Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...