Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...