Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...