Homeಅಂಕಣಗಳುಪಿಕೆ ಟಾಕೀಸ್: ಕ್ರಿಸ್ತ ಪೂರ್ವದ ಗ್ರೀಸ್ ಇತಿಹಾಸ ಮತ್ತು ಪುರಾಣವನ್ನು ದೃಶ್ಯರೂಪವನ್ನಾಗಿಸಿದ ಕಕೊಯಾನೀಸ್‌ರ ಸಿನಿಮಾಗಳು

ಪಿಕೆ ಟಾಕೀಸ್: ಕ್ರಿಸ್ತ ಪೂರ್ವದ ಗ್ರೀಸ್ ಇತಿಹಾಸ ಮತ್ತು ಪುರಾಣವನ್ನು ದೃಶ್ಯರೂಪವನ್ನಾಗಿಸಿದ ಕಕೊಯಾನೀಸ್‌ರ ಸಿನಿಮಾಗಳು

- Advertisement -
- Advertisement -

ಇಫಿಗೆನಿಯಾ (1977): ಕ್ರಿಸ್ತ ಪೂರ್ವ 1250ರಲ್ಲಿ ಗ್ರೀಸ್ ಮತ್ತು ಟ್ರಾಯ್ ದೇಶಗಳ ನಡುವೆ ನಡೆದಿರಬಹುದೆಂದು ನಂಬಲಾದ ಮಹಾಸಮರದ ಕುರಿತು ಜನಪದ ಗೀತೆಗಳ ಸಂಗ್ರಹದ ಮೂಲಕ ಮುಂದೆಸಾಗಿ ಕ್ರಿ.ಪೂ 800ರಲ್ಲಿ ಹೋಮರ್ ಎಂಬ ಕುರುಡು ಹಾಡುಗಾರನ ಹಾಡುಗಳನ್ನು ದಾಖಲಿಸಲು ನಡೆದ ಪ್ರಯತ್ನದಲ್ಲಿ ಗ್ರೀಕ್ ಲಿಪಿ ಹುಟ್ಟಿತು ಎನ್ನಲಾಗುತ್ತದೆ. ಹೀಗೆ ಹುಟ್ಟಿಕೊಂಡ ಮೊದಲ ಮಹಾಕಾವ್ಯಗಳೇ ಇಲಿಯಡ್ ಮತ್ತು ಒಡಿಸ್ಸಿ (ಗ್ರೀಕ್ ಟ್ರಾಜಿಡೀಸ್).

ಇಲಿಯಡ್ ಮತ್ತು ಒಡಿಸ್ಸಿ ಮಹಾಕಾವ್ಯಗಳು ಹಾಡುಗಳ ರೂಪದಲ್ಲಿದ್ದು, ಗ್ರೀಕ್ ಯೋಧರ ವೀರತ್ವ ಹಾಗೂ ತ್ಯಾಗ ಬಲಿದಾನಗಳ ಕುರಿತ ದಾಖಲೆಯಾಗಿದೆ. ಹತ್ತು ವರ್ಷಗಳ ಸತತವಾಗಿ ಸಾಗಿದ ಮಹಾಸಮರ ಶುರುವಾಗಿದ್ದಕ್ಕೆ ಕಾರಣ: ಗ್ರೀಸ್ ದೇಶದ ರಾಜ ಆಗಮೆಮ್‌ನೊನ್‌ನ (ಮಿಕೇನ್ ರಾಜ್ಯ) ಸಹೋದರ ಮೆನೆಲಾಯ್‌ನ (ಸ್ಪಾರ್ಥ ರಾಜ್ಯ) ಹೆಂಡತಿಯಾದ ಮಹಾಸುಂದರಿ ಹೆಲೆನಾಳನ್ನು ಟ್ರಾಯ್ ದೇಶದ ರಾಜಕುಮಾರ ಪಾರೀಸ್ ಅಪಹರಿಸಿಕೊಂಡುಹೋಗಿರುವುದು.

ಇಫಿಗೆನಿಯಾ ಸಿನಿಮಾ ಶುರುವಾಗುವುದು ಹೆಲೆನಾಳ ಅಪಹರಣದ ಪರಿಣಾಮವಾಗಿ ಆಗಮೆಮ್‌ನೊನ್ ಮತ್ತು ಮೆನೆಲಾಯ್ ಟ್ರಾಯ್ ದೇಶದ ವಿರುದ್ಧ ಯುದ್ಧ ಸಾರಿ ಸಾವಿರಕ್ಕೂ ಹೆಚ್ಚಿನ ಹಡಗುಗಳು ಮತ್ತು ಸಾವಿರಾರು ಸೈನಿಕರು ಟ್ರಾಯ್‌ನತ್ತ ಸಾಗಲು ಸಿದ್ಧರಾಗುವುದರಿಂದ. ಆದರೆ ಆಗಮೆಮ್‌ನೊನ್ ಬೇಟೆಯಾಡುವಾಗ ಪವಿತ್ರವಾದ ಸ್ಥಳದಲ್ಲಿ ಜಿಂಕೆಯನ್ನು ಕೊಂದಿದ್ದರಿಂದ ಪಡೆಯುವ ಶಾಪದಿಂದ ಹಡಗುಗಳು ಮುಂದೆಸಾಗಲು ಗಾಳಿ ಇಲ್ಲದಂತಾಗುತ್ತದೆ.

ಇಫಿಗೆನಿಯಾ

ಆಗ ದೈವವಾಣಿಯಾಗಿ ಬರುವ ಪರಿಹಾರ ಆಗಮೆಮ್‌ನೊನ್‌ನ ಮೊದಲ ಮುದ್ದಿನ ಮಗಳಾದ ಇಫಿಗೆನಿಯಾಳನ್ನು ಬಲಿ ನೀಡಿದರೆ ಮಾತ್ರ ಟ್ರಾಯ್‌ನತ್ತ ಹಡಗುಗಳು ಸಾಗಲು ಗಾಳಿ ಬೀಸುತ್ತದೆ ಎಂಬುದು. ಇದನ್ನು ಕೇಳಿ ಆತಂಕ ಮತ್ತು ಧರ್ಮಸಂಕಟದಲ್ಲಿ ಆಗಮೆಮ್‌ನೊನ್ ಸಿಲುಕುತ್ತಾನೆ. ಗ್ರೀಸಿನ ಗೌರವಕ್ಕಾಗಿ ತನ್ನ ಮುದ್ದಿನ ಮಗಳನ್ನು ಕೊಲ್ಲುವ ಸಂದಿಗ್ಧತೆಯಲ್ಲಿ ಸಿಕ್ಕಿ ಒದ್ದಾಡುತ್ತಾನೆ.

ಸಾವಿರಾರು ಸೈನಿಕರ ಯುದ್ಧಾಕ್ರೋಶದ ಮುಂದೆ ತಲೆ ಬಾಗುವ ಆಗಮೆಮ್‌ನೊನ್ ಇಫಿಗೆನಿಯಾಳಿಗೆ ತಾನಿರುವ ಸ್ಥಳಕ್ಕೆ ಬರುವಂತೆ ಸುದ್ದಿ ಕಳಿಸುತ್ತಾನೆ. ಸುದ್ದಿ ಕೊಂಡೊಯ್ಯುವವನ ಬಳಿಯಲ್ಲಿ ’ಇಫಿಗೆನಿಯಾಳಿಗೆ ಮತ್ತು ನೆರೆಯ ರಾಜ್ಯದ ಆಕಿಲೀಸ್‌ನಿಗೆ ಮದುವೆಯೆಂದು’ ಸುಳ್ಳು ಹೇಳಲು ತಿಳಿಸಿರುತ್ತಾನೆ. ಇದನ್ನು ನಿಜವೆಂದುಕೊಂಡ ಆಗಮೆಮ್‌ನೊನ್‌ನ ಹೆಂಡತಿ ಕ್ಲಿಟೆಮ್ನೆಸ್ಟ್ರಾ ತನ್ನ ಮಕ್ಕಳೊಂದಿಗೆ ಬರುತ್ತಾಳೆ.

ಈ ಬರಸಿಡಿಲಿನಂತ ನಿರ್ಧಾರದಿಂದ ಆಗಮೆಮ್‌ನೊನ್ ತಳಮಳ ಸಿನಿಮಾದ ಮೊದಲ ಭಾಗ ಹಿಡಿದಿಟ್ಟರೆ, ಒಮ್ಮೆ ಮಗಳು ಇಪಿಜೆನಿಯಾ ಮತ್ತು ಹೆಂಡತಿ ಕ್ಲಿಟೆಮ್ನೆಸ್ಟ್ರಾ ಬಂದ ನಂತರ ಈ ಸುದ್ದಿ ತಿಳಿದು ಉಂಟಾಗುವ ಸಂಘರ್ಷ ಮತ್ತು ಆಗಮೆಮ್‌ನೊನ್ ಅಸಹಾಯಕತೆಯನ್ನು ಸಿನಿಮಾದ ಕೊನೆಯವರೆಗೂ ಕಟ್ಟಲಾಗಿದೆ.

ಸಾವಿರಾರು ಸೈನಿಕರು ಯುದ್ದದ ರೋಷಾಗ್ನಿಯಿಂದ ಇಫಿಗೆನಿಯಾಳ ಬಲಿಗಾಗಿ ಕೂಗಾಟ ಕಿರುಚಾಟಗಳ ಮಧ್ಯೆ, ಇಪಿಜೆನಿಯಾಳಿಗೆ ಬೇರೆ ದಾರಿಯಿಲ್ಲದೆ ’ಮದುವೆಗೆಂದು ಬಂದೆ, ಈ ಸಾವೇ ನನ್ನ ಮದುವೆ, ನಿಮ್ಮ ಯುದ್ದದ ಗೆಲ್ಲುವೆ ನನ್ನ ಮಕ್ಕಳು’ ಎಂದು ಹೇಳಿ ಬಲಿಪೀಠದತ್ತ ಸಾಗುತ್ತಾಳೆ.

ಒಂದು ಕಡೆ ಆಸಹಾಯಕತೆಯಲ್ಲಿ ನಿಂತು ನೋಡುತ್ತಿರುವ ಆಗಮೆಮ್‌ನೊನ್, ಕೋಪದಲ್ಲಿ ಕುದಿಯುತ್ತಿರುವ ಕ್ಲಿಟೆಮ್ನೆಸ್ಟ್ರಾ ಇನ್ನೊಂದು ಕಡೆ. ಕೊನೆಗೆ ಗಾಳಿ ಬೀಸಲಾರಂಭಿಸುತ್ತದೆ. ಸೈನಿಕರು ಮತ್ತು ಹಡಗುಗಳು ಯುದ್ಧದ ಉತ್ಸಾಹದಿಂದ ಟ್ರಾಯ್‌ನತ್ತ ಸಾಗುತ್ತಾರೆ. ಕ್ಲಿಟೆಮ್ನೆಸ್ಟ್ರಾಳ ಕೋಪ ಸೇಡಿನ ರೂಪಾಂತರವಾಗುವುದೆಂಬ ಊಹೆಯಲ್ಲಿಯೇ ಸಿನಿಮಾದ ಅಂತ್ಯ.

ಎಲೆಕ್ಟ್ರಾ (1962): ಇಫಿಗೆನಿಯಾಳ ಬಲಿಯ ನಂತರ ಆಗಮೆಮ್‌ನೊನ್ ಟ್ರಾಯ್‌ನ ಮೇಲೆ ಮಾಡಿದ ಹತ್ತು ವರ್ಷಗಳ ಮಹಾಸಮರವನ್ನು ಮುಗಿಸಿ ತನ್ನ ರಾಜ್ಯಕ್ಕೆ ಹಿಂದಿರುಗುತ್ತಾನೆ. ಸ್ನಾನದ ಕೋಣೆಯಲ್ಲಿ ಹೆಂಡತಿ ಕ್ಲಿಟೆಮ್ನೆಸ್ಟ್ರಾ ಮತ್ತು ಅವಳ ಪ್ರಿಯಕರ ಎಗೀಸ್‌ನ ಸಹಾಯದಿಂದ ಆಗಮೆಮ್‌ನೊನ್‌ನನ್ನು ಕೊಲ್ಲುವುದರ ಮೂಲಕ ಸೇಡನ್ನು ತೀರಿಸಿಕೊಳ್ಳುತ್ತಾಳೆ.

ಕ್ಲಿಟೆಮ್ನೆಸ್ಟ್ರಾ ಆಗಮೆಮ್‌ನೊನ್‌ನ ಮೇಲೆ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಪ್ರಿಯಕರನೊಂದಿಗೆ ಇರುವುದನ್ನು ಗಮನಿಸುವ ಆಕೆಯ ಮಗ ಒರೆಸ್ಟೆಸ್ ಹಲವು ವರ್ಷಗಳ ಮೊದಲೇ ಅರಮನೆಯಿಂದ ದೂರವಾಗಿ ತನ್ನ ಗುರುವಿನ ಬಳಿ ರಾಜತಂತ್ರಗಳನ್ನು ಕಲಿಯುತ್ತಿರುತ್ತಾನೆ. ಅರಮನೆಯಲ್ಲಿ ಉಳಿದಿದ್ದು ಮಗಳು ಎಕ್ಟ್ರಾ.

ಆಗಮೆಮ್‌ನೊನ್‌ನ ಸಾವಿನ ನಂತರ ಮಗಳನ್ನು ಅವಮಾನಿಸಲು, ಅವಳ ಕೂದಲನ್ನು ಕತ್ತರಿಸಿ ಬಡ ಮುದಿ ರೈತನೊಂದಿಗೆ ಮದುವೆ ಮಾಡಿಸಿ ಕ್ಲಿಟೆಮ್ನೆಸ್ಟ್ರಾ ಮತ್ತು ಪ್ರಿಯಕರ ಎಗೀಸ್ ಆಕೆಯನ್ನು ರಾಜ್ಯದಿಂದ ಹೊರತಳ್ಳುತ್ತಾರೆ. ಇದರಿಂದ ನೊಂದ ಎಲೆಕ್ಟ್ರಾ ತನ್ನ ತಮ್ಮ ಒಂದು ದಿನ ಬಂದೇ ಬರುತ್ತಾನೆಂಬ ನಂಬಿಕೆಯಲ್ಲಿಯೇ ಹಳ್ಳಿಯೊಂದರಲ್ಲಿ ಬದುಕುತ್ತಿರುತ್ತಾಳೆ, ಊರಿನ ಹೆಂಗಸರೆಲ್ಲಾ ಎಲೆಕ್ಟ್ರಾಳಿಗೆ ಸಹಾಯ ಮಾಡುತ್ತಿರುತ್ತಾರೆ.

ಕೊನೆಗೊಂದು ದಿನ ತಮ್ಮ ಒರೆಸ್ಟೆಸ್‌ನ ಕಡೆಯವರೆಂದು ಹೇಳಿಕೊಂಡು ಬರುವ ಇಬ್ಬರು ಅಪರಿಚಿತರು ಎಲೆಕ್ಟ್ರಾಳನ್ನು ಭೇಟಿಯಾಗುತ್ತಾರೆ. ಆಗ ತನ್ನ ತಂದೆ ಆಗಮೆಮ್‌ನೊನ್‌ನ ಸಹಾಯಕನಾಗಿದ್ದ ಕುರುಡ ಮುದುಕನೊಬ್ಬನ ಸಹಾಯದಿಂದ, ಆ ಇಬ್ಬರು ಅಪರಿಚಿತರಲ್ಲೊಬ್ಬ ಎಲೆಕ್ಟ್ರಾಳ ತಮ್ಮ ಒರೆಸ್ಟೆಸ್ ಎಂಬ ಸತ್ಯ ತಿಳಿಯುತ್ತದೆ.

ಎಲೆಕ್ಟ್ರಾ

ಹೀಗೆ ಒಂದಾದ ಒರೆಸ್ಟೆಸ್ ಮತ್ತು ಎಲೆಕ್ಟ್ರಾ ತಮ್ಮ ಮುಂದಿನ ಯೋಜನೆಯನ್ನು ರೂಪಿಸುತ್ತಾರೆ. ಅದರಂತೆ ರಾತ್ರಿ ಸಮಯದಲ್ಲಿ ಅರಮನೆಯ ಹೊರಾಂಗಣದಲ್ಲಿ ಕುಡಿದು ಮೋಜು ಮಾಡುತ್ತಿರುವ ಎಗೀಸ್‌ನ ಕೂಟಕ್ಕೆ, ಒರೆಸ್ಟೆಸ್ ತನ್ನ ಗೆಳೆಯನೊಂದಿಗೆ ದಾರಿಹೋಕರಂತೆ ಸೇರಿಕೊಳ್ಳುತ್ತಾರೆ. ಎಗೀಸ್ ಒರೆಸ್ಟೆಸ್‌ನ ಪಕ್ಕದಲ್ಲೇ ಕುಳಿತುಕೊಳ್ಳುತ್ತಾನೆ. ಕುಡಿದು ಮೈಮರೆತ ಕ್ಷಣದಲ್ಲಿ ಎಗೀಸ್‌ನ ಕೊಲೆಯಾಗುತ್ತಾನೆ.

ಎಗೀಸ್‌ನ ಹೆಣವನ್ನು ಅಕ್ಕ ಎಲೆಕ್ಟ್ರಾಳ ಮನೆಯ ಮುಂದೆ ತಂದಿಡುತ್ತಾನೆ. ಎಲೆಕ್ಟ್ರಾಳ ಸೇಡು ಅಲ್ಲಿಗೆ ತಣಿಯುತ್ತದೆ. ಇದಾದ ತುಸು ಸಮಯಕ್ಕೆ ತಾಯಿ ಕ್ಲಿಟೆಮ್ನೆಸ್ಟ್ರಾ ಎಲೆಕ್ಟ್ರಾಳ ಮನೆಗೆ ಬರುತ್ತಾಳೆ. ಇಬ್ಬರ ನಡುವಿನ ತಪ್ಪು-ಸರಿ ವಾಗ್ವಾದಗಳ ನಂತರ, ಪ್ರಿಯಕರನನ್ನು ಕಾಣಲು ಮನೆಯೊಳಗೆ ಬರಲು, ಎಲೆಕ್ಟ್ರಾ ಮತ್ತು ಒರೆಸ್ಟೆಸ್ ಸೇರಿ ತಾಯಿ ಕ್ಲಿಟೆಮ್ನೆಸ್ಟ್ರಾಳನ್ನು ಕೊಲ್ಲುತ್ತಾರೆ.

ಈ ಭೀಕರ ಸಂದರ್ಭವನ್ನು ಊರಿನ ಜನರೆಲ್ಲ ತಿಳಿದು ಆಘಾತದಲ್ಲಿರುತ್ತಾರೆ. ಮನೆಯಿಂದ ಹೊರ ಬಂದು ಅಕ್ಕ-ತಮ್ಮರಿಬ್ಬರೂ ನೋವು ಮತ್ತು ದುಃಖದ ಭಾವನೆಯಿಂದ ಪರಸ್ಪರ ವಿರುದ್ಧ ದಿಕ್ಕುಗಳಿಗೆ ಹೋಗುವ ಮೂಲಕ ಸಿನಿಮಾ ಅಂತ್ಯವಾಗುತ್ತದೆ.

ಮಿಕೇಲ್ ಕಕೊಯಾನೀಸ್: ಮಿಕೇಲ್ ಗ್ರೀಸ್ ದೇಶದ ಪ್ರಮುಖ ನಿರ್ದೇಶಕರಲ್ಲೊಬ್ಬರು. ಇವರ ಮುಖ್ಯ ಕಥಾವಸ್ತುಗಳೆಂದರೆ ಇತಿಹಾಸ, ಪುರಾಣಗಳು, ಗ್ರೀಕ್ ಟ್ರಾಜಿಡಿಗಳು ಹಾಗೂ ಹೆಣ್ಣು ಮತ್ತು ಸಮಾಜದ ನಡುವಿನ ಸಂಘರ್ಷಗಳು.

ಮಿಕೇಲ್ ಬ್ರಿಟನ್‌ನಲ್ಲಿ ಓದಿ ವಕೀಲರನ್ನಾಗಿಸಲು ಅವರ ತಂದೆ ಇಚ್ಛಿಸಿದ್ದರು. ಆದರೆ ಮಿಕಾಲ್‌ರು ಬಿಬಿಸ್ ವರ್ಲ್ಡ್ ಸರ್ವಿಸ್ಸ್ ಸಂಸ್ಥೆಗೆ ಕೆಲಸಕ್ಕೆ ಸೇರಿಕೊಳ್ಳುತ್ತಾರೆ. ಅಲ್ಲಿಂದ ಮಿಕಾಲ್‌ರಿಗೆ ದೃಶ್ಯದ ಮಾಧ್ಯಮದ ಪರಿಚಯವಾಯಿತು.

ಇವರು ಮಾಡಿದ ಯೂರಿಪಿಡೀಸ್‌ರ ಟ್ರಿಯಾಲಜಿಯಲ್ಲಿ ಎಲೆಕ್ಟ್ರಾ (1962), ದಿ ಟ್ರೋಜನ್ ವಿಮೆನ್(1971) ಮತ್ತು ಇಪಿಜೆನಿಯಾ (1977) ಸಿನಿಮಾಗಳಿವೆ. ದಿ ಟ್ರೋಜನ್ ವಿಮೆನ್ ಸಿನಿಮಾದಲ್ಲಿ ಟ್ರಾಯ್ ನಗರದ ಧ್ವಂಸದ ನಂತರದಲ್ಲಿ ಯುದ್ಧದಿಂದ ಕದಡಿದ ಮಹಿಳೆಯರ ಮುಖ್ಯವಾದ ಕಥಾನಕವಿದೆ.

ಮಿಕೇಲ್ ಕಕೊಯಾನೀಸ್

ಮಿಕೇಲ್, ನಾಟಕಗಳಾಗಿದ್ದ ಗ್ರೀಕ್ ಟ್ರಾಜಿಡಿಗಳನ್ನು ಅತ್ಯಂತ ಬಿಗಿಯಾಗಿ ದೃಶ್ಯರೂಪಕ್ಕೆ ತಂದಿದ್ದಾರೆ. ಕಕೊಯಾನೀಸ್‌ರ ಸಿನಿಮಾಟೋಗ್ರಾಫರ್ ವಲ್ಟರ್ ಲೆಸೆಲ್ಲಿ ತಮ್ಮ ಸಂದರ್ಶನವೊಂದರಲ್ಲಿ ಹೇಳುವಂತೆ, ’ಮಿಕೇಲ್ ಅವರು ಸ್ಕ್ರಿಪ್ಟ್‌ನಲ್ಲಿ ಪ್ರತಿ ಪುಟ್ಟ ವಿವರಣೆಗಳನ್ನು ಬರೆದುಕೊಂಡಿರುತ್ತಾರೆ. ಪ್ರತಿ ಶಾಟ್ ಹೇಗಿರಬೇಕೆಂದು ಶೂಟಿಂಗ್‌ಗೆ ಬರುವ ಮೊದಲೇ ನಿರ್ಧರಿಸಲಾಗಿರುತ್ತದೆ.

ನಟನಟಿಯರ ಹಾವ-ಭಾವಗಳು, ಭಂಗಿಗಳು, ಕ್ಯಾಮರಾದ ಮುಂದೆ ಅವರ ಚಲನವಲನಗಳನ್ನು ನಿರ್ದೇಶಕರ ಮಿಕೇಲ್‌ರ ಇಚ್ಛೆಯಂತೆ ನಡೆಯುತ್ತಿತ್ತು. ಯಾವುದೇ ರೀತಿಯ ಗೊಂದಲ, ಬದಲಾವಣೆ ಇರುತ್ತಿರಲಿಲ್ಲ.’

ಮಿಕೇಲ್ ಅವರು ನಿರ್ದೇಶನ ಮಾಡುತ್ತಿದ್ದ ಕಾಲದಲ್ಲಿ ಫಿಲ್ಮ್‌ನಲ್ಲಿ ಶೂಟಿಂಗ್ ಮಾಡುತ್ತಿದ್ದ ಕಾರಣದಿಂದಲೇ ಎಲ್ಲವನ್ನು ಮೊದಲೇ ಪ್ಲಾನ್ ಮಾಡಬೇಕಿತ್ತು. ಯಾವುದೇ ಒಂದು ತಪ್ಪಾದರೂ ಅಥವಾ ಅನಗತ್ಯ ಶಾಟ್‌ನಿಂದ ಫಿಲ್ಮ್ ರೀಲ್ ವ್ಯರ್ಥವಾಗುತ್ತಿತ್ತು. ಇದೇ ಕಾರಣದಿಂದ ನಿರ್ದೇಶಕ ಮಿಕೇಲ್ ಅವರಿಗೆ ತಮ್ಮ ಸಿನಿಮಾಗಳ ದೃಶ್ಯಗಳ ಮೇಲಿರುವ ಸ್ಪಷ್ಟತೆ ಮತ್ತು ಹಿಡಿತವನ್ನು ಅವರ ಎಲ್ಲ ಸಿನಿಮಾಗಳಲ್ಲಿ ನೋಡಬಹುದು.

ಮಿಕೇಲ್ ಗ್ರೀಕ್ ಸಿನಿಮಾಲೋಕದಲ್ಲಿ ಮಾಸ್ಟರ್. ಇವರ ಎಲ್ಲ ಸಿನಿಮಾಗಳು ಸಿನಿಮಾ ರಸಿಕರಿಗೆ ರಸದೌತಣವಾದರೆ, ಸಿನಿಮಾ ವಿದ್ಯಾರ್ಥಿಗಳಿಗೆ ಸಿನಿಮಾವನ್ನು ಕಲಿಸುವ ಪಠ್ಯಪುಸ್ತಕಗಳು.


ಇದನ್ನೂ ಓದಿ: ಪಿಕೆ ಟಾಕೀಸ್: ಕೌಟುಂಬಿಕ ಕರಾಳತೆಯನ್ನು ಬಿಂಬಿಸುವ ಯಾನಿಸ್‌ನ ವರ್ಣರಹಿತ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: 114 ಸ್ಥಾನಗಳೊಂದಿಗೆ ಪ್ರಮುಖ ಪಕ್ಷವಾಗಿ ಹೊರಹೊಮ್ಮಿದ ಎಐಎಂಐಎಂ

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಖಿಲ ಭಾರತ ಮಜ್ಲಿಸ್ ಇ ಇತ್ತೆಹಾದುಲ್ ಮುಸ್ಲಿಮೀನ್ ಪಕ್ಷವು (ಎಐಎಂಐಎಂ) 114 ಸ್ಥಾನಗಳನ್ನು ಗೆದ್ದು, 2017 ರ ಸ್ಥಳೀಯ ಸಂಸ್ಥೆ ಚುನಾವಣೆಗಳಿಗಿಂತ ತನ್ನ ಸಂಖ್ಯೆಯನ್ನು ತೀವ್ರವಾಗಿ ಹೆಚ್ಚಿಸಿಕೊಂಡಿದೆ....

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅನೈತಿಕ ಪೊಲೀಸ್‌ಗಿರಿ : ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಬಂಧನ

ವಲಸೆ ಕಾರ್ಮಿಕರ ಶೆಡ್‌ಗಳಿಗೆ ತೆರಳಿ ಅವರ ಗೌಪ್ಯ ದಾಖಲೆಗಳನ್ನು ಪಡೆದು ಪೌರತ್ವ ಪರಿಶೀಲಿಸುವ ಮೂಲಕ ಅನೈತಿಕ ಪೊಲೀಸ್‌ಗಿರಿ ಮಾಡುತ್ತಿದ್ದ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ ಪೊಲೀಸರು ಶುಕ್ರವಾರ (ಜ.16) ತಡರಾತ್ರಿ ಬಂಧಿಸಿದ್ದಾರೆ...

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...