Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...