Homeಕರ್ನಾಟಕಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

ಜಿಂದಾಲ್ ಗೆ ಭೂಮಿ ಕೊಡಲು ಒಪ್ಪಿಗೆ: ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?

- Advertisement -
- Advertisement -

ಜಿಂದಾಲ್‍ಗೆ ಜೈ- ಲೂಟಿಗಿಳಿಯಿತೇ ಮೈತ್ರಿಯ ಕೈ?: ಗದ್ದಲದಲ್ಲಿ ಗಂಟಿಗೆ ‘ಕೈ’ ಹಾಕಿದರೇ?

ಜಿಂದಾಲ್‍ಗೆ ಭೂಮಿ ಕೊಡುವ ಕ್ಯಾಬಿನೆಟ್ ನಿರ್ಧಾರವನ್ನು ಮರು ಪರಿಶೀಲಿಸಲು ನೇಮಕವಾಗಿದ್ದ ಸಚಿವ ಸಂಪುಟದ ಉಪಸಮಿತಿ ಸೋಮವಾರ ತರಾತುರಿಯಲ್ಲಿ ಸಭೆ ನಡೆಸಿ, ಕ್ಯಾಬಿನೆಟ್ ನಿರ್ಧಾರವನ್ನು ಅನುಮೋದಿಸುವ ಮೂಲಕ ಭೂಮಿ ಮಾರಲು ಶಿಫಾರಸ್ಸು ಮಾಡಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿದೆ.

3,667 ಎಕರೆ ಸರ್ಕಾರದ ಭೂಮಿಯನ್ನು ಚದರ ಅಡಿಗೆ ಕೇವಲ 35 ಪೈಸೆ ದರದಲ್ಲಿ ಮಾರಲು ಹೊರಟಿರುವುದೇ ಒಂದು ದೊಡ್ಡ ಅಕ್ರಮ. ಅದಕ್ಕೆ ಸಾಕಷ್ಟು ಪ್ರತಿರೋಧ ವ್ಯಕ್ತವಾದ ಮೇಲೆ ಮರು ಪರಿಶೀಲಿಸಲು ಗೃಹ ಸಚಿವ ಎಂ.ಬಿ. ಪಾಟೀಲ ನೇತೃತ್ವದಲ್ಲಿ ಸಚಿವ ಸಂಪುಟದ ಉಪಸಮಿತಿ ರಚನೆ ಮಾಡಿ ಹತ್ತೂ ದಿನಗಳೂ ಆಗಿಲ್ಲ. ಈ ಸಮಿತಿ ಒಂದು ಸಲ ಮಾತ್ರ ಔಪಚಾರಿಕವಾಗಿ ಸಭೆ ಸೇರಿತ್ತಷ್ಟೇ. ಈಗ ದಿಢೀರನೇ ಎರಡನೇ ಸಭೆಯಲ್ಲೇ ಭೂಮಿ ಮಾರಾಟಕ್ಕೆ ಒಪ್ಪಿಗೆ ಸೂಚಿಸಿರುವದರ ಹಿಂದೆ ದೊಡ್ಡ ಕಿಕ್‍ ಬ್ಯಾಕ್ ವಾಸನೆ ಹೊಡೆಯಲು ಶುರು ಮಾಡಿದೆ.

ಯಾವುದೇ ಒಂದು ಉಪಸಮಿತಿ ರಚನೆಯಾದಾಗ ಅದರ ಸಭೆ ನಿರ್ವಹಿಸಲು ಸಿಬ್ಬಂದಿಯ ನೇಮಕವಾಗುತ್ತದೆ. ದಾಖಲೆ ಒದಗಿಸಲು, ಸಭೆಯ ನಡಾವಳಿಗಳನ್ನು ದಾಖಲಿಸಲು ಒಬ್ಬ ಅಧಿಕಾರಿಯನ್ನು ಕಾರ್ಯದರ್ಶಿಯನ್ನಾಗಿ ನೇಮಿಸಬೇಕು. ಇದ್ಯಾವುದನ್ನೂ ಮಾಡದೇ ನಾಲ್ವರ ಸಮಿತಿಯೇ ನಿರ್ಧಾರ ತೆಗೆದುಕೊಂಡಿದ್ದು ರಾಜ್ಯದ ಜನತೆಗೆ ಬಗೆದ ದ್ರೋಗವಾಗಿದೆ.

ಸೋಮವಾರ ರಾಜ್ಯ ರಾಜಕಾರಣದಲ್ಲಿ ಬಿರುಸಿನ ಚಟುವಟಿಕೆಗಳು ನಡೆದಿರುವಾಗ ಈ ನಿರ್ಣಯ ಹೊರಬಿದ್ದಿದೆ. ಸರ್ಕಾರ ಬೀಳುವ ಸೂಚನೆ ದೊರೆತ ಕೂಡಲೇ ಸರ್ಕಾರ ಈ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದ್ದು, ಅದರ ಪರಿಣಾಮವಾಗಿ ಉಪಸಮಿತಿ ತರಾತುರಿಯಲ್ಲಿ 10-15 ನಿಮಿಷದ ಸಭೆ ನಡೆಸಿ ಈ ನಿರ್ಣಯ ಕೈಗೊಂಡಿರುವುದರ ಹಿಂದೆ ಜಿಂದಾಲ್‍ಗೆ ಲಾಭ ಮಾಡಿಕೊಡುವುದರ ಜೊತೆಗೆ ಅದರಿಂದ ದೊಡ್ಡ ಪ್ರತಿಫಲ ಪಡೆಯುವ ಉದ್ದೇಶವಿದೆ. ಅಥವಾ ಈ ಮೊದಲೇ ಜಿಂದಾಲ್ ಜೊತೆ ‘ವ್ಯವಹಾರ’ ಮುಗಿದಿರುವ ಸಾಧ್ಯತೆಯೂ ಇದೆ.

ಹೀಗಾಗಿ ಆಕಸ್ಮಿಕವಾಗಿ ಸರ್ಕಾರ ಬಿದ್ದರೂ ಜಿಂದಾಲ್‍ಗೆ ಭೂಮಿ ವರ್ಗಾಯಿಸುವ ನಿರ್ಣಯ ಕೈಗೊಂಡು ಋಣ ತೀರಿಸುವ ಕೆಲಸವನ್ನು ಸರ್ಕಾರ ಮಾಡಿದಂತಿದೆ. ಮುಂದೆ ಹೊಸ ಸರ್ಕಾರ ಬಂದರೆ ಈ ನಿರ್ಣಯವನ್ನು ಮರುಪರಿಶೀಲಿಸಬಹುದು.. ಆಗಲೂ ಜಿಂದಾಲ್ ಪರವೇ ನಿರ್ಣಯ ಇರಲಿರುವುದು ಗ್ಯಾರಂಟಿ.

ಇಲ್ಲಿ ಇನ್ನೊಂದು ಮಹತ್ವದ ವಿಷಯವನ್ನು ಗಮನಿಸಬೇಕು. ಸರ್ಕಾರದ ಎಲ್ಲ ಸಚಿವರೂ ರಾಜಿನಾಮೆ ನೀಡಿದ್ದಾರೆ ಎಂದು ಘೋಷಿಸಿದ ಮೇಲೂ ಈ ಸಭೆ ನಡೆಸಿರುವುದು ನಿಯಮಗಳಿಗೆ ವಿರುದ್ಧವಾಗಿದೆ. ತಾಂತ್ರಿಕವಾಗಿ ಈ ಸಮಿತಿಯ ಸದಸ್ಯರು ಇನ್ನೂ ಸಚಿವರಾಗಿರಬಹುದು, ಆದರೆ ಇಂತಹ ಮಹತ್ವದ ನಿರ್ಣಯ ತೆಗೆದುಕೊಳ್ಳಲು ಅವಕಾಶವಿಲ್ಲ.

ಇಲ್ಲಿ ಇನ್ನೊಂದು ಅಂಶವೆಂದರೆ, ಬಹುಷ: ಉಪಸಮಿತಿಯ ಅಧ್ಯಕ್ಷ ಎಂ.ಬಿ. ಪಾಟೀಲರೊಬ್ಬರೇ ಈ ನಿರ್ಣಯ ತೆಗೆದುಕೊಂಡು ಇತರ ಸದಸ್ಯರ ಅನಮತಿ ಪಡೆದು ಸಹಿ ಪಡೆದಿರುವ ಸಾಧ್ಯತೆ ಇದೆ. ಏಕೆಂದರೆ ಈ ಸಭೆ ನಡೆಯಿತು ಎನ್ನಲಾದ ಸಂದರ್ಭದಲ್ಲಿ ಸಮಿತಿಯ ಸದಸ್ಯರಾದ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಭೈರೇಗೌಡ, ಉಪ ಮುಖ್ಯಮಂತ್ರಿ ಪರಮೇಶ್ವರ್ ಜೊತೆಯಲ್ಲಿದ್ದು, ಅವರು ರಾಜಿನಾಮೆ ಕೊಟ್ಟ ಕಾಂಗ್ರೆಸ್ ಶಾಸಕರ ಮೇಲೆ ಯಾವ ರೀತಿಯ ಕಾನೂನು ಕ್ರಮ ಜರುಗಿಸಬಹುದು ಎಂದು ತಿಳಿಯಲು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಿದ್ದರು. ಇನ್ನೊಬ್ಬ ಸದಸ್ಯ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರಿಗೆ ಬಂದು ಇಳಿದಾಗಿನಿಂದ ಅವರ ಜೊತೆಯಲ್ಲೇ ಇದ್ದಾರೆ. ದೃಶ್ಯ ಮಾಧ್ಯಮದ ವಿಶುವಲ್ ಗಮನಿಸಿದರೆ ಇದು ಸ್ಪಷ್ಟವಾಗುತ್ತದೆ. ಇನ್ನಿಬ್ಬರು ಸದಸ್ಯರು ಭಾಗವಹಿಸಿದ್ದಕ್ಕೆ ಯಾವ ಪುರಾವೆಯೂ ಇಲ್ಲ.

ಇಂತಹ ಒಂದು ಗಂಭೀರ, ವಿವಾದಾತ್ಮಕ ವಿಷಯವನ್ನು ಯಾವುದೇ ದಾಖಲೆಗಳನ್ನು ಪರಿಶೀಲಿಸದೇ, ಅಧ್ಯಯನ ಮಾಡದೇ, ತಜ್ಞರ ಅಭಿಪ್ರಾಯ ಪಡೆಯದೇ ನಿರ್ವಹಿಸಿರುವುದರ ಬಗ್ಗೆ ಅನುಮಾನ ಎದ್ದಿವೆ. ಒಟ್ಟಿನಲ್ಲಿ ಗದ್ದಲದಲ್ಲಿ ಗಂಟು ಹೊಡೆಯುವ ಸರ್ಕಾರದ ಈ ನಿರ್ಧಾರ ಜನದ್ರೋಹವಾಗಿದೆ.

ಇದನ್ನೂ ಓದಿ: ಜಿಂದಾಲ್‍ಗೆ ಭೂಮಿ: ಇಂದಿನ ಸಚಿವ ಸಂಪುಟ ಉಪಸಮಿತಿ ಸಭೆಯಿಂದ ಜನರಿಗೆ ನ್ಯಾಯ ಸಿಗುತ್ತಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...