Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...