲು ಪ್ರಾರಂಭವಾಗಿದ್ದು, ಇದು ಬಿರುಸಾಗುತ್ತಲೇ ಇದೆ. ಬಹುಶಃ ಈ ತಾಪತ್ರಯದಿಂದಲೆ ಯಡಿಯೂರಪ್ಪನವರು ಇಷ್ಟುದಿನ ಸಂಪುಟ ವಿಸ್ತರಣೆಗೆ ಮೀನ-ಮೇಷ ಎಣಿಸುತ್ತಿದ್ದರು ಎನಿಸುತ್ತಿದೆ. ಈ ಭಿನ್ನಮತೀಯರ ಅಸಮಾಧಾನವನ್ನು ಹತ್ತಿಕ್ಕಲು ಯಡಿಯೂರಪ್ಪನವರು ಯಾವ ತಂತ್ರ ಬಳಸಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.


ಇದನ್ನೂ ಓದಿ: ಹೆಣ್ಣುಮಕ್ಕಳು 15ನೇ ವಯಸ್ಸಿನಲ್ಲಿ ಮಕ್ಕಳನ್ನು ಪಡೆಯಬಹುದು – ಕಾಂಗ್ರೆಸ್ ಮುಖಂಡನ ವಿವಾದಾತ್ಮಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...