Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...