Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ' ಆಗ್ರಹ

ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿರುವುದೇ ಆದರೆ, ನಾಳಿನ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಗೆ ತಾತ್ವಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಹಿರಿಯ ನಾಯಕ ಆರ್. ಮೋಹನ್ ರಾಜ್ ಒತ್ತಾಯಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ನಮ್ಮ ಪಾಲನ್ನು ನಮಗೆ ಕೊಡಿ ಎಂದು ಪ್ರತಿಪಾದಿಸಿದ್ದರು” ಎಂದರು.

ಕಾಂಗ್ರೆಸ್ ಸರ್ಕಾರ ಎಸ್‌.ಎಂ ಕೃಷ್ಣ ಅವಧಿಯಲ್ಲಿ ಆಯೋಗ ರಚಿಸಿದೆ. ಕಳೆದ ಮೂವತ್ತು ವರ್ಷಗಳಿಂದ ಚಳವಳಿ ಮಾಡುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಲ್ಲ.  ಜನಸಂಖ್ಯೆ ಆಧಾರದಲ್ಲಿ ಪಾಲು ಸಿಗಬೇಕು ಎಂಬುವುದು ಕಾನ್ಶಿರಾಮ್ ಆಶಯವಾಗಿತ್ತು. ಎಲ್ಲಾ ಸಮುದಾಯಗಳು ಮೇಲೆ ಬರಬೇಕು ಎಂಬುವುದು ಬಹುಜನ ಚಳವಳಿಯ ಆಶಯವೂ ಹೌದು ಎಂದು ಹೇಳಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಈ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಿದೆ. ಪರಿಶಿಷ್ಟರ ನಿಧಿಯನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ಅಹಿಂದ ಹೋರಾಟಗಾರರೆಂದು ಹೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ಈ ಸಮುದಾಯದ ಬಗ್ಗೆ ಬದ್ಧತೆ ಇದ್ದರೆ ನಾಳಿನ ಸಭೆಯಲ್ಲಿ ಒಳಮೀಸಲಾತಿಗೆ ಅಂಗೀಕಾರ ನೀಡಬೇಕು  ಎಂದು ಆಗ್ರಹಿಸಿದರು.

ಈ ಹಿಂದೆ ವಿರೋಧಿಸುತ್ತಿದ್ದ ಸಮುದಾಯ ಇಂದು ಒಗ್ಗಟ್ಟಾಗಿದೆ. ಸಣ್ಣ ಪ್ರಮಾಣದಲ್ಲಿ ವಿರೋಧ ಇದೆ. ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿರುವ ಸಮುದಾಯ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಅವರ ಸಂಖ್ಯೆ ಕೇವಲ ಶೇ. 1ರಷ್ಟಿದೆ. ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡು ಒಳ ಮೀಸಲಾತಿ ಜಾರಿ ಮಾಡಬೇಕು. ಸುಪ್ರೀಂ ಕೋರ್ಟ್ ಮತ್ತು ಸಂವಿಧಾನಕ್ಕೆ ತಲೆಬಾಗಬೇಕು ಎಂದರು.

ಚಿಂತಕ ಶಿವಸುಂದರ್ ಮಾತನಾಡಿ, ಸರ್ಕಾರ ಕೈಗೆ ಸಿಕ್ಕಿದ್ದನ್ನು ತಪ್ಪಿಸಿಕೊಳ್ಳುತ್ತಿದೆ. ಇದನ್ನು ನಾವು ದಕ್ಕಿಸಿಕೊಳ್ಳಬೇಕು. ನಾಳಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಆಗದಿದ್ದರೆ ಏನು ಮಾಡಬೇಕು ಎಂದು ಯೋಚಿಸಬೇಕು. ಇದು ಸಾಮಾಜಿಕ ನ್ಯಾಯದ ಪ್ರಶ್ನೆ. ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಬೇಕು. ನಾವೆಲ್ಲರೂ ಜೊತೆಯಲ್ಲಿರೋಣ ಎಂದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ ಎಂಬುವುದು ಮಾತ್ರವಲ್ಲ. ಕೋರ್ಟ್‌ ಇತ್ತೀಚಿನ ದಿನಗಳಲ್ಲಿ ಜನಪರ ತೀರ್ಪು ನೀಡಿಲ್ಲ. ಅದರ, ನಡುವೆ ಈ ತೀರ್ಪು ಬಂದಿರುವುದು ಮುಖ್ಯ. ನಾನು ಕಂಡ ವಿಶಿಷ್ಟ ಆಂದೋಲನ ಇದಾಗಿದೆ. ಸತತ ಮೂರು ದಶಕಗಳ ಹೋರಾಟದಲ್ಲಿ ಇತರೆ ಸಮುದಾಯವನ್ನು ಒಪ್ಪಿಕೊಂಡು ಹೋರಾಟ ಮಾಡುತ್ತಾ ಬಂದಿರುವುದು ದೊಡ್ಡ ವಿಷಯ. ದಲಿತ ಚಳವಳ ನಿರಂತರವಾಗಿ ನಡೆದು ಬರುತ್ತಿರುವಾಗ ದುಷ್ಟ ಶಕ್ತಿಗಳ ನಡುವೆ ಹೋರಾಟ ಮಾಡಿದೆ. ಯಾವ ಸಂಚಿಗೂ ಬಲಿಯಾಗದೆ ಸಮುದಾಯವನ್ನು ಉಳಿಸಿಕೊಳ್ಳುವ ಕೆಲಸದ ಜೊತೆಗೆ, ವಿಚಾರ ಒಪ್ಪದ ಎಲ್ಲರನ್ನೂ ಮನವೊಲಿಸಿದೆ. ಈ ಹೋರಾಟಕ್ಕೆ ಬಹಳಷ್ಟು ಮಹತ್ವ ಇದೆ. ಇಡೀ ಸಮುದಾಯವನ್ನು ಒಪ್ಪಿಸಿದ್ದು ಬಹಳ ದೊಡ್ಡ ಜಯ ಎಂದು ಹೇಳಿದರು.

ಎರಡನಡೇ ಸಾಧನೆ ಕರ್ನಾಟಕದ ಎಲ್ಲಾ ಜನಪರ ಚಿಂತಕರು ಮತ್ತು ಸಂಘಟನೆಗಳನ್ನು ಈ ಹೋರಾಟಕ್ಕೆ ಒಪ್ಪಿಸಿದ್ದು. ಮೂರನೇ ಜಯ ಎಲ್ಲಾ ವಿರೋಧ ಪಕ್ಷಗಳು ಇದನ್ನು ಒಪ್ಪಿಕೊಳ್ಳಬೇಕಾಯಿತು. ನಾಲ್ಕನೆಯದ್ದಾಗಿ ನ್ಯಾಯಾಲಯವೂ ಕೂಡ ತೀರ್ಪು ನೀಡಿ ಬೆಂಬಲ ನೀಡಿದೆ. ಕಾಂಗ್ರೆಸ್ ಪಕ್ಷ ಎಂದರೆ ದ್ವಂದ್ವಗಳ ಪಕ್ಷ. ಅಲ್ಲಿ ಎಲ್ಲರೂ ಒಪ್ಪುತ್ತಾರೆ ಎಂಬುವುದು ಅನುಮಾನ. ಇದು ಜಾರಿಯಾಗಬಾರದು ಎಂಬ ಗುಂಪು ಕೆಲಸ ಮಾಡುತ್ತಿರುತ್ತದೆ. ಭಿನ್ನಾಪ್ರಾಯ ಬಂದಾಗ ಅವರು ಏನು ಮಾಡುತ್ತಾರೆ ಎನ್ನುವುದು ಮುಖ್ಯ ಎಂದರು.

ಅಡ್ಡಗೋಡೆ ಮೇಲೆ ದೀಪು ಇಡುವ ತೀರ್ಮಾಣ ನಾಳೆ ಬಂದರೂ ಬರಬಹುದು. ನಾಳೆ ಎಂದು ಕಾಯಿಸುವ ಆಪಾಯವೂ ಇದೆ. ಒಂದು ವೇಳೆ ಹಾಗಾದರೆ ನಾಡಿದ್ದು ಏನು ಎಂಬುವುದು ನಮ್ಮೆಲ್ಲರ ಮುಂದಿರುವ ಪ್ರಶ್ನೆ. ದಯವಿಟ್ಟೂ ಯಾವುದೇ ಗ್ಯಾಪ್ ಕೊಡಬಾರದು ಎಂಬುವುದು ಸಮಿತಿಗೆ ನನ್ನ ಸಲಹೆ. ಸರ್ಕಾರ ತೀರ್ಮಾಣ ಬರದಿದ್ದರೆ ನಾಡಿದ್ದರಿಂದ ಹೋರಾಟ ಮಾಡಬೇಕು. ಇಲ್ಲಿಯವರೆಗೆ ಮಾಡಿರುವ ಜನ ಹೋರಾಟದಿಂದಲೇ ತೀರ್ಪು ಕೂಡ ಬಂದಿರುವುದು. ಇದರ ಅಂತಿಮ ಫಲಿತಾಂಶ ಕೂಡ ಹೋರಾಟದಿಂದಲೇ ಆಗಬೇಕು ಎಂದು ಹೇಳಿದರು.

ಮುಂದಿನ ಹೋರಾಟ ಸಮುದಾಯದ ಮೇಲೆ ಮಾತ್ರ ಬೀಳದೆ ಎಲ್ಲಾ ಜನಪರ ಸಂಘಟನೆಗಳ ಜವಾಬ್ದಾರಿ ಆಗಬೇಕು. ಗೆಲುವು ಸಿಗುವವರೆಗೂ ಜೊತೆಯಲ್ಲಿದ್ದು ಹೋರಾಟ ಮಾಡೋಣ. ಮೂರು ದಶಕಗಳ ಹೋರಾಟಕ್ಕೆ ಗೆಲುವು ಸಿಗಬೇಕು. ಆದರೆ, ಗೆಲುವು ತಡವಾಗಬಾರದು. ಗೆಲುವು ಸಿಗದಿದ್ದರೆ ನಾಡಿದ್ದರಿಂದ ಮತ್ತೆ ಹೋರಾಟ ಮಾಡೋಣ.

ಮಾರಸಂದ್ರ ಮುನಿಯಪ್ಪ ಮಾತನಾಡಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಚಿತ್ರದುರ್ಗದ ಸಮಾವೇಶದಲ್ಲಿ ಸಿದ್ದರಾಮಯ್ಯ ಚುನಾವಣೆಗೂ ಮುಂಚೆ ಹೇಳಿದ್ದರು. ಬಿಜೆಪಿ ಕೂಡ ಕೇಂದ್ರಕ್ಕೆ ಪತ್ರ ಬರೆದು ನಮ್ಮನ್ನು ಯಾಮಾರಿಸಿತ್ತು. ರಾಜ್ಯದ ಮೂರು ಪಕ್ಷಗಳು ಏನೂ ಮಾಡಿಲ್ಲ. ಸುಪ್ರೀಂ ಕೋರ್ಟ್‌ ಮಾತ್ರ ತೀರ್ಪು ನೀಡಿದೆ. ತೀರ್ಪು ನೀಡಿ ಇಷ್ಟು ದಿನವಾದರೂ ಜಾರಿಗೆ ಮೀನಾಮೇಶ ಎಣಿಸುತ್ತಿರುವುದು ಏಕೆ? ಹೊಲೆಯರು, ಲಂಬಾಣಿ, ಭೋವಿಗಳು ವಿರೊಧ ಮಾಡುತ್ತಿಲ್ಲ. ಇಷ್ಟಿದ್ದರೂ ವಿಳಂಬ ಏಕೆ? ಸಾಯೋವರೆಗೂ ನಾವು ಹೋರಾಟ ಮಾಡಬೇಕು. ಸಾಯೋವರೆಗೂ ಕುಸ್ತಿ ಅಭ್ಯಾಸ ಮಾಡಿದರೆ ಕುಸ್ತಿ ಮಾಡುವುದು ಯಾವಾಗ? ಆಂದ್ರ, ಕರ್ನಾಟಕದಲ್ಲಿ ಈ ಹೋರಾಟದಲ್ಲಿ ಹಲವರು ಸತ್ತಿದ್ದಾರೆ. ನಾವು ಶತಾಯಗತಾಯ ಪ್ರಯತ್ನ ಮಾಡಿದರೂ ಬಿಎಸ್‌ಪಿಯಿಂದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಸುಪ್ರೀಂ ರ್ಕೋರ್ಟ್‌ ತೀರ್ಪನ್ನು ಮಾಯಾವತಿ ವಿರೋಧಿಸಿದ್ದಾರೆ. ನಾವು ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಲಕ್ನೋಗೆ ತೆರಳಿದರೂ ಅವರ ಭೇಟಿಗೆ ಸಾಧ್ಯವಾಗಲಿಲ್ಲ. ನಮಗೆ ಎಲ್ಲಾ ಜಿಲ್ಲೆಗಳ ಕಾರ್ಯಕರ್ತರಿಂದ ವಿರೋಧ ಬಂದಿತ್ತು. ಉತ್ತರ ಭಾರತದ ಚಮ್ಮಾರರು ಮೀಸಲಾತಿ ಪಡೆದುಕೊಂಡಿದ್ದಾರೆ. ಸಣ್ಣಪುಟ್ಟ ಜಾತಿಗಳಿಗೆ ಮೀಸಲಾತಿ ಸಿಗುವುದು ಅವರಿಗೆ ಇಷ್ಟವಿಲ್ಲ. ಉತ್ತರ ಮತ್ತು ದಕ್ಷಿಣ ಭಾರತದ ವಿವಾದಗಳೇ ಬೇರೆ ಬೇರೆ. ಇದನ್ನು ಅವರಿಗೆ ನಾವು ಮನವರಿಗೆ ಮಾಡಿದರೂ ಅವರಿಗೆ ಅರ್ಥವಾಗಿಲ್ಲ. ಮಾಯಾವತಿ ನಿಲುವು ವಿರೋಧಿಸಿ ನಾವು ರಾಜೀನಾಮೆ ನೀಡಿದ್ದೇವೆ. 25 ಜಿಲ್ಲೆಗಳ ಜಿಲ್ಲಾಧ್ಯಕ್ಷರೂ ರಾಜೀನಾಮೆ ನೀಡಿದ್ದಾರೆ ಎಂದು ವಿವರಿಸಿದರು.

ನಾವು ಹೀಗೆ ಹೋರಾಟ ಮಾಡಿದರೆ ಸಾಕಾಗುವುದಿಲ್ಲ. ಎಲ್ಲಾ ಮಂತ್ರಿಗಳು ಮತ್ತು ಶಾಸಕರ ಮನೆ ಮುಂದೆ, ಅವರ ಕ್ಷೇತ್ರಗಳಲ್ಲೇ ಕುತ್ತಿಗೆ ಹಿಡಿದು ಕೇಳಬೇಕು. ಅವರು ಈ ಸಮಸ್ಯೆ ನಮ್ಮದಲ್ಲ ಎಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಬೆಂಬಲ ನೀಡದಿದ್ದರೆ ನಾವು ಸುಮ್ಮನಿರಲ್ಲ ಎಂದು ಗಟ್ಟಿ ಧ್ವನಿಯಲ್ಲಿ ಕೇಳಬೇಕು. ಮಾತಿಗೆ ತಪ್ಪಲ್ಲ ಎನ್ನುವ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ. ಶಾಸಕರು, ಸಚಿವರು ಮನೆ ಮುಂದೆ ಹೋರಾಟ ಹಮ್ಮಿಕೊಳ್ಳಬೇಕು. ಇದಕ್ಕೆ ಬಿಎಸ್‌ಪಿಯಿಂದ ಹೊರ ಬಂದಿರುವ ನಮ್ಮೆಲ್ಲ ಬೆಂಬಲವೂ ಇದೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಅಂಗೀಕಾರ ನೀಡಬಹುದು ಎಂಬ ವಿಶ್ವಾಸ ಇಲ್ಲ. ಇದಕ್ಕೆ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ : ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...