Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ' ಆಗ್ರಹ

ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿರುವುದೇ ಆದರೆ, ನಾಳಿನ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಗೆ ತಾತ್ವಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಹಿರಿಯ ನಾಯಕ ಆರ್. ಮೋಹನ್ ರಾಜ್ ಒತ್ತಾಯಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ನಮ್ಮ ಪಾಲನ್ನು ನಮಗೆ ಕೊಡಿ ಎಂದು ಪ್ರತಿಪಾದಿಸಿದ್ದರು” ಎಂದರು.

ಕಾಂಗ್ರೆಸ್ ಸರ್ಕಾರ ಎಸ್‌.ಎಂ ಕೃಷ್ಣ ಅವಧಿಯಲ್ಲಿ ಆಯೋಗ ರಚಿಸಿದೆ. ಕಳೆದ ಮೂವತ್ತು ವರ್ಷಗಳಿಂದ ಚಳವಳಿ ಮಾಡುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಲ್ಲ.  ಜನಸಂಖ್ಯೆ ಆಧಾರದಲ್ಲಿ ಪಾಲು ಸಿಗಬೇಕು ಎಂಬುವುದು ಕಾನ್ಶಿರಾಮ್ ಆಶಯವಾಗಿತ್ತು. ಎಲ್ಲಾ ಸಮುದಾಯಗಳು ಮೇಲೆ ಬರಬೇಕು ಎಂಬುವುದು ಬಹುಜನ ಚಳವಳಿಯ ಆಶಯವೂ ಹೌದು ಎಂದು ಹೇಳಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಈ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಿದೆ. ಪರಿಶಿಷ್ಟರ ನಿಧಿಯನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ಅಹಿಂದ ಹೋರಾಟಗಾರರೆಂದು ಹೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ಈ ಸಮುದಾಯದ ಬಗ್ಗೆ ಬದ್ಧತೆ ಇದ್ದರೆ ನಾಳಿನ ಸಭೆಯಲ್ಲಿ ಒಳಮೀಸಲಾತಿಗೆ ಅಂಗೀಕಾರ ನೀಡಬೇಕು  ಎಂದು ಆಗ್ರಹಿಸಿದರು.

ಈ ಹಿಂದೆ ವಿರೋಧಿಸುತ್ತಿದ್ದ ಸಮುದಾಯ ಇಂದು ಒಗ್ಗಟ್ಟಾಗಿದೆ. ಸಣ್ಣ ಪ್ರಮಾಣದಲ್ಲಿ ವಿರೋಧ ಇದೆ. ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿರುವ ಸಮುದಾಯ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಅವರ ಸಂಖ್ಯೆ ಕೇವಲ ಶೇ. 1ರಷ್ಟಿದೆ. ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡು ಒಳ ಮೀಸಲಾತಿ ಜಾರಿ ಮಾಡಬೇಕು. ಸುಪ್ರೀಂ ಕೋರ್ಟ್ ಮತ್ತು ಸಂವಿಧಾನಕ್ಕೆ ತಲೆಬಾಗಬೇಕು ಎಂದರು.

ಚಿಂತಕ ಶಿವಸುಂದರ್ ಮಾತನಾಡಿ, ಸರ್ಕಾರ ಕೈಗೆ ಸಿಕ್ಕಿದ್ದನ್ನು ತಪ್ಪಿಸಿಕೊಳ್ಳುತ್ತಿದೆ. ಇದನ್ನು ನಾವು ದಕ್ಕಿಸಿಕೊಳ್ಳಬೇಕು. ನಾಳಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಆಗದಿದ್ದರೆ ಏನು ಮಾಡಬೇಕು ಎಂದು ಯೋಚಿಸಬೇಕು. ಇದು ಸಾಮಾಜಿಕ ನ್ಯಾಯದ ಪ್ರಶ್ನೆ. ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಬೇಕು. ನಾವೆಲ್ಲರೂ ಜೊತೆಯಲ್ಲಿರೋಣ ಎಂದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ ಎಂಬುವುದು ಮಾತ್ರವಲ್ಲ. ಕೋರ್ಟ್‌ ಇತ್ತೀಚಿನ ದಿನಗಳಲ್ಲಿ ಜನಪರ ತೀರ್ಪು ನೀಡಿಲ್ಲ. ಅದರ, ನಡುವೆ ಈ ತೀರ್ಪು ಬಂದಿರುವುದು ಮುಖ್ಯ. ನಾನು ಕಂಡ ವಿಶಿಷ್ಟ ಆಂದೋಲನ ಇದಾಗಿದೆ. ಸತತ ಮೂರು ದಶಕಗಳ ಹೋರಾಟದಲ್ಲಿ ಇತರೆ ಸಮುದಾಯವನ್ನು ಒಪ್ಪಿಕೊಂಡು ಹೋರಾಟ ಮಾಡುತ್ತಾ ಬಂದಿರುವುದು ದೊಡ್ಡ ವಿಷಯ. ದಲಿತ ಚಳವಳ ನಿರಂತರವಾಗಿ ನಡೆದು ಬರುತ್ತಿರುವಾಗ ದುಷ್ಟ ಶಕ್ತಿಗಳ ನಡುವೆ ಹೋರಾಟ ಮಾಡಿದೆ. ಯಾವ ಸಂಚಿಗೂ ಬಲಿಯಾಗದೆ ಸಮುದಾಯವನ್ನು ಉಳಿಸಿಕೊಳ್ಳುವ ಕೆಲಸದ ಜೊತೆಗೆ, ವಿಚಾರ ಒಪ್ಪದ ಎಲ್ಲರನ್ನೂ ಮನವೊಲಿಸಿದೆ. ಈ ಹೋರಾಟಕ್ಕೆ ಬಹಳಷ್ಟು ಮಹತ್ವ ಇದೆ. ಇಡೀ ಸಮುದಾಯವನ್ನು ಒಪ್ಪಿಸಿದ್ದು ಬಹಳ ದೊಡ್ಡ ಜಯ ಎಂದು ಹೇಳಿದರು.

ಎರಡನಡೇ ಸಾಧನೆ ಕರ್ನಾಟಕದ ಎಲ್ಲಾ ಜನಪರ ಚಿಂತಕರು ಮತ್ತು ಸಂಘಟನೆಗಳನ್ನು ಈ ಹೋರಾಟಕ್ಕೆ ಒಪ್ಪಿಸಿದ್ದು. ಮೂರನೇ ಜಯ ಎಲ್ಲಾ ವಿರೋಧ ಪಕ್ಷಗಳು ಇದನ್ನು ಒಪ್ಪಿಕೊಳ್ಳಬೇಕಾಯಿತು. ನಾಲ್ಕನೆಯದ್ದಾಗಿ ನ್ಯಾಯಾಲಯವೂ ಕೂಡ ತೀರ್ಪು ನೀಡಿ ಬೆಂಬಲ ನೀಡಿದೆ. ಕಾಂಗ್ರೆಸ್ ಪಕ್ಷ ಎಂದರೆ ದ್ವಂದ್ವಗಳ ಪಕ್ಷ. ಅಲ್ಲಿ ಎಲ್ಲರೂ ಒಪ್ಪುತ್ತಾರೆ ಎಂಬುವುದು ಅನುಮಾನ. ಇದು ಜಾರಿಯಾಗಬಾರದು ಎಂಬ ಗುಂಪು ಕೆಲಸ ಮಾಡುತ್ತಿರುತ್ತದೆ. ಭಿನ್ನಾಪ್ರಾಯ ಬಂದಾಗ ಅವರು ಏನು ಮಾಡುತ್ತಾರೆ ಎನ್ನುವುದು ಮುಖ್ಯ ಎಂದರು.

ಅಡ್ಡಗೋಡೆ ಮೇಲೆ ದೀಪು ಇಡುವ ತೀರ್ಮಾಣ ನಾಳೆ ಬಂದರೂ ಬರಬಹುದು. ನಾಳೆ ಎಂದು ಕಾಯಿಸುವ ಆಪಾಯವೂ ಇದೆ. ಒಂದು ವೇಳೆ ಹಾಗಾದರೆ ನಾಡಿದ್ದು ಏನು ಎಂಬುವುದು ನಮ್ಮೆಲ್ಲರ ಮುಂದಿರುವ ಪ್ರಶ್ನೆ. ದಯವಿಟ್ಟೂ ಯಾವುದೇ ಗ್ಯಾಪ್ ಕೊಡಬಾರದು ಎಂಬುವುದು ಸಮಿತಿಗೆ ನನ್ನ ಸಲಹೆ. ಸರ್ಕಾರ ತೀರ್ಮಾಣ ಬರದಿದ್ದರೆ ನಾಡಿದ್ದರಿಂದ ಹೋರಾಟ ಮಾಡಬೇಕು. ಇಲ್ಲಿಯವರೆಗೆ ಮಾಡಿರುವ ಜನ ಹೋರಾಟದಿಂದಲೇ ತೀರ್ಪು ಕೂಡ ಬಂದಿರುವುದು. ಇದರ ಅಂತಿಮ ಫಲಿತಾಂಶ ಕೂಡ ಹೋರಾಟದಿಂದಲೇ ಆಗಬೇಕು ಎಂದು ಹೇಳಿದರು.

ಮುಂದಿನ ಹೋರಾಟ ಸಮುದಾಯದ ಮೇಲೆ ಮಾತ್ರ ಬೀಳದೆ ಎಲ್ಲಾ ಜನಪರ ಸಂಘಟನೆಗಳ ಜವಾಬ್ದಾರಿ ಆಗಬೇಕು. ಗೆಲುವು ಸಿಗುವವರೆಗೂ ಜೊತೆಯಲ್ಲಿದ್ದು ಹೋರಾಟ ಮಾಡೋಣ. ಮೂರು ದಶಕಗಳ ಹೋರಾಟಕ್ಕೆ ಗೆಲುವು ಸಿಗಬೇಕು. ಆದರೆ, ಗೆಲುವು ತಡವಾಗಬಾರದು. ಗೆಲುವು ಸಿಗದಿದ್ದರೆ ನಾಡಿದ್ದರಿಂದ ಮತ್ತೆ ಹೋರಾಟ ಮಾಡೋಣ.

ಮಾರಸಂದ್ರ ಮುನಿಯಪ್ಪ ಮಾತನಾಡಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಚಿತ್ರದುರ್ಗದ ಸಮಾವೇಶದಲ್ಲಿ ಸಿದ್ದರಾಮಯ್ಯ ಚುನಾವಣೆಗೂ ಮುಂಚೆ ಹೇಳಿದ್ದರು. ಬಿಜೆಪಿ ಕೂಡ ಕೇಂದ್ರಕ್ಕೆ ಪತ್ರ ಬರೆದು ನಮ್ಮನ್ನು ಯಾಮಾರಿಸಿತ್ತು. ರಾಜ್ಯದ ಮೂರು ಪಕ್ಷಗಳು ಏನೂ ಮಾಡಿಲ್ಲ. ಸುಪ್ರೀಂ ಕೋರ್ಟ್‌ ಮಾತ್ರ ತೀರ್ಪು ನೀಡಿದೆ. ತೀರ್ಪು ನೀಡಿ ಇಷ್ಟು ದಿನವಾದರೂ ಜಾರಿಗೆ ಮೀನಾಮೇಶ ಎಣಿಸುತ್ತಿರುವುದು ಏಕೆ? ಹೊಲೆಯರು, ಲಂಬಾಣಿ, ಭೋವಿಗಳು ವಿರೊಧ ಮಾಡುತ್ತಿಲ್ಲ. ಇಷ್ಟಿದ್ದರೂ ವಿಳಂಬ ಏಕೆ? ಸಾಯೋವರೆಗೂ ನಾವು ಹೋರಾಟ ಮಾಡಬೇಕು. ಸಾಯೋವರೆಗೂ ಕುಸ್ತಿ ಅಭ್ಯಾಸ ಮಾಡಿದರೆ ಕುಸ್ತಿ ಮಾಡುವುದು ಯಾವಾಗ? ಆಂದ್ರ, ಕರ್ನಾಟಕದಲ್ಲಿ ಈ ಹೋರಾಟದಲ್ಲಿ ಹಲವರು ಸತ್ತಿದ್ದಾರೆ. ನಾವು ಶತಾಯಗತಾಯ ಪ್ರಯತ್ನ ಮಾಡಿದರೂ ಬಿಎಸ್‌ಪಿಯಿಂದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಸುಪ್ರೀಂ ರ್ಕೋರ್ಟ್‌ ತೀರ್ಪನ್ನು ಮಾಯಾವತಿ ವಿರೋಧಿಸಿದ್ದಾರೆ. ನಾವು ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಲಕ್ನೋಗೆ ತೆರಳಿದರೂ ಅವರ ಭೇಟಿಗೆ ಸಾಧ್ಯವಾಗಲಿಲ್ಲ. ನಮಗೆ ಎಲ್ಲಾ ಜಿಲ್ಲೆಗಳ ಕಾರ್ಯಕರ್ತರಿಂದ ವಿರೋಧ ಬಂದಿತ್ತು. ಉತ್ತರ ಭಾರತದ ಚಮ್ಮಾರರು ಮೀಸಲಾತಿ ಪಡೆದುಕೊಂಡಿದ್ದಾರೆ. ಸಣ್ಣಪುಟ್ಟ ಜಾತಿಗಳಿಗೆ ಮೀಸಲಾತಿ ಸಿಗುವುದು ಅವರಿಗೆ ಇಷ್ಟವಿಲ್ಲ. ಉತ್ತರ ಮತ್ತು ದಕ್ಷಿಣ ಭಾರತದ ವಿವಾದಗಳೇ ಬೇರೆ ಬೇರೆ. ಇದನ್ನು ಅವರಿಗೆ ನಾವು ಮನವರಿಗೆ ಮಾಡಿದರೂ ಅವರಿಗೆ ಅರ್ಥವಾಗಿಲ್ಲ. ಮಾಯಾವತಿ ನಿಲುವು ವಿರೋಧಿಸಿ ನಾವು ರಾಜೀನಾಮೆ ನೀಡಿದ್ದೇವೆ. 25 ಜಿಲ್ಲೆಗಳ ಜಿಲ್ಲಾಧ್ಯಕ್ಷರೂ ರಾಜೀನಾಮೆ ನೀಡಿದ್ದಾರೆ ಎಂದು ವಿವರಿಸಿದರು.

ನಾವು ಹೀಗೆ ಹೋರಾಟ ಮಾಡಿದರೆ ಸಾಕಾಗುವುದಿಲ್ಲ. ಎಲ್ಲಾ ಮಂತ್ರಿಗಳು ಮತ್ತು ಶಾಸಕರ ಮನೆ ಮುಂದೆ, ಅವರ ಕ್ಷೇತ್ರಗಳಲ್ಲೇ ಕುತ್ತಿಗೆ ಹಿಡಿದು ಕೇಳಬೇಕು. ಅವರು ಈ ಸಮಸ್ಯೆ ನಮ್ಮದಲ್ಲ ಎಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಬೆಂಬಲ ನೀಡದಿದ್ದರೆ ನಾವು ಸುಮ್ಮನಿರಲ್ಲ ಎಂದು ಗಟ್ಟಿ ಧ್ವನಿಯಲ್ಲಿ ಕೇಳಬೇಕು. ಮಾತಿಗೆ ತಪ್ಪಲ್ಲ ಎನ್ನುವ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ. ಶಾಸಕರು, ಸಚಿವರು ಮನೆ ಮುಂದೆ ಹೋರಾಟ ಹಮ್ಮಿಕೊಳ್ಳಬೇಕು. ಇದಕ್ಕೆ ಬಿಎಸ್‌ಪಿಯಿಂದ ಹೊರ ಬಂದಿರುವ ನಮ್ಮೆಲ್ಲ ಬೆಂಬಲವೂ ಇದೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಅಂಗೀಕಾರ ನೀಡಬಹುದು ಎಂಬ ವಿಶ್ವಾಸ ಇಲ್ಲ. ಇದಕ್ಕೆ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ : ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...