Homeಕರ್ನಾಟಕಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ' ಆಗ್ರಹ

ಸುಗ್ರೀವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೆ ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಕ್ಕೂಟ’ ಆಗ್ರಹ

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿರುವುದೇ ಆದರೆ, ನಾಳಿನ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಗೆ ತಾತ್ವಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್‌ಎಸ್‌) ಹಿರಿಯ ನಾಯಕ ಆರ್. ಮೋಹನ್ ರಾಜ್ ಒತ್ತಾಯಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ನಡೆದ ಹಕ್ಕೊತ್ತಾಯ ಸಭೆಯಲ್ಲಿ ಮಾತನಾಡಿದ ಅವರು, “ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ನಮ್ಮ ಪಾಲನ್ನು ನಮಗೆ ಕೊಡಿ ಎಂದು ಪ್ರತಿಪಾದಿಸಿದ್ದರು” ಎಂದರು.

ಕಾಂಗ್ರೆಸ್ ಸರ್ಕಾರ ಎಸ್‌.ಎಂ ಕೃಷ್ಣ ಅವಧಿಯಲ್ಲಿ ಆಯೋಗ ರಚಿಸಿದೆ. ಕಳೆದ ಮೂವತ್ತು ವರ್ಷಗಳಿಂದ ಚಳವಳಿ ಮಾಡುತ್ತಿದ್ದರೂ ನಮ್ಮ ಬೇಡಿಕೆ ಈಡೇರಿಲ್ಲ.  ಜನಸಂಖ್ಯೆ ಆಧಾರದಲ್ಲಿ ಪಾಲು ಸಿಗಬೇಕು ಎಂಬುವುದು ಕಾನ್ಶಿರಾಮ್ ಆಶಯವಾಗಿತ್ತು. ಎಲ್ಲಾ ಸಮುದಾಯಗಳು ಮೇಲೆ ಬರಬೇಕು ಎಂಬುವುದು ಬಹುಜನ ಚಳವಳಿಯ ಆಶಯವೂ ಹೌದು ಎಂದು ಹೇಳಿದರು.

ಕಾಂಗ್ರೆಸ್ ಚುನಾವಣಾ ಪೂರ್ವದಲ್ಲಿ ನೀಡಿದ್ದ ಭರವಸೆ ಈಡೇರಿಸಿಲ್ಲ. ಈ ಸರ್ಕಾರ ಬರೀ ಸುಳ್ಳುಗಳನ್ನೇ ಹೇಳುತ್ತಿದೆ. ಪರಿಶಿಷ್ಟರ ನಿಧಿಯನ್ನು ಗ್ಯಾರಂಟಿಗಳಿಗೆ ಬಳಸಿದ್ದಾರೆ. ಸಾಮಾಜಿಕ ನ್ಯಾಯದಲ್ಲಿ ಅಹಿಂದ ಹೋರಾಟಗಾರರೆಂದು ಹೇಳುತ್ತಿರುವ ಸಿದ್ದರಾಮಯ್ಯ ಅವರಿಗೆ ಈ ಸಮುದಾಯದ ಬಗ್ಗೆ ಬದ್ಧತೆ ಇದ್ದರೆ ನಾಳಿನ ಸಭೆಯಲ್ಲಿ ಒಳಮೀಸಲಾತಿಗೆ ಅಂಗೀಕಾರ ನೀಡಬೇಕು  ಎಂದು ಆಗ್ರಹಿಸಿದರು.

ಈ ಹಿಂದೆ ವಿರೋಧಿಸುತ್ತಿದ್ದ ಸಮುದಾಯ ಇಂದು ಒಗ್ಗಟ್ಟಾಗಿದೆ. ಸಣ್ಣ ಪ್ರಮಾಣದಲ್ಲಿ ವಿರೋಧ ಇದೆ. ಸುಳ್ಳು ಜಾತಿ ಪ್ರಮಾಣಪತ್ರ ಪಡೆದುಕೊಳ್ಳುತ್ತಿರುವ ಸಮುದಾಯ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದೆ. ಅವರ ಸಂಖ್ಯೆ ಕೇವಲ ಶೇ. 1ರಷ್ಟಿದೆ. ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಂಡು ಒಳ ಮೀಸಲಾತಿ ಜಾರಿ ಮಾಡಬೇಕು. ಸುಪ್ರೀಂ ಕೋರ್ಟ್ ಮತ್ತು ಸಂವಿಧಾನಕ್ಕೆ ತಲೆಬಾಗಬೇಕು ಎಂದರು.

ಚಿಂತಕ ಶಿವಸುಂದರ್ ಮಾತನಾಡಿ, ಸರ್ಕಾರ ಕೈಗೆ ಸಿಕ್ಕಿದ್ದನ್ನು ತಪ್ಪಿಸಿಕೊಳ್ಳುತ್ತಿದೆ. ಇದನ್ನು ನಾವು ದಕ್ಕಿಸಿಕೊಳ್ಳಬೇಕು. ನಾಳಿನ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಆಗದಿದ್ದರೆ ಏನು ಮಾಡಬೇಕು ಎಂದು ಯೋಚಿಸಬೇಕು. ಇದು ಸಾಮಾಜಿಕ ನ್ಯಾಯದ ಪ್ರಶ್ನೆ. ಎಲ್ಲರೂ ಇದಕ್ಕೆ ಬೆಂಬಲ ಸೂಚಿಸಬೇಕು. ನಾವೆಲ್ಲರೂ ಜೊತೆಯಲ್ಲಿರೋಣ ಎಂದರು.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ ಎಂಬುವುದು ಮಾತ್ರವಲ್ಲ. ಕೋರ್ಟ್‌ ಇತ್ತೀಚಿನ ದಿನಗಳಲ್ಲಿ ಜನಪರ ತೀರ್ಪು ನೀಡಿಲ್ಲ. ಅದರ, ನಡುವೆ ಈ ತೀರ್ಪು ಬಂದಿರುವುದು ಮುಖ್ಯ. ನಾನು ಕಂಡ ವಿಶಿಷ್ಟ ಆಂದೋಲನ ಇದಾಗಿದೆ. ಸತತ ಮೂರು ದಶಕಗಳ ಹೋರಾಟದಲ್ಲಿ ಇತರೆ ಸಮುದಾಯವನ್ನು ಒಪ್ಪಿಕೊಂಡು ಹೋರಾಟ ಮಾಡುತ್ತಾ ಬಂದಿರುವುದು ದೊಡ್ಡ ವಿಷಯ. ದಲಿತ ಚಳವಳ ನಿರಂತರವಾಗಿ ನಡೆದು ಬರುತ್ತಿರುವಾಗ ದುಷ್ಟ ಶಕ್ತಿಗಳ ನಡುವೆ ಹೋರಾಟ ಮಾಡಿದೆ. ಯಾವ ಸಂಚಿಗೂ ಬಲಿಯಾಗದೆ ಸಮುದಾಯವನ್ನು ಉಳಿಸಿಕೊಳ್ಳುವ ಕೆಲಸದ ಜೊತೆಗೆ, ವಿಚಾರ ಒಪ್ಪದ ಎಲ್ಲರನ್ನೂ ಮನವೊಲಿಸಿದೆ. ಈ ಹೋರಾಟಕ್ಕೆ ಬಹಳಷ್ಟು ಮಹತ್ವ ಇದೆ. ಇಡೀ ಸಮುದಾಯವನ್ನು ಒಪ್ಪಿಸಿದ್ದು ಬಹಳ ದೊಡ್ಡ ಜಯ ಎಂದು ಹೇಳಿದರು.

ಎರಡನಡೇ ಸಾಧನೆ ಕರ್ನಾಟಕದ ಎಲ್ಲಾ ಜನಪರ ಚಿಂತಕರು ಮತ್ತು ಸಂಘಟನೆಗಳನ್ನು ಈ ಹೋರಾಟಕ್ಕೆ ಒಪ್ಪಿಸಿದ್ದು. ಮೂರನೇ ಜಯ ಎಲ್ಲಾ ವಿರೋಧ ಪಕ್ಷಗಳು ಇದನ್ನು ಒಪ್ಪಿಕೊಳ್ಳಬೇಕಾಯಿತು. ನಾಲ್ಕನೆಯದ್ದಾಗಿ ನ್ಯಾಯಾಲಯವೂ ಕೂಡ ತೀರ್ಪು ನೀಡಿ ಬೆಂಬಲ ನೀಡಿದೆ. ಕಾಂಗ್ರೆಸ್ ಪಕ್ಷ ಎಂದರೆ ದ್ವಂದ್ವಗಳ ಪಕ್ಷ. ಅಲ್ಲಿ ಎಲ್ಲರೂ ಒಪ್ಪುತ್ತಾರೆ ಎಂಬುವುದು ಅನುಮಾನ. ಇದು ಜಾರಿಯಾಗಬಾರದು ಎಂಬ ಗುಂಪು ಕೆಲಸ ಮಾಡುತ್ತಿರುತ್ತದೆ. ಭಿನ್ನಾಪ್ರಾಯ ಬಂದಾಗ ಅವರು ಏನು ಮಾಡುತ್ತಾರೆ ಎನ್ನುವುದು ಮುಖ್ಯ ಎಂದರು.

ಅಡ್ಡಗೋಡೆ ಮೇಲೆ ದೀಪು ಇಡುವ ತೀರ್ಮಾಣ ನಾಳೆ ಬಂದರೂ ಬರಬಹುದು. ನಾಳೆ ಎಂದು ಕಾಯಿಸುವ ಆಪಾಯವೂ ಇದೆ. ಒಂದು ವೇಳೆ ಹಾಗಾದರೆ ನಾಡಿದ್ದು ಏನು ಎಂಬುವುದು ನಮ್ಮೆಲ್ಲರ ಮುಂದಿರುವ ಪ್ರಶ್ನೆ. ದಯವಿಟ್ಟೂ ಯಾವುದೇ ಗ್ಯಾಪ್ ಕೊಡಬಾರದು ಎಂಬುವುದು ಸಮಿತಿಗೆ ನನ್ನ ಸಲಹೆ. ಸರ್ಕಾರ ತೀರ್ಮಾಣ ಬರದಿದ್ದರೆ ನಾಡಿದ್ದರಿಂದ ಹೋರಾಟ ಮಾಡಬೇಕು. ಇಲ್ಲಿಯವರೆಗೆ ಮಾಡಿರುವ ಜನ ಹೋರಾಟದಿಂದಲೇ ತೀರ್ಪು ಕೂಡ ಬಂದಿರುವುದು. ಇದರ ಅಂತಿಮ ಫಲಿತಾಂಶ ಕೂಡ ಹೋರಾಟದಿಂದಲೇ ಆಗಬೇಕು ಎಂದು ಹೇಳಿದರು.

ಮುಂದಿನ ಹೋರಾಟ ಸಮುದಾಯದ ಮೇಲೆ ಮಾತ್ರ ಬೀಳದೆ ಎಲ್ಲಾ ಜನಪರ ಸಂಘಟನೆಗಳ ಜವಾಬ್ದಾರಿ ಆಗಬೇಕು. ಗೆಲುವು ಸಿಗುವವರೆಗೂ ಜೊತೆಯಲ್ಲಿದ್ದು ಹೋರಾಟ ಮಾಡೋಣ. ಮೂರು ದಶಕಗಳ ಹೋರಾಟಕ್ಕೆ ಗೆಲುವು ಸಿಗಬೇಕು. ಆದರೆ, ಗೆಲುವು ತಡವಾಗಬಾರದು. ಗೆಲುವು ಸಿಗದಿದ್ದರೆ ನಾಡಿದ್ದರಿಂದ ಮತ್ತೆ ಹೋರಾಟ ಮಾಡೋಣ.

ಮಾರಸಂದ್ರ ಮುನಿಯಪ್ಪ ಮಾತನಾಡಿ, ಮೊದಲ ಸಚಿವ ಸಂಪುಟ ಸಭೆಯಲ್ಲೇ ಒಳ ಮೀಸಲಾತಿ ಜಾರಿ ಮಾಡುತ್ತೇವೆ ಎಂದು ಚಿತ್ರದುರ್ಗದ ಸಮಾವೇಶದಲ್ಲಿ ಸಿದ್ದರಾಮಯ್ಯ ಚುನಾವಣೆಗೂ ಮುಂಚೆ ಹೇಳಿದ್ದರು. ಬಿಜೆಪಿ ಕೂಡ ಕೇಂದ್ರಕ್ಕೆ ಪತ್ರ ಬರೆದು ನಮ್ಮನ್ನು ಯಾಮಾರಿಸಿತ್ತು. ರಾಜ್ಯದ ಮೂರು ಪಕ್ಷಗಳು ಏನೂ ಮಾಡಿಲ್ಲ. ಸುಪ್ರೀಂ ಕೋರ್ಟ್‌ ಮಾತ್ರ ತೀರ್ಪು ನೀಡಿದೆ. ತೀರ್ಪು ನೀಡಿ ಇಷ್ಟು ದಿನವಾದರೂ ಜಾರಿಗೆ ಮೀನಾಮೇಶ ಎಣಿಸುತ್ತಿರುವುದು ಏಕೆ? ಹೊಲೆಯರು, ಲಂಬಾಣಿ, ಭೋವಿಗಳು ವಿರೊಧ ಮಾಡುತ್ತಿಲ್ಲ. ಇಷ್ಟಿದ್ದರೂ ವಿಳಂಬ ಏಕೆ? ಸಾಯೋವರೆಗೂ ನಾವು ಹೋರಾಟ ಮಾಡಬೇಕು. ಸಾಯೋವರೆಗೂ ಕುಸ್ತಿ ಅಭ್ಯಾಸ ಮಾಡಿದರೆ ಕುಸ್ತಿ ಮಾಡುವುದು ಯಾವಾಗ? ಆಂದ್ರ, ಕರ್ನಾಟಕದಲ್ಲಿ ಈ ಹೋರಾಟದಲ್ಲಿ ಹಲವರು ಸತ್ತಿದ್ದಾರೆ. ನಾವು ಶತಾಯಗತಾಯ ಪ್ರಯತ್ನ ಮಾಡಿದರೂ ಬಿಎಸ್‌ಪಿಯಿಂದ ಏನನ್ನೂ ಮಾಡಲು ಸಾಧ್ಯವಾಗಿಲ್ಲ. ಸುಪ್ರೀಂ ರ್ಕೋರ್ಟ್‌ ತೀರ್ಪನ್ನು ಮಾಯಾವತಿ ವಿರೋಧಿಸಿದ್ದಾರೆ. ನಾವು ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಲು ಲಕ್ನೋಗೆ ತೆರಳಿದರೂ ಅವರ ಭೇಟಿಗೆ ಸಾಧ್ಯವಾಗಲಿಲ್ಲ. ನಮಗೆ ಎಲ್ಲಾ ಜಿಲ್ಲೆಗಳ ಕಾರ್ಯಕರ್ತರಿಂದ ವಿರೋಧ ಬಂದಿತ್ತು. ಉತ್ತರ ಭಾರತದ ಚಮ್ಮಾರರು ಮೀಸಲಾತಿ ಪಡೆದುಕೊಂಡಿದ್ದಾರೆ. ಸಣ್ಣಪುಟ್ಟ ಜಾತಿಗಳಿಗೆ ಮೀಸಲಾತಿ ಸಿಗುವುದು ಅವರಿಗೆ ಇಷ್ಟವಿಲ್ಲ. ಉತ್ತರ ಮತ್ತು ದಕ್ಷಿಣ ಭಾರತದ ವಿವಾದಗಳೇ ಬೇರೆ ಬೇರೆ. ಇದನ್ನು ಅವರಿಗೆ ನಾವು ಮನವರಿಗೆ ಮಾಡಿದರೂ ಅವರಿಗೆ ಅರ್ಥವಾಗಿಲ್ಲ. ಮಾಯಾವತಿ ನಿಲುವು ವಿರೋಧಿಸಿ ನಾವು ರಾಜೀನಾಮೆ ನೀಡಿದ್ದೇವೆ. 25 ಜಿಲ್ಲೆಗಳ ಜಿಲ್ಲಾಧ್ಯಕ್ಷರೂ ರಾಜೀನಾಮೆ ನೀಡಿದ್ದಾರೆ ಎಂದು ವಿವರಿಸಿದರು.

ನಾವು ಹೀಗೆ ಹೋರಾಟ ಮಾಡಿದರೆ ಸಾಕಾಗುವುದಿಲ್ಲ. ಎಲ್ಲಾ ಮಂತ್ರಿಗಳು ಮತ್ತು ಶಾಸಕರ ಮನೆ ಮುಂದೆ, ಅವರ ಕ್ಷೇತ್ರಗಳಲ್ಲೇ ಕುತ್ತಿಗೆ ಹಿಡಿದು ಕೇಳಬೇಕು. ಅವರು ಈ ಸಮಸ್ಯೆ ನಮ್ಮದಲ್ಲ ಎಂದು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಬೆಂಬಲ ನೀಡದಿದ್ದರೆ ನಾವು ಸುಮ್ಮನಿರಲ್ಲ ಎಂದು ಗಟ್ಟಿ ಧ್ವನಿಯಲ್ಲಿ ಕೇಳಬೇಕು. ಮಾತಿಗೆ ತಪ್ಪಲ್ಲ ಎನ್ನುವ ಸಿದ್ದರಾಮಯ್ಯ ಈಗ ಮಾತು ತಪ್ಪುತ್ತಿದ್ದಾರೆ. ಶಾಸಕರು, ಸಚಿವರು ಮನೆ ಮುಂದೆ ಹೋರಾಟ ಹಮ್ಮಿಕೊಳ್ಳಬೇಕು. ಇದಕ್ಕೆ ಬಿಎಸ್‌ಪಿಯಿಂದ ಹೊರ ಬಂದಿರುವ ನಮ್ಮೆಲ್ಲ ಬೆಂಬಲವೂ ಇದೆ. ನಾಳೆ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿಗೆ ಅಂಗೀಕಾರ ನೀಡಬಹುದು ಎಂಬ ವಿಶ್ವಾಸ ಇಲ್ಲ. ಇದಕ್ಕೆ ಸಮಿತಿ ರಚಿಸುವ ಸಾಧ್ಯತೆ ಇದೆ ಎಂದರು.

ಇದನ್ನೂ ಓದಿ : ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಸಲಿರುವ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...

ಬಿಹಾರ-ಬಂಗಾಳದ ಬಳಿಕ ಕರ್ನಾಟಕದ ಸರತಿ; ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

ಭಾಗ-1 ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತರಾತುರಿಯಲ್ಲಿ ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಜಾರಿ ಮಾಡಿದ ಹಿಂದಿನ ದುರುದ್ದೇಶ ಬಿಹಾರದ ಬಳಿಕ ಈಗ ಪಶ್ಚಿಮ ಬಂಗಾಳದಲ್ಲಿ ಸಾಬೀತಾಗಿದೆ. ಹಿಂದಿನ ಚುನಾವಣೆಗಳಲ್ಲಿ ಕಡಿಮೆ...

ವಿಜಯ್ ಪಕ್ಷದ ಗೆಲುವಿಗೆ ಕಾರಣವಾದ ಡಿಎಂಕೆ-ಎಐಎಡಿಎಂಕೆ ಪಕ್ಷದ ವಲಸೆ ನಾಯಕರು

50 ವರ್ಷಗಳಿಂದ ಡಿಎಂಕೆ (DMK) ಮತ್ತು ಎಐಎಡಿಎಂಕೆ (AIADMK) ಎಂಬ ಎರಡು ದ್ರಾವಿಡ ಪಕ್ಷಗಳ ಅಧಿಪತ್ಯದಲ್ಲಿದ್ದ ತಮಿಳು ಮಣ್ಣಿನಲ್ಲಿ ಈಗ ಮಹತ್ವದ ಬದಲಾವಣೆ ಗಾಳಿ ಬೀಸಿದೆ. ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ...

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಎಸ್‌ಐಆರ್‌ ಕುತಂತ್ರದ ಫಲ?

ಕಳೆದ 15 ವರ್ಷದಿಂದ ಪಶ್ಚಿಮ ಬಂಗಾಳದ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಮಮತಾ ಬ್ಯಾನರ್ಜಿ ಆಡಳಿತಕ್ಕೆ 2026ರ ಚುನಾವಣಾ ಫಲಿತಾಂಶ ಬ್ರೇಕ್ ನೀಡಿದೆ.  ಪಶ್ಚಿಮ ಬಂಗಾಳದ ಒಟ್ಟು 293 ಕ್ಷೇತ್ರಗಳ ಪೈಕಿ 200ರಲ್ಲಿ ಬಿಜಿಪಿ...

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...