Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...