Homeಮುಖಪುಟಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

ಲಿಂಗ ಸಮಾನತೆ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಜಾಹೀರಾತಿಗೆ ಭರಪೂರ ಮೆಚ್ಚುಗೆ

- Advertisement -
- Advertisement -

ಲಿಂಗ ಸಮಾನತೆ ಸಂದೇಶ ಸಾರಿದ ಕ್ಯಾಡ್‌ಬರಿ ಡೈರಿಮಿಲ್ಕ್‌ ಚಾಕೋಲೆಟ್ ಜಾಹೀರಾತಿಗೆ ಪ್ರೇಕ್ಷಕರು ಭರಪೂರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಕ್ರಿಕೆಟ್‌ ಎಂದರೆ ಪುರುಷರಷ್ಟೇ ಎಂದು ಭಾವಿಸಿರುವ ಸಮಾಜದಲ್ಲಿ ಕ್ಯಾಡ್‌ಬರಿಯ ನೂತನ ಜಾಹೀರಾತು ಲಿಂಗ ಸಮಾನತೆಯ ಆಶಯವನ್ನು ಎತ್ತಿ ಹಿಡಿದಿದೆ. ಜಾಹೀರಾತು ವೀಕ್ಷಿಸಿದ ಸಹಸ್ರಾರು ಜನರು ಭಾವುಕರಾಗಿದ್ದಾರೆ. ಈ ಜಾಹೀರಾತನ್ನು ನೋಡಿ ಕಣ್ತುಂಬಿ ಬಂತು ಎಂದು ಅನೇಕರು ಸಾಮಾಜಿಕ ಮಾಧ್ಯಮಗಳಲ್ಲಿ ಕಮೆಂಟ್ ಮಾಡಿದ್ದಾರೆ.

ಏನಿದು ಜಾಹೀರಾತು?

ನೆನಪುಗಳೊಂದಿಗೆ ಬೆರೆತ ನಗು-ಅಳು ಮಿಶ್ರಿತ ಭಾವ (ನಾಸ್ಟಾಲ್ಜಿಯಾ) ಸೃಷ್ಟಿಸಿರುವ ಈ ಜಾಹೀರಾತು, 90ರ ದಶಕ ಹಾಗೂ 2021ನೇ ಇಸವಿಯ ನಡುವೆ ಆಗಿರುವ ಬದಲಾವಣೆಯನ್ನು ಒಳಗೊಂಡಿದೆ. ಈಗಿನ ಜಾಹೀರಾತು ಕ್ರಿಕೆಟ್‌ನಲ್ಲಿ ಮಹಿಳೆಯರೂ ಸಾಧನೆ ಮಾಡಿರುವುದನ್ನು ಬಿಂಬಿಸುತ್ತದೆ. ಹಿಂದೆ ಕೇವಲ ಪುರುಷರಷ್ಟೇ ಕ್ರೀಡಾಂಗಣದ ಮೇಲೆ ಹಿಡಿತ ಸಾಧಿಸಿದ್ದರು. 2021ನೇ ಇಸವಿಯಲ್ಲಿ ಹೆಣ್ಣುಮಕ್ಕಳೂ ಸಾಧನೆಗೈದಿದ್ದಾರೆ ಎಂಬ ಸಮಾನತೆಯ ಸಂದೇಶವನ್ನು ಕ್ಯಾಡ್‌ಬರಿ ಕಟ್ಟಿಕೊಟ್ಟಿರುವ ರೀತಿಗೆ ಎಲ್ಲರೂ ಫಿದಾ ಆಗಿದ್ದಾರೆ.

90ರ ದಶಕದ ಹಿನ್ನೆಲೆಯ ಹಳೆಯ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಬ್ಯಾಟ್‌ಮನ್‌ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆತ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವತಿ ಕ್ಯಾಡ್‌ಬರಿ ಡೈರಿ ಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾಳೆ. ಮೈದಾನದೊಳಗೆ ಯುವತಿ ಬಾರದಂತೆ ತಡೆಯಲು ಸೆಕ್ಯುರಿಟಿ ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವತಿಯ ಉತ್ಸಾಹವನ್ನು ನೋಡಿ ಖುಷಿ ಪಡುತ್ತಾರೆ”.

2021ರ ಕ್ಯಾಡ್‌ಬರಿ ಜಾಹೀರಾತು ಹೀಗಿದೆ: “ಶತಕದ ಹೊಸ್ತಿಲಿನಲ್ಲಿರುವ ಆಟಗಾರ್ತಿ ಕೊನೆಯ ಎಸೆತದಲ್ಲಿ ಸಿಕ್ಸ್‌ ಹೊಡೆಯಲೇ ಬೇಕಿದೆ. ಆಕೆ ಬ್ಯಾಟ್‌ ಬೀಸಿದಾಗ ಗಾಳಿಯಲ್ಲಿ ತೂರಿದ ಬಾಲ್‌, ಫೀಲ್ಡರ್‌ ಕೈಗೆ ಸಿಗುತ್ತದೆ ಎಂದು ಭಾವಿಸಿರುವಾಗಲೇ ಅದು ಬೌಂಡರಿ ದಾಟಿರುತ್ತದೆ. ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ಯುವಕ ಕ್ಯಾಡ್‌ಬರಿ ಡೈರಿಮಿಲ್ಕ್ ತಿನ್ನುತ್ತಾ, ಖುಷಿಯಲ್ಲಿ ಓಡೋಡಿ ಬರುತ್ತಾನೆ. ಸೆಕ್ಯುರಿಟಿ ತಡೆಯಲು ಯತ್ನಿಸಿದರೂ ಸಾಧ್ಯವಾಗುವುದಿಲ್ಲ. ಎಲ್ಲಾ ಪ್ರೇಕ್ಷಕರೂ ಯುವಕನ ಖುಷಿಯನ್ನು ನೋಡಿ ತಾವೂ ಖುಷಿಪಡುತ್ತಾರೆ”

ತನ್ನ ಟ್ವಿಟ್ಟರ್ ಖಾತೆಯಲ್ಲಿ ವಿಡಿಯೊವನ್ನು ಹಂಚಿಕೊಂಡಿರುವ  ಕ್ಯಾಡ್‌ಬರಿ ಡೈರಿ ಮಿಲ್ಕ್‌ ಸಂಸ್ಥೆಯು, “ಯುವಜನರಿಗೆ ಮಾದರಿಯಾಗಿ ಹೊರಹೊಮ್ಮಿರುವ ನಮ್ಮ ಯುವತಿಯರ ಅದ್ಭುತ ಯಶಸ್ಸನ್ನು ಆಚರಿಸಲು, ಖುಷಿಪಡಲು ಕ್ಯಾಡ್‌ಬರಿ ಡೈರಿಮಿಲ್ಕ್‌‌ ಸವಿಯೋಣ” ಎಂದು ಹೇಳಿದೆ.


ಇದನ್ನೂ ಓದಿ: ಹೃತಿಕ್, ಕತ್ರಿನಾ ಆಡ್‌ಗೆ ಹಣ ಸುರಿಯುವುದು ಬಿಟ್ಟು ಡೆಲಿವೆರಿ ಬಾಯ್‌ಗಳಿಗೆ ಸಮರ್ಪಕ ವೇತನ ನೀಡಿ: ಜೊಮ್ಯಾಟೊ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...