Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ಜಿಲ್ಲೆ ಅಳವಂಡಿ ತಾಲೂಕಿನ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...