Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ' ಆಗ್ರಹ

ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿರುವುದೇ ಆದರೆ, ನಾಳಿನ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಗೆ ತಾತ್ವಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಹಿರಿಯ ನಾಯಕ ಆರ್. ಮೋಹನ್ ರಾಜ್ ಒತ್ತಾಯಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ನಮ್ಮ ಪಾಲನ್ನು ನಮಗೆ ಕೊಡಿ ಎಂದು ಪ್ರತಿಪಾದಿಸಿದ್ದರು” ಎಂದರು.

ಕಾಂಗ್ರೆಸ್ ಸರ್ಕಾರ ಎಸ್‌.ಎಂ ಕೃಷ್ಣ ಅವಧಿಯಲ್ಲಿ ಆಯೋಗ ರಚಿಸಿದೆ. ಕಳೆದ ಮೂವತ್ತು ವರ್ಷಗಳಿಂದ ಚಳವಳಿ ಮಾಡುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಲ್ಲ.  ಜನಸಂಖ್ಯೆ ಆಧಾರದಲ್ಲಿ ಪಾಲು ಸಿಗಬೇಕು ಎಂಬುವುದು ಕಾನ್ಶಿರಾಮ್ ಆಶಯವಾಗಿತ್ತು. ಎಲ್ಲಾ ಸಮುದಾಯಗಳು ಮೇಲೆ ಬರಬೇಕು ಎಂಬುವುದು ಬಹುಜನ ಚಳವಳಿಯ ಆಶಯವೂ ಹೌದು ಎಂದು ಹೇಳಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಈ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಿದೆ. ಪರಿಶಿಷ್ಟರ ನಿಧಿಯನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ಅಹಿಂದ ಹೋರಾಟಗಾರರೆಂದು ಹೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ಈ ಸಮುದಾಯದ ಬಗ್ಗೆ ಬದ್ಧತೆ ಇದ್ದರೆ ನಾಳಿನ ಸಭೆಯಲ್ಲಿ ಒಳಮೀಸಲಾತಿಗೆ ಅಂಗೀಕಾರ ನೀಡಬೇಕು  ಎಂದು ಆಗ್ರಹಿಸಿದರು.

ಈ ಹಿಂದೆ ವಿರೋಧಿಸುತ್ತಿದ್ದ ಸಮುದಾಯ ಇಂದು ಒಗ್ಗಟ್ಟಾಗಿದೆ. ಸಣ್ಣ ಪ್ರಮಾಣದಲ್ಲಿ ವಿರೋಧ ಇದೆ. ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿರುವ ಸಮುದಾಯ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಅವರ ಸಂಖ್ಯೆ ಕೇವಲ ಶೇ. 1ರಷ್ಟಿದೆ. ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡು ಒಳ ಮೀಸಲಾತಿ ಜಾರಿ ಮಾಡಬೇಕು. ಸುಪ್ರೀಂ ಕೋರ್ಟ್ ಮತ್ತು ಸಂವಿಧಾನಕ್ಕೆ ತಲೆಬಾಗಬೇಕು ಎಂದರು.

ಚಿಂತಕ ಶಿವಸುಂದರ್ ಮಾತನಾಡಿ, ಸರ್ಕಾರ ಕೈಗೆ ಸಿಕ್ಕಿದ್ದನ್ನು ತಪ್ಪಿಸಿಕೊಳ್ಳುತ್ತಿದೆ. ಇದನ್ನು ನಾವು ದಕ್ಕಿಸಿಕೊಳ್ಳಬೇಕು. ನಾಳಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಆಗದಿದ್ದರೆ ಏನು ಮಾಡಬೇಕು ಎಂದು ಯೋಚಿಸಬೇಕು. ಇದು ಸಾಮಾಜಿಕ ನ್ಯಾಯದ ಪ್ರಶ್ನೆ. ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಬೇಕು. ನಾವೆಲ್ಲರೂ ಜೊತೆಯಲ್ಲಿರೋಣ ಎಂದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ ಎಂಬುವುದು ಮಾತ್ರವಲ್ಲ. ಕೋರ್ಟ್‌ ಇತ್ತೀಚಿನ ದಿನಗಳಲ್ಲಿ ಜನಪರ ತೀರ್ಪು ನೀಡಿಲ್ಲ. ಅದರ, ನಡುವೆ ಈ ತೀರ್ಪು ಬಂದಿರುವುದು ಮುಖ್ಯ. ನಾನು ಕಂಡ ವಿಶಿಷ್ಟ ಆಂದೋಲನ ಇದಾಗಿದೆ. ಸತತ ಮೂರು ದಶಕಗಳ ಹೋರಾಟದಲ್ಲಿ ಇತರೆ ಸಮುದಾಯವನ್ನು ಒಪ್ಪಿಕೊಂಡು ಹೋರಾಟ ಮಾಡುತ್ತಾ ಬಂದಿರುವುದು ದೊಡ್ಡ ವಿಷಯ. ದಲಿತ ಚಳವಳ ನಿರಂತರವಾಗಿ ನಡೆದು ಬರುತ್ತಿರುವಾಗ ದುಷ್ಟ ಶಕ್ತಿಗಳ ನಡುವೆ ಹೋರಾಟ ಮಾಡಿದೆ. ಯಾವ ಸಂಚಿಗೂ ಬಲಿಯಾಗದೆ ಸಮುದಾಯವನ್ನು ಉಳಿಸಿಕೊಳ್ಳುವ ಕೆಲಸದ ಜೊತೆಗೆ, ವಿಚಾರ ಒಪ್ಪದ ಎಲ್ಲರನ್ನೂ ಮನವೊಲಿಸಿದೆ. ಈ ಹೋರಾಟಕ್ಕೆ ಬಹಳಷ್ಟು ಮಹತ್ವ ಇದೆ. ಇಡೀ ಸಮುದಾಯವನ್ನು ಒಪ್ಪಿಸಿದ್ದು ಬಹಳ ದೊಡ್ಡ ಜಯ ಎಂದು ಹೇಳಿದರು.

ಎರಡನಡೇ ಸಾಧನೆ ಕರ್ನಾಟಕದ ಎಲ್ಲಾ ಜನಪರ ಚಿಂತಕರು ಮತ್ತು ಸಂಘಟನೆಗಳನ್ನು ಈ ಹೋರಾಟಕ್ಕೆ ಒಪ್ಪಿಸಿದ್ದು. ಮೂರನೇ ಜಯ ಎಲ್ಲಾ ವಿರೋಧ ಪಕ್ಷಗಳು ಇದನ್ನು ಒಪ್ಪಿಕೊಳ್ಳಬೇಕಾಯಿತು. ನಾಲ್ಕನೆಯದ್ದಾಗಿ ನ್ಯಾಯಾಲಯವೂ ಕೂಡ ತೀರ್ಪು ನೀಡಿ ಬೆಂಬಲ ನೀಡಿದೆ. ಕಾಂಗ್ರೆಸ್ ಪಕ್ಷ ಎಂದರೆ ದ್ವಂದ್ವಗಳ ಪಕ್ಷ. ಅಲ್ಲಿ ಎಲ್ಲರೂ ಒಪ್ಪುತ್ತಾರೆ ಎಂಬುವುದು ಅನುಮಾನ. ಇದು ಜಾರಿಯಾಗಬಾರದು ಎಂಬ ಗುಂಪು ಕೆಲಸ ಮಾಡುತ್ತಿರುತ್ತದೆ. ಭಿನ್ನಾಪ್ರಾಯ ಬಂದಾಗ ಅವರು ಏನು ಮಾಡುತ್ತಾರೆ ಎನ್ನುವುದು ಮುಖ್ಯ ಎಂದರು.

ಅಡ್ಡಗೋಡೆ ಮೇಲೆ ದೀಪು ಇಡುವ ತೀರ್ಮಾಣ ನಾಳೆ ಬಂದರೂ ಬರಬಹುದು. ನಾಳೆ ಎಂದು ಕಾಯಿಸುವ ಆಪಾಯವೂ ಇದೆ. ಒಂದು ವೇಳೆ ಹಾಗಾದರೆ ನಾಡಿದ್ದು ಏನು ಎಂಬುವುದು ನಮ್ಮೆಲ್ಲರ ಮುಂದಿರುವ ಪ್ರಶ್ನೆ. ದಯವಿಟ್ಟೂ ಯಾವುದೇ ಗ್ಯಾಪ್ ಕೊಡಬಾರದು ಎಂಬುವುದು ಸಮಿತಿಗೆ ನನ್ನ ಸಲಹೆ. ಸರ್ಕಾರ ತೀರ್ಮಾಣ ಬರದಿದ್ದರೆ ನಾಡಿದ್ದರಿಂದ ಹೋರಾಟ ಮಾಡಬೇಕು. ಇಲ್ಲಿಯವರೆಗೆ ಮಾಡಿರುವ ಜನ ಹೋರಾಟದಿಂದಲೇ ತೀರ್ಪು ಕೂಡ ಬಂದಿರುವುದು. ಇದರ ಅಂತಿಮ ಫಲಿತಾಂಶ ಕೂಡ ಹೋರಾಟದಿಂದಲೇ ಆಗಬೇಕು ಎಂದು ಹೇಳಿದರು.

ಮುಂದಿನ ಹೋರಾಟ ಸಮುದಾಯದ ಮೇಲೆ ಮಾತ್ರ ಬೀಳದೆ ಎಲ್ಲಾ ಜನಪರ ಸಂಘಟನೆಗಳ ಜವಾಬ್ದಾರಿ ಆಗಬೇಕು. ಗೆಲುವು ಸಿಗುವವರೆಗೂ ಜೊತೆಯಲ್ಲಿದ್ದು ಹೋರಾಟ ಮಾಡೋಣ. ಮೂರು ದಶಕಗಳ ಹೋರಾಟಕ್ಕೆ ಗೆಲುವು ಸಿಗಬೇಕು. ಆದರೆ, ಗೆಲುವು ತಡವಾಗಬಾರದು. ಗೆಲುವು ಸಿಗದಿದ್ದರೆ ನಾಡಿದ್ದರಿಂದ ಮತ್ತೆ ಹೋರಾಟ ಮಾಡೋಣ.

ಮಾರಸಂದ್ರ ಮುನಿಯಪ್ಪ ಮಾತನಾಡಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಚಿತ್ರದುರ್ಗದ ಸಮಾವೇಶದಲ್ಲಿ ಸಿದ್ದರಾಮಯ್ಯ ಚುನಾವಣೆಗೂ ಮುಂಚೆ ಹೇಳಿದ್ದರು. ಬಿಜೆಪಿ ಕೂಡ ಕೇಂದ್ರಕ್ಕೆ ಪತ್ರ ಬರೆದು ನಮ್ಮನ್ನು ಯಾಮಾರಿಸಿತ್ತು. ರಾಜ್ಯದ ಮೂರು ಪಕ್ಷಗಳು ಏನೂ ಮಾಡಿಲ್ಲ. ಸುಪ್ರೀಂ ಕೋರ್ಟ್‌ ಮಾತ್ರ ತೀರ್ಪು ನೀಡಿದೆ. ತೀರ್ಪು ನೀಡಿ ಇಷ್ಟು ದಿನವಾದರೂ ಜಾರಿಗೆ ಮೀನಾಮೇಶ ಎಣಿಸುತ್ತಿರುವುದು ಏಕೆ? ಹೊಲೆಯರು, ಲಂಬಾಣಿ, ಭೋವಿಗಳು ವಿರೊಧ ಮಾಡುತ್ತಿಲ್ಲ. ಇಷ್ಟಿದ್ದರೂ ವಿಳಂಬ ಏಕೆ? ಸಾಯೋವರೆಗೂ ನಾವು ಹೋರಾಟ ಮಾಡಬೇಕು. ಸಾಯೋವರೆಗೂ ಕುಸ್ತಿ ಅಭ್ಯಾಸ ಮಾಡಿದರೆ ಕುಸ್ತಿ ಮಾಡುವುದು ಯಾವಾಗ? ಆಂದ್ರ, ಕರ್ನಾಟಕದಲ್ಲಿ ಈ ಹೋರಾಟದಲ್ಲಿ ಹಲವರು ಸತ್ತಿದ್ದಾರೆ. ನಾವು ಶತಾಯಗತಾಯ ಪ್ರಯತ್ನ ಮಾಡಿದರೂ ಬಿಎಸ್‌ಪಿಯಿಂದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಸುಪ್ರೀಂ ರ್ಕೋರ್ಟ್‌ ತೀರ್ಪನ್ನು ಮಾಯಾವತಿ ವಿರೋಧಿಸಿದ್ದಾರೆ. ನಾವು ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಲಕ್ನೋಗೆ ತೆರಳಿದರೂ ಅವರ ಭೇಟಿಗೆ ಸಾಧ್ಯವಾಗಲಿಲ್ಲ. ನಮಗೆ ಎಲ್ಲಾ ಜಿಲ್ಲೆಗಳ ಕಾರ್ಯಕರ್ತರಿಂದ ವಿರೋಧ ಬಂದಿತ್ತು. ಉತ್ತರ ಭಾರತದ ಚಮ್ಮಾರರು ಮೀಸಲಾತಿ ಪಡೆದುಕೊಂಡಿದ್ದಾರೆ. ಸಣ್ಣಪುಟ್ಟ ಜಾತಿಗಳಿಗೆ ಮೀಸಲಾತಿ ಸಿಗುವುದು ಅವರಿಗೆ ಇಷ್ಟವಿಲ್ಲ. ಉತ್ತರ ಮತ್ತು ದಕ್ಷಿಣ ಭಾರತದ ವಿವಾದಗಳೇ ಬೇರೆ ಬೇರೆ. ಇದನ್ನು ಅವರಿಗೆ ನಾವು ಮನವರಿಗೆ ಮಾಡಿದರೂ ಅವರಿಗೆ ಅರ್ಥವಾಗಿಲ್ಲ. ಮಾಯಾವತಿ ನಿಲುವು ವಿರೋಧಿಸಿ ನಾವು ರಾಜೀನಾಮೆ ನೀಡಿದ್ದೇವೆ. 25 ಜಿಲ್ಲೆಗಳ ಜಿಲ್ಲಾಧ್ಯಕ್ಷರೂ ರಾಜೀನಾಮೆ ನೀಡಿದ್ದಾರೆ ಎಂದು ವಿವರಿಸಿದರು.

ನಾವು ಹೀಗೆ ಹೋರಾಟ ಮಾಡಿದರೆ ಸಾಕಾಗುವುದಿಲ್ಲ. ಎಲ್ಲಾ ಮಂತ್ರಿಗಳು ಮತ್ತು ಶಾಸಕರ ಮನೆ ಮುಂದೆ, ಅವರ ಕ್ಷೇತ್ರಗಳಲ್ಲೇ ಕುತ್ತಿಗೆ ಹಿಡಿದು ಕೇಳಬೇಕು. ಅವರು ಈ ಸಮಸ್ಯೆ ನಮ್ಮದಲ್ಲ ಎಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಬೆಂಬಲ ನೀಡದಿದ್ದರೆ ನಾವು ಸುಮ್ಮನಿರಲ್ಲ ಎಂದು ಗಟ್ಟಿ ಧ್ವನಿಯಲ್ಲಿ ಕೇಳಬೇಕು. ಮಾತಿಗೆ ತಪ್ಪಲ್ಲ ಎನ್ನುವ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ. ಶಾಸಕರು, ಸಚಿವರು ಮನೆ ಮುಂದೆ ಹೋರಾಟ ಹಮ್ಮಿಕೊಳ್ಳಬೇಕು. ಇದಕ್ಕೆ ಬಿಎಸ್‌ಪಿಯಿಂದ ಹೊರ ಬಂದಿರುವ ನಮ್ಮೆಲ್ಲ ಬೆಂಬಲವೂ ಇದೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಅಂಗೀಕಾರ ನೀಡಬಹುದು ಎಂಬ ವಿಶ್ವಾಸ ಇಲ್ಲ. ಇದಕ್ಕೆ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ : ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...