Homeಕರ್ನಾಟಕಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

ಮಹದೇಶ್ವರ ಬೆಟ್ಟದಲ್ಲಿ ಸಂಪುಟ ಸಭೆ: ಮೈಸೂರು ವಿಭಾಗದಲ್ಲಿ ₹3,647 ಕೋಟಿಯ ಯೋಜನೆಗಳು

- Advertisement -
- Advertisement -

ರಾಜ್ಯ ಸಚಿವ ಸಂಪುಟದ ವಿಶೇಷ ಸಭೆಯು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ (ಏ.24) ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಿತು.

ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಸಿಎಂ, ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕವಾದ ಸಚಿವ ಸಂಪುಟ ಸಭೆ ನಡೆಸಿದ್ದೇವೆ. ರಾಜ್ಯದ ನಾಲ್ಕು ವಿಭಾಗಗಳಲ್ಲಿ ಸಭೆ ನಡೆಸಲು ತೀರ್ಮಾನಿಸಿ ಈಗಾಗಲೇ ಕಲಬುರಗಿ ಆಗಿದೆ. ಈಗ ಮೈಸೂರು ವಿಭಾಗದ್ದು ನಡೆದಿದೆ. ಮುಂದಿನ ದಿನಗಳಲ್ಲಿ ಬೆಳಗಾವಿ ಹಾಗೂ ಬೆಂಗಳೂರು ವಿಭಾಗದ ಸಭೆಯನ್ನು ಮಾಡಲಿದ್ದೇವೆ. ಬೆಳಗಾವಿ ವಿಭಾಗದ್ದು ವಿಜಯಪುರ ಹಾಗೂ ಬೆಂಗಳೂರು ವಿಭಾಗದ್ದನ್ನು ನಂದಿ ಬೆಟ್ಟದಲ್ಲಿ ನಡೆಸಲು ತೀರ್ಮಾನಿಸಿದ್ದೇವೆ ಎಂದರು.

ಮೈಸೂರು ವಿಭಾಗದ 78 ವಿಷಯಗಳ ಬಗ್ಗೆ ಚರ್ಚೆ ಆಗಿದೆ. ಕಲಬುರಗಿ ‌ವಿಭಾಗದಲ್ಲಿ 56 ವಿಷಯಗಳ ತೀರ್ಮಾನ ಆಗಿತ್ತು. ಈಗ 3,647 ಕೋಟಿ ರೂಪಾಯಿ ಮೊತ್ತದ ಯೋಜನೆಗಳಿಗೆ ಸಭೆಯಲ್ಲಿ ಅನುಮೋದನೆ ‌ದೊರೆತಿದೆ. ಲೋಕೋಪಯೋಗಿ, ನೀರಾವರಿ, ಸಣ್ಣ ನೀರಾವರಿ, ಇಂಧನ, ಆರೋಗ್ಯ, ಆರ್‌ಡಿಪಿಆರ್ ಇಲಾಖೆ, ಕೆರೆಗಳಿಗೆ ನೀರು, ಬುಡಕಟ್ಟು ಅಭಿವೃದ್ಧಿ, ಹಾಡಿಗಳಿಗೆ ರಸ್ತೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ತಿಳಿಸಿದರು.


ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯಗಳು

  • ಸಣ್ಣ ನೀರಾವರಿ ಮತ್ತು ಜಲ ಸಂಪನ್ಮೂಲ ಇಲಾಖೆಗಳ ವತಿಯಿಂದ 29 ಕಾಮಗಾರಿಗಳನ್ನು 1,787.87 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ತೀರ್ಮಾನಿಸಲಾಗಿದೆ. ಈ ಮೂಲಕ ಮೈಸೂರು ಕಂದಾಯ ವಿಭಾಗದ ಜಿಲ್ಲೆಗಳ ಜಲಾಶಯ, ಕೆರೆಗಳು, ಕಾಲುವೆಗಳ ಅಭಿವೃದ್ಧಿ ಮಾಡುವುದರಿಂದ ಈ ಭಾಗದ ನೀರಾವರಿ ಚಟುವಟಿಕೆಗಳನ್ನು ಸಮಗ್ರವಾಗಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತದೆ.
  • ಪರಿಶಿಷ್ಟ ಪಂಗಡದ ಜನರು ವಾಸಿಸುವ ಪ್ರದೇಶಗಳ ಅಭಿವೃದ್ಧಿಗಾಗಿ ಪ್ರಮುಖವಾಗಿ ನಾಲ್ಕು ವಿಷಯಗಳಿಗೆ 203.2 ಕೋಟಿ ರೂ.ಗಳನ್ನು ವಿನಿಯೋಗಿಸಲು ನಿರ್ಧರಿಸಲಾಗಿದೆ.
  • ಪರೋಕ್ಷವಾಗಿ ಮಾನವ-ಆನೆ ಸಂಘರ್ಷ ತಡೆಗಟ್ಟಲು 210.2 ಕೋಟಿ ರೂ.ಗಳನ್ನು ಒದಗಿಸಲಾಗಿದೆ.
  • ಮೈಸೂರು ಭಾಗದ ನಗರಗಳ ಜನರ ಕುಡಿಯುವ ನೀರಿನ ಯೋಜನೆಗಳಿಗಾಗಿ ನಗರಾಭಿವೃದ್ಧಿ ಇಲಾಖೆ ವತಿಯಿಂದ 315 ಕೋಟಿ ರೂ., ಈ ಭಾಗದ ಜಿಲ್ಲೆಗಳ ಜನರ ಆರೋಗ್ಯ ಸುಧಾರಣೆಗೆ 228.14 ಕೋಟಿ ರೂ. ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಸುಮಾರು 300 ಕೋಟಿ ರೂ.ಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ.
  • ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಚಿಕ್ಕ ಕಲ್ಲೂರಿನಲ್ಲಿ ಶ್ರೀ ಮಂಟೇಸ್ವಾಮಿ, ಶ್ರೀ ರಾಚಪ್ಪಾಜಿ ಹಾಗೂ ಶ್ರೀ ಸಿದ್ದಪ್ಪಾಜಿ ಕ್ಷೇತ್ರಗಳ ಅಭಿವೃದ್ಧಿ ಪ್ರಾಧಿಕಾರ ರಚಿಸಲು ಸಂಪುಟ ಸಭೆ ತೀರ್ಮಾನಿಸಿದೆ.
  • ಮೈಸೂರಿನ ಇಲವಾಲದಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಿದೆ.
  • ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿಯವರು ನಂಜನಗೂಡು ತಾಲೂಕಿನ ಬದನವಾಳು ಗ್ರಾಮಕ್ಕೆ ಭೇಟಿ ನೀಡಿದ್ದರು. ಈ ಗ್ರಾಮಕ್ಕೆ ಮಹಾತ್ಮ ಗಾಂಧಿಯವರೂ ಭೇಟಿ ಕೊಟ್ಟಿದ್ದರು. ಅದರ ನೆನಪಿಗಾಗಿ ಶತಮಾನೋತ್ಸವ ಭವನ ಮತ್ತು ಗ್ರಾಮೀಣ ಅಭಿವೃದ್ಧಿ ಕೇಂದ್ರವನ್ನು ನಿರ್ಮಿಸಲು ತೀರ್ಮಾನಿಸಿದೆ.
  • ರನ್ ವೇ ವಿಸ್ತರಣೆ ಸೇರಿದಂತೆ ಮೈಸೂರು ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
  • ಬುಡಕಟ್ಟು ಸಮುದಾಯದ ಜನರು ವಾಸಿಸುವ ಪ್ರದೇಶದಲ್ಲಿ ರಸ್ತೆ, ಚರಂಡಿ, ವಿದ್ಯುತ್ ದೀಪ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
  • ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ವಿವಿಧ ತಾಲೂಕುಗಳಲ್ಲಿ ಕೆರೆಗಳನ್ನು ತುಂಬಿಸುವ, ಆಸ್ಪತ್ರೆಗಳ ಹಾಸಿಗೆ ಸಾಮರ್ಥ್ಯವನ್ನು ವಿಸ್ತರಿಸುವ, ವಿವಿಧ ಪ್ರವಾಸಿ ತಾಣಗಳನ್ನು ಅಭಿವೃದ್ಧಿಗೊಳಿಸುವ ತೀರ್ಮಾನವನ್ನೂ ಇಂದು ನಡೆದ ಸಭೆಯಲ್ಲಿ ಕೈಗೊಳ್ಳಲಾಗಿದೆ.
  • ಚಾಮರಾಜನಗರದಲ್ಲಿ ಹೊಸ ಪ್ರವಾಸಿ‌ ಮಂದಿರ ನಿರ್ಮಾಣ, ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಮಾಡಲು ಮತ್ತು ಕ್ರೀಡಾಂಗಣ ಅಭಿವೃದ್ಧಿಗೆ 15 ಕೋಟಿ ರೂ. ನೀಡಲು ಸಂಪುಟ ಸಭೆ ಒಪ್ಪಿದೆ.
  • ಕೊಳ್ಳೇಗಾಲದಲ್ಲಿ ಜಿಲ್ಲಾಸ್ಪತ್ರೆ ನಿರ್ಮಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈಗ ಇರುವ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ 250 ಹಾಸಿಗೆಗಳ ಆಸ್ಪತ್ರೆ ಮಾಡಲಾಗುವುದು. ಹೊಸ ತಾಲೂಕಾದ ಹನೂರಿನಲ್ಲಿ ತಾಲೂಕು ಭವನ, ತಾಲೂಕು ಆಸ್ಪತ್ರೆ (50 ಹಾಸಿಗೆ ಸಾಮರ್ಥ್ಯ) ನಿರ್ಮಿಸಲಾಗುವುದು ಎಂದು ಹೇಳಿದ್ದಾರೆ.

ಮಂಗಳೂರು | ಚಲಿಸುತ್ತಿದ್ದ ಬಸ್‌ನಲ್ಲೆ ಯುವತಿ ಮೇಲೆ ಕಂಡಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...